/newsfirstlive-kannada/media/post_attachments/wp-content/uploads/2025/04/RCB-RAJAT.jpg)
ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿದ ಬೆನ್ನಲ್ಲೇ ಆರ್ಸಿಬಿ ನಾಯಕ ರಜತ್ ಪಾಟೀದಾರ್ಗೆ ಸಂಕಷ್ಟ ಎದುರಾಗಿದೆ. ಸ್ಲೋ ಓವರ್ ರೇಟ್ನ ಕಾರಣಕ್ಕೆ ಆರ್ಸಿಬಿ ನಾಯಕನಿಗೆ ದಂಡದ ಬರೆ ಬಿದ್ದಿದೆ. ನಿಗದಿತ ಸಮಯಕ್ಕೆ ಬೌಲಿಂಗ್ ಮುಗಿಸದ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ 12 ಲಕ್ಷ ದಂಡವನ್ನ ವಿಧಿಸಿದ್ದಾರೆ.
ಮುಂಬೈ ಮತ್ತು ಬೆಂಗಳೂರು ತಂಡಗಳು ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿ ಆಗಿದ್ದವು. ಮೊದಲು ಬ್ಯಾಟ್ ಮಾಡಿದ್ದ ಆರ್ಸಿಬಿ, ಐದು ವಿಕೆಟ್ ಕಳೆದುಕೊಂಡು 221ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಮುಂಬೈ ಇಂಡಿಯನ್ಸ್, 9 ವಿಕೆಟ್ ಕಳೆದುಕೊಂಡು 209 ರನ್ಗಳಿಸಿ ಸೋಲಿಗೆ ಶರಣಾಯ್ತು.
ಇದನ್ನೂ ಓದಿ: ಆರ್ಸಿಬಿ ಮುಂದಿನ ಪಂದ್ಯ ಯಾವಾಗ..? ಅಭಿಮಾನಿಗಳು ಓದಲೇಬೇಕಾದ ಸ್ಟೋರಿ..!
ಆ ಮೂಲಕ ಆರ್ಸಿಬಿ ಈ ಸೀಸನ್ನಲ್ಲಿ ಇಲ್ಲಿಯವರೆಗೆ ಒಟ್ಟು ನಾಲ್ಕು ಪಂದ್ಯಗಳನ್ನ ಆಡಿ, ಮೂರು ಮ್ಯಾಚ್ನಲ್ಲಿ ಗೆದ್ದುಕೊಂಡಿದೆ. ಇದರೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು, ನಾಳೆ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.
ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವಿನ ಬಳಿಕ ಆರ್ಸಿಬಿ ಆಟಗಾರರು ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ. ಮುಂಬೈನಿಂದ ಹೊರಟ ಆರ್ಸಿಬಿ ಪ್ಲೇಯರ್ಸ್ ನಿನ್ನೆ ಸಂಜೆ ವೇಳೆಗೆ ಬೆಂಗಳೂರು ತಲುಪಿದ್ದಾರೆ. ಇಂದು ಸಂಜೆ ಆರ್ಸಿಬಿ ಆಟಗಾರರು ಅಭ್ಯಾಸ ನಡೆಸಲಿದ್ದಾರೆ.
ಇದನ್ನೂ ಓದಿ: 9 ಸಿಕ್ಸರ್, 7 ಬೌಂಡರಿ.. ಕೇವಲ 39 ಎಸೆತದಲ್ಲಿ ಸ್ಫೋಟಕ ಶತಕ.. ಐಪಿಎಲ್ನಲ್ಲಿ ಹೊಸ ದಾಖಲೆ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್