ಬೆಥೆಲ್​, ಕೊಹ್ಲಿ ಅಲ್ಲ.. RCB ಕ್ಯಾಪ್ಟನ್​ ರಜತ್ ಪಾಟಿದಾರ್​ ಗೆಲುವಿನ ಕ್ರೆಡಿಟ್ ಕೊಟ್ಟಿದ್ದು ಯಾರಿಗೆ..?

author-image
Bheemappa
Updated On
ಬೆಥೆಲ್​, ಕೊಹ್ಲಿ ಅಲ್ಲ.. RCB ಕ್ಯಾಪ್ಟನ್​ ರಜತ್ ಪಾಟಿದಾರ್​ ಗೆಲುವಿನ ಕ್ರೆಡಿಟ್ ಕೊಟ್ಟಿದ್ದು ಯಾರಿಗೆ..?
Advertisment
  • RCB ಗೆಲುವಿನ ಕ್ರೆಡಿಟ್ ಸಿಕ್ಕಿದ್ದು ಬ್ಯಾಟ್ಸ್​ಮನ್​ಗಾ​, ಬೌಲರ್​ಗಾ?
  • ಚೆನ್ನೈ ವಿರುದ್ಧ ಗೆಲ್ಲುತ್ತಿದ್ದಂತೆ ಸ್ಟೇಡಿಯಂನಲ್ಲಿ ಹಬ್ಬದ ವಾತಾವರಣ
  • ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದ 2 ತಂಡಗಳು

ತವರಿನಲ್ಲಿ ನಡೆದಂತಹ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಕೇವಲ ಎರಡೇ 2 ರನ್​ಗಳಿಂದ ರೋಚಕ ಗೆಲುವು ಪಡೆದಿದೆ. ಕೊನೆ ಬಾಲ್​ ಯಾರ್ಕರ್ ಹಾಕಿದ್ದೇ ತಡ ಇಡೀ ಸ್ಟೇಡಿಯಂ ಎಲ್ಲ ಸಂಭ್ರಮದಲ್ಲಿ ಮುಳುಗಿತ್ತು. ಇಂತಹ ರಣರೋಚಕ ಪಂದ್ಯ ಮುಗಿದ ನಂತರ ಆರ್​ಸಿಬಿ ನಾಯಕ ರಜತ್ ಪಾಟಿದಾರ್, ಗೆಲುವಿನ ಕ್ರೆಡಿಟ್​ ಡೆತ್​ ಓವರ್​ ಸ್ಪೆಷಲಿಸ್ಟ್​ಗೆ ನೀಡಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ಆರ್​ಸಿಬಿ ಕ್ಯಾಪ್ಟನ್ ರಜತ್ ಪಾಟಿದಾರ್ ಅವರು, ಇದೊಂದು ತುಂಬಾ ಕಷ್ಟವಾದ, ರೋಮಾಂಚನವಾದ ಪಂದ್ಯವಾಗಿತ್ತು. ಬಲಿಷ್ಠ ಬ್ಯಾಟಿಂಗ್ ಮೂಡಿ ಬಂದಿದ್ದರಿಂದ ಧೈರ್ಯದಿಂದ ಬೌಲಿಂಗ್ ಮಾಡಿದ ಡೆತ್​ ಓವರ್​ ಸ್ಪೆಷಲಿಸ್ಟ್​ಗೆ ಈ ಅಮೂಲ್ಯವಾದ ಕ್ರೆಡಿಟ್ ಸಲ್ಲಬೇಕು. ಆರ್​ಸಿಬಿಯ ಮುಖ್ಯವಾದ ಬೌಲರ್ ಆಗಿರುವ ಡೆತ್​ ಓವರ್​ ಸ್ಪೆಷಲಿಸ್ಟ್ ಕೊನೆ ಓವರ್​ನಲ್ಲಿ ನಮ್ಮ ಪರ ಕ್ಲಿಯರ್ ಕಟ್ ಫಲಿತಾಂಶ ಬರುವಂತೆ ಮಾಡಿದರು. ಹೀಗಾಗಿ ಈ ಎಲ್ಲ ಕ್ರೆಡಿಟ್ ಯಶ್​ ದಯಾಳ್​ಗೆ ಸಲ್ಲಬೇಕು ಎಂದು ರಜತ್ ಹೇಳಿದ್ದಾರೆ.

ಇದನ್ನೂ ಓದಿ:ಬ್ಯಾಟ್​ ಮುರಿದಿದ್ದಕ್ಕೆ ಕ್ಯಾಚ್ ಔಟ್ ಆದ್ರಾ RCB ಯಂಗ್ ಪ್ಲೇಯರ್ ಜಾಕೋಬ್ ಬೆಥೆಲ್..?

publive-image

ಕಳೆದ ವರ್ಷವೂ ಯಶ್ ದಯಾಳ್ ಇದೇ ತಂಡದ ವಿರುದ್ಧ ರೋಚಕವಾಗಿ ಬೌಲಿಂಗ್ ಮಾಡಿ ಆರ್​ಸಿಬಿಗೆ ನೆರವಾಗಿದ್ದರು. ಅದರಂತೆ ಈ ಬಾರಿಯು ನಮಗೆ ದೊಡ್ಡ ಗೆಲುವು ತಂದುಕೊಟ್ಟಿದ್ದಾರೆ. ಕೊನೆಯಲ್ಲಿ ಬೌಲಿಂಗ್ ಕೊಡುವಾಗ ಸುಯಾಶ್ ಮೇಲೂ ನಮಗೆ ವಿಶ್ವಾಸವಿತ್ತು. ಪಂದ್ಯ ಯಾರು ಗೆಲ್ಲುತ್ತಾರೆ ಹೇಳುವುದು ಕಷ್ಟವಾಗಿತ್ತು. ಫಲಿತಾಂಶ ಫಿಫ್ಟಿ ಫಿಫ್ಟಿ ಇತ್ತು. ಆದರೆ ಇಲ್ಲಿವರೆಗೆ ತಂಡದಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿರುವ ಯಶ್​ ದಯಾಳ್​ಗೆ ಬೆಂಬಲ ನೀಡಿದೆ. ಅದರಲ್ಲಿ ಯಶ್​ ಗೆಲುವು ಪಡೆದಿದ್ದಾರೆ ಎಂದು ಹೇಳಿದರು.

ರೊಮಾರಿಯೋ ಶೆಫರ್ಡ್ ಬ್ಯಾಟಿಂಗ್ ನೋಡಿ ಸಖತ್ ಎಂದರೆ ಸಖತ್ ಖುಷಿ ಪಟ್ಟೆ. ಶೆಫರ್ಡ್​ ಅವರ ಲಾಂಗ್ ಸಿಕ್ಸರ್​ಗಳನ್ನು ಎಂಜಾಯ್ ಮಾಡಿದೆ. ಲುಂಗಿ ಲುಂಗಿ ಎನ್‌ಗಿಡಿ ತುಂಬಾ ಅನುಭವಿ ಬೌಲರ್​ ಆಗಿದ್ದು ಅವರ ಮೇಲೆಯೂ ವಿಶ್ವಾಸ ವಿದೆ. ಇವರ ನೆರವು ಕೂಡ ತಂಡಕ್ಕೆ ಇದೆ. ಮುಂದಿನ ಮೂರು ಪಂದ್ಯಗಳು ತುಂಬಾ ಕಠಿಣವಾಗಿವೆ. ಅದರಲ್ಲಿ ದೊಡ್ಡ ಯಶಸ್ಸು ಕಾಣಲು ನಾವು ಬಯಸುತ್ತೇವೆ ಎಂದು ಆರ್​ಸಿಬಿ ಕ್ಯಾಪ್ಟನ್​ ರಜತ್ ಅವರು ಹೇಳಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment