/newsfirstlive-kannada/media/post_attachments/wp-content/uploads/2025/03/rakshak2.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಸದಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಬಿಗ್ಬಾಸ್ನಿಂದ ಆಚೆ ಬಂದ ಮೇಲೆ ಹೊಸ ಹೊಸ ರಿಯಾಲಿಟಿ ಶೋನಲ್ಲಿ ಭಾಗಿಯಾಗುತ್ತಿದ್ದಾರೆ.
ಇದನ್ನೂ ಓದಿ: ರೀಲ್ಸ್ಗಾಗಿ ಮಚ್ಚು ಹಿಡಿದ ವಿನಯ್, ಬುಜ್ಜಿ ಜೈಲು ಪಾಲು.. ರಜತ್ ಪತ್ನಿ ಕಣ್ಣೀರು! ಇವತ್ತು ಜಾಮೀನು ಸಿಗುತ್ತಾ?
ಸದ್ಯ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ಭರ್ಜರಿ ಬ್ಯಾಚುಲರ್ಸ್ ಸೀಸನ್ 2ಕ್ಕೆ ಎಂಟ್ರಿ ಕೊಟ್ಟು ಕಮಾಲ್ ಮಾಡುತ್ತಿದ್ದಾರೆ. ಆದ್ರೆ, ಇದೇ ಶೋನಲ್ಲಿ ರಕ್ಷಕ್ ಬುಲೆಟ್ ಹೇಳಿದ ಆ ಒಂದು ಡೈಲಾಗ್ಗೆ ಹಿಂದೂ ಕಾರ್ಯಕರ್ತರು ಕೆರಳಿ ಕೆಂಡ ಕಾರುತ್ತಿದ್ದಾರೆ. ಹೌದು, ಕಳೆದ ಎರಡು ವಾರದ ಹಿಂದೆ ಭರ್ಜರಿ ಬ್ಯಾಚುಲರ್ಸ್ ಶೋನಲ್ಲಿ ಎಲ್ಲ 10 ಬ್ಯಾಚ್ಯುಲರ್ಸ್ ಮತ್ತು 10 ಏಂಜಲ್ಗಳಿಗೆ ಟಾಸ್ಕ್ವೊಂದನ್ನು ನೀಡಲಾಗಿತ್ತು. ಸೂಪರ್ ಹಿಟ್ ಸಿನಿಮಾಗಳನ್ನು ಮರುಸೃಷ್ಟಿ ಮಾಡಿ ಎಲ್ಲರಿಗೂ ಮನರಂಜನೆ ನೀಡಬೇಕಾಗಿತ್ತು. ಅದೇ ರೀತಿ ಒಂದೊಂದು ಜೋಡಿಯೂ ಒಂದೊಂದು ಸಿನಿಮಾವನ್ನು ಮುಂದಿಟ್ಟು ನಟನೆ ಮಾಡಿದ್ದರಯ. ಇನ್ನೂ ರಕ್ಷಕ್ ಬುಲೆಟ್ಗೆ ಕನ್ನಡತಿ ಸೀರಿಯಲ್ ಖ್ಯಾತಿಯ ರಮೋಲಾ ಜೋಡಿಯಾಗಿ ಬುಲ್ ಬುಲ್ ಸಿನಿಮಾದ ಒಂದು ಸೀನ್ ಅನ್ನು ರೀ ಕ್ರಿಯೇಟ್ ಮಾಡಿದ್ದರು. ಇದೇ ವೇಳೆ ರಕ್ಷಕ್ ಸೇಮ್ ಟು ಸೇಮ್ ನಟ ದರ್ಶನ್ರಂತೆ, ರಮೋಲಾ ರಚಿತಾ ರಾಮ್ನಂತೆ ಬಟ್ಟೆಗಳನ್ನು ತೊಟ್ಟು ಡೈಲಾಗ್ಗನ್ನು ವೇದಿಕೆ ಮೇಲೆ ರೀ ಕ್ರಿಯೇಟ್ ಮಾಡಿದ್ದಾರೆ. ಹೀಗೆ ಆ ಸಿನಿಮಾದಲ್ಲಿ ನಟ ದರ್ಶನ್ ಹೊಡೆದ ಡೈಲಾಂಗ್ನಂತೆ ರಕ್ಷಕ್ ಬುಲೆಟ್ ಕೂಡ ರೀಪಿಟ್ ಮಾಡಿದ್ದಾರೆ.
View this post on Instagram
ರಕ್ಷಕ್ ಹೊಡೆದ ಡೈಲಾಗ್ ಏನು?
'ನಿಮ್ಮನ್ನ ನೋಡ್ತಾ ಇದ್ದ ಹಾಗೆಯೇ ಅಂದುಕೊಂಡೆ. ತಾಯಿ ಚಾಮುಂಡೇಶ್ವರಿನೇ ಬೆಟ್ಟದಿಂದ ಇಳಿದು, ಸೀರೆ-ಒಡವೆ ಎಲ್ಲಾ ಬಿಚ್ಚಿಟ್ಟು, ಪ್ಯಾಂಟು-ಶರ್ಟು ಹಾಕಿಕೊಂಡು ಸ್ವಿಜರ್ಲೆಂಡ್ಅಲ್ಲಿ ಒಳ್ಳೇ ಟ್ರಿಪ್ ಹೊಡೀತಾ ಇದ್ದಾರೆ. ಇದೇ ಡೈಲಾಗ್ ಇದೀಗ ವಿವಾದದ ಕಿಡಿ ಹೊತ್ತಿಸಿದೆ. ಹೀಗಾಗಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಹಾಗೂ ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಅಲ್ಲದೇ ರಕ್ಷಕ್ ಬುಲೆಟ್ ವಿರುದ್ಧ ಇಂದು ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸುತ್ತಿದ್ದಾರೆ.
ಹಿಂದೂ ದೂರಿನಲ್ಲಿ ಏನಿದೆ?
ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ಮತ್ತು ಹಿಂದೂ ಪವಿತ್ರ ದೇವತೆಯಾದ ಚಾಮುಂಡೇಶ್ವರಿ ತಾಯಿಯ ಅವಹೇಳನದ ಕುರಿತು. ಹೊಸ ಕಲಾವಿದ ಎಂದು ಗುರುತಿಸಲ್ಪಡುವ ರಕ್ಷಕ್ ಬುಲೆಟ್ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಅವಹೇಳನ ಮಾತನಾಡಿದ್ದಾರೆ. ಹಿಂದೂ ಧರ್ಮದ ಅತ್ಯುನ್ನತ ಮಾತೃಸ್ವರೂಪಿ ದೇವರಾದ ತಾಯಿ ಚಾಮುಂಡೇಶ್ವರಿಯ ಅವಹೇಳವನ್ನು ಕಾರ್ಯಕ್ರಮ ಒಂದರಲ್ಲಿ ಸಾರ್ವಜನಿಕವಾಗಿ ಮಾಡಿದ್ದು ಅದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ವಿಷಯವು ಇದೀಗ ತಾನೇ ಸಾರ್ವಜನಿಕವಾಗಿ ಬೆಳೆಯುತ್ತಾ, ತಾನು ಎಲ್ಲರಿಗಿಂತ ಮೇಲೆ ಎಂದುಕೊಂಡಿರುವ ಯುವಕನಿಗೆ ಅರಿವು ಮೂಡಿಸುವಂತಾಗಬೇಕು. ಸಮಸ್ತ ಹಿಂದೂ ಸಮಾಜದ ಪರವಾಗಿ ನಾವು ಇದನ್ನು ಖಂಡಿಸುತ್ತಾ, ರಕ್ಷಕ್ ಬುಲೆಟ್, ಜೀ ನ್ಯೂಸ್ “ಭರ್ಜರಿ ಬ್ಯಾಚುಲರ್-2′ ಕಾರ್ಯಕ್ರಮದ ರೂವಾರಿಗಳು, ನಿರ್ದೇಶಕರು, ಬರಹಗಾರರು ಎಲ್ಲರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಕಳಕಳಿಯ ಮನವಿಯನ್ನು ಮಾಡುತ್ತೇವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ