/newsfirstlive-kannada/media/post_attachments/wp-content/uploads/2024/10/mouna.jpg)
ರಾಮಾಚಾರಿ ಸೀರಿಯಲ್ ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಫೇವರೆಟ್​ ಆಗಿ ಉಳಿದುಕೊಂಡಿದೆ. ರಾಮಾಚಾರಿ ಧಾರಾವಾಹಿಗೆ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ಟಿಆರ್​ಪಿಯಲ್ಲೂ ರಾಮಾಚಾರಿ ಉತ್ತಮ ಸ್ಥಾನ ಕಾಯ್ದುಕೊಂಡು ಮುನ್ನುಗ್ಗುತ್ತಿದೆ.
ಇದನ್ನೂ ಓದಿ:BIG BREAKING: ಬಿಗ್ ಬಾಸ್ಗೆ ಗುಡ್ ಬೈ.. ಕೊನೆಗೂ ಮನೆಯಿಂದ ಹೊರ ಬಂದ ಜಗದೀಶ್!
/newsfirstlive-kannada/media/post_attachments/wp-content/uploads/2024/10/mouna1.jpg)
ಇದೇ ಸೀರಿಯಲ್​ ಮೂಲಕ ದೊಡ್ಡ ಮಟ್ಟದಲ್ಲಿ ಮಿಂಚುತ್ತಿದ್ದಾರೆ ನಟಿ ಮೌನ ಗುಡ್ಡೆಮನೆ. ಹೌದು, ರಾಮಾಚಾರಿ ಸೀರಿಯಲ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟಿ ಮೌನ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋದ ಜೊತೆಗೆ ಜಸ್ಟ್​ ವಾವ್ ಅಂತ ಬರೆದುಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/10/mouna2.jpg)
ಆಕಾಶ ನೀಲಿ ಬಣ್ಣದ ಸೀರೆಯಲ್ಲಿ ಥೇಟ್​ ರಾಣಿಯಂತೆ ಕಂಗೊಳಿಸುತ್ತಿದ್ದಾರೆ. ಇದೇ ವಿಡಿಯೋ ನೋಡಿದ ಲೇಡಿ ಫ್ಯಾನ್ಸ್​ ನಟಿಯ ಹೊಸ ಸೀರೆ ಬಗ್ಗೆ ಮಾತಾಡುತ್ತಿದ್ದಾರೆ. ಇನ್ನೂ ಇದೇ ವಿಡಿಯೋ ನೋಡಿದ ಫ್ಯಾನ್ಸ್​ ಹೊಸ ಹೀರೋಯಿನ್ ಸಿಕ್ಕಿದ್ರು ನಮ್ಮ ಕನ್ನಡಕ್ಕೆ. ಅಂದ ಚಂದ ಮುದ್ದು ಚಾರು ಶ್ರೀಗಂಧದ ಗೊಂಬೆ ಅಂತ ಕಾಮೆಂಟ್ಸ್​ಗಳನ್ನು ಹಾಕಿದ್ದಾರೆ. ಇನ್ನೂ, ಯೋಗರಾಜ್ ಭಟ್ ಅವರ ಯೋಗರಾಜ್ ಸಿನಿಮಾಸ್ ಅರ್ಪಿಸುವ ಹೊಸ ಸಿನಿಮಾದಲ್ಲಿ ಮಡೆನೂರು ಮನುಗೆ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ. ವಿಶೇಷವೆಂದರೆ, ಈ ಸಿನಿಮಾಗೆ ರಾಮಾಚಾರಿ ಧಾರಾವಾಹಿಯಲ್ಲಿ ಚಾರುಲತಾ ಪಾತ್ರದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಮೌನ ಗುಡ್ಡೆಮನೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ: ಹಾವು ಕೊಂ*ದ 24 ಗಂಟೆಯಲ್ಲೇ ಗುಡಿ ನಿರ್ಮಾಣ.. ಆದ್ರೂ ಮಕ್ಕಳಿಗೆ ಪದೇ ಪದೆ ಸರ್ಪ ಕಾಣುತ್ತಿರುವುದು ಏಕೆ?
View this post on Instagram
ಇದೇ ಮೊದಲ ಬಾರಿಗೆ ಮಡೆನೂರು ಮನು ಮತ್ತು ಮೌನ ಗುಡ್ಡೆಮನೆ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಹೊಸ ಸಿನಿಮಾಗೆ ‘ಕುಲದಲ್ಲಿ ಕೀಳ್ಯಾವುದೋ’ ಅಂತ ಟೈಟಲ್ ಇಡಲಾಗಿದೆ. ಸದ್ಯ ಟೈಟಲ್ನಿಂದಲೇ ಈ ಸಿನಿಮಾದ ಮೇಲೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ. ಇದೇ ಸಿನಿಮಾವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ ಕೆ ಮತ್ತು ವಿದ್ಯಾ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us