/newsfirstlive-kannada/media/post_attachments/wp-content/uploads/2024/10/Rajanikanth-1.jpg)
ಸೂಪರ್​ ಸ್ಟಾರ್​​ ರಜನಿಕಾಂತ್​​​ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಸುದ್ದಿ ಮೂಲಗಳು ತಿಳಿಸಿವೆ.
ರಜನಿಕಾಂತ್​ಗೆ ಏನಾಯ್ತು?
ನೆಲ್ಸನ್​​ ದಿಲೀಪ್​​ಕುಮಾರ್​ ಅವರ ‘ಜೈಲರ್’​ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ವೆಟ್ಟೈಯನ್ ಸಿನಿಮಾದ ಬಿಡುಗಡೆಯ ಹಂತದಲ್ಲಿದ್ದಾರೆ. ಸದ್ಯ ರಜನಿಕಾಂತ್​ಗೆ ಹೊಟ್ಟೆ ನೋವು ಕಾಡಿದೆ. ಅದರಿಂದ ಬಳಲುತ್ತಿದ್ದ ನಟ ಆಸ್ಪತ್ರೆ ಸೇರಿದ್ದಾರೆ. ಇಂಟರ್ವೆನ್ಷನಲ್​​ ಕಾರ್ಡಿಯಾಲಜಿಸ್ಟ್​​ ಡಾ ಸಾಯಿ ಸತೀಶ್​ ಅವರ ಅಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಲ್ಯಾಬ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಸದ್ಯ ಅಭಿಮಾನಿಗಳ ತಲೈವಾ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ವೆಟ್ಟೈಯನ್ ಸಿನಿಮಾ
ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಅಂದಹಾಗೆಯೇ ಇದು ಆ್ಯಕ್ಷನ್​​​ ಪ್ಯಾಕ್ಡ್​​​ ಮನರಂಜನೆಯ ಸಿನಿಮಾವಾಗಿದ್ದು, ಅಕ್ಟೋಬರ್​​ 10ರಂದು ಥಿಯೇಟರ್​​ಗಳಿಗೆ ಬರಲಿದೆ. ಈ ಸಿನಿಮಾವನ್ನು ಟಿಜೆ ಜ್ಞಾನವೇಲ್​​ ನಿರ್ದೇಶಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us