/newsfirstlive-kannada/media/post_attachments/wp-content/uploads/2025/04/marriage-cancelled2.jpg)
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಇಡೀ ದೇಶವೇ ಖಂಡನೆ ವ್ಯಕ್ತಪಡಿಸುತ್ತಿದೆ. ಕೇವಲ ಹಿಂದೂಗಳನ್ನೇ ಟಾರ್ಗೆಟ್ ಮಾಡಿ 26 ಅಮಾಯಕ ಪ್ರವಾಸಿಗರನ್ನು ಕ್ರೂರವಾಗಿ ಹತ್ಯೆಗೈದ್ದರು ಪಾಕಿಸ್ತಾನಿ ಪಾಪಿಗಳು.
ಇದನ್ನೂ ಓದಿ:ಪಾಕ್ ಪ್ರಜೆಗಳಿಗೆ ಭಾರತ ತೊರೆಯಲು ನಾಳೆಯೇ ಡೆಡ್ಲೈನ್; ಕರ್ನಾಟಕದಲ್ಲಿ ಎಷ್ಟು ಮಂದಿ ಇದ್ದಾರೆ..?
ಆದ್ರೆ, ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಖಂಡಿಸಿ ಭಾರತ ಸರ್ಕಾರ ಪಾಕಿಸ್ತಾನ ವಿರುದ್ಧ ಪ್ರತೀಕಾರದ ನಿರ್ಣಯಗಳನ್ನ ಕೈಗೊಂಡಿದೆ. ಭಾರತದಲ್ಲಿ ವಾಸವಾಗಿರೋ ಪಾಕಿಸ್ತಾನಿಗಳು ವಾಪಸ್ ಹೋಗುವಂತೆ 48 ಗಂಟೆಗಳ ಕಾಲ ಗುಡುವು ಕೊಟ್ಟಿದ್ದಾರೆ. ಹೀಗಾಗಿ ಎರಡು ದೇಶಗಳ ನಡುವಿನ ಅಟ್ಟಾರಿ-ವಾಘಾ ಗಡಿ ಬಂದ್ ಮಾಡಲಾಗಿದೆ.
ಗಡಿ ಬಂದ್ ಮಾಡಿದ್ದರಿಂದ ರಾಜಸ್ಥಾನದ ವ್ಯಕ್ತಿಯೊಬ್ಬ ಮದುವೆಯೇ ಕ್ಯಾನ್ಸಲ್ ಆಗಿದೆ. ರಾಜಸ್ಥಾನದ ನಿವಾಸಿ ಶೈತಾನ್ ಸಿಂಗ್, ತನ್ನ ಪ್ರೇಯಸಿಯನ್ನು ಮದುವೆಯಾಗಲು ಈ ವಾರ ಪಾಕಿಸ್ತಾನಕ್ಕೆ ಪ್ರಯಾಣಿಸಲು ಸಿದ್ಧತೆ ನಡೆಸುತ್ತಿದ್ದ. ಹೀಗಾಗಿ ಮದುವೆಯ ಖುಷಿಯಲ್ಲಿದ್ದ ಶೈತಾನ್ ಸಿಂಗ್ ಆಘಾತವುಂಟಾಗಿದೆ. ಪಾಕಿಸ್ತಾನದ ಯುವತಿಯ ಜೊತೆ ಮದುವೆಯಾಗಲು ಅಟ್ಟಾರಿ ಗಡಿ ದಾಟಲು ಬರಾತ್ನೊಂದಿಗೆ ಹೋಗಿದ್ದರು. ಆದರೆ, ಗಡಿಯನ್ನು ಬಂದ್ ಮಾಡಿರುವುದರಿಂದ ಅವರನ್ನು ವಾಪಾಸ್ ಮನೆಗೆ ಕಳುಹಿಸಲಾಗಿದೆ. ಇದರಿಂದ ಅವರ ಮದುವೆ ಮುರಿದುಬಿದ್ದಿದೆ.
ಸದ್ಯ ಮದುವೆವನ್ನು ಮುಂದೂಡಿದ ಶೈತಾನ್ ಸಿಂಗ್ ಹೇಳಿದ್ದೇನು?
ಭಯೋತ್ಪಾದಕರು ಮಾಡಿದ್ದು ತಪ್ಪು, ಗಡಿ ಮುಚ್ಚಿರುವುದರಿಂದ ನಮಗೆ (ಪಾಕಿಸ್ತಾನಕ್ಕೆ) ಹೋಗಲು ಅವಕಾಶ ನೀಡುತ್ತಿಲ್ಲ. ಈಗ ಏನಾಗುತ್ತದೆ ಎಂದು ನೋಡೋಣ. ಕಾಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ