/newsfirstlive-kannada/media/post_attachments/wp-content/uploads/2024/10/Ratan-Tata-14.jpg)
ಕೈಗಾರಿಕೋದ್ಯಮಿ ರತನ್​ ಟಾಟಾ ನಿಧನರಾಗಿದ್ದಾರೆ. 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಗೆ ತುತ್ತಾಗಿ ಉಸಿರು ನಿಲ್ಲಿಸಿದ್ದಾರೆ. ಸೋಮವಾರದಂದು ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಾದ ಅವರು ಬುಧವಾರ ರಾತ್ರಿಯಂದು ಕೊನೆಯುಸಿರೆಳೆದಿದ್ದಾರೆ.
ದೇಶದ ಅಪ್ರತಿಮ ಐಕಾನ್​ ರತನ್​ ಟಾಟಾಗೆ ಮಹಾರಾಷ್ಟ್ರ ಸರ್ಕಾರವು ಅಂತಿಮ ವಿಧಿವಿಧಾನವನ್ನು ಸಲ್ಲಿಸಲಿದೆ. ಅವರ ಕುಟುಂಬ ಜೊತೆಯಾಗಿ ನಿಂತು ಕೊನೆಯ ಕಾರ್ಯವನ್ನು ಮಾಡಲಿದೆ. ಪಾರ್ಥಿವ ಶರೀರವನ್ನು ಇಂದು ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ನಲ್ಲಿ (NCPA) ತೆಗೆದುಕೊಂಡು ಹೋಗಲಾಗುತ್ತದೆ.
ಇದನ್ನೂ ಓದಿ: Ratan Tata: ಬಾಲ್ಯ, ಬದುಕು, ಸಾಧನೆ, ಪ್ರೀತಿ.. ಮರೆಯಾದ ಮಾಣಿಕ್ಯನ ಫೋಟೋಗಳು ಇಲ್ಲಿವೆ
ಅಂತಿಮ ದರ್ಶನಕ್ಕೆ ವ್ಯವಸ್ಥೆ
ಇಂದು ಬೆಳಿಗ್ಗೆ 10.30 ರಿಂದ ಸಂಜೆ 3.30 ರವರೆಗೆ ರತನ್​ ಟಾಟಾ ಅವರ ಅಂತಿಮ ದರ್ಶನ ಪಡೆಯಲು ಜನರಿಗೆ ವ್ಯವಸ್ಥೆ ಮಾಡಲಾಗಿದೆ. 3.30ರ ಬಳಿಕ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಗುತ್ತದೆ. ಗೃಹ ಸಚಿವ ಅಮಿತ್ ಶಾರವರು ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
/newsfirstlive-kannada/media/post_attachments/wp-content/uploads/2024/10/ratan-Tata-1.jpg)
ಇದನ್ನೂ ಓದಿ: ಪ್ರೀತಿಯ ಗೆಳೆಯನಿಗೆ ಮಾಜಿ ಗೆಳತಿಯಿಂದ ಭಾವುಕ ವಿದಾಯ.. ನಿನ್ನ ನಷ್ಟ ಸಹಿಸಿಕೊಳ್ಳುವುದು ಕಷ್ಟವೆಂದ ಸಿಮಿ ಗೆರೆವಾಲ್
ಎಲ್ಲಾ ಸರ್ಕಾರಿ ಕಾರ್ಯಕ್ರಮ ರದ್ದು
ಮಹಾರಾಷ್ಟ್ರದಲ್ಲಿ ಗುರುವಾರದಂದು ನಡೆಯಬೇಕಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆಯವರು, ‘ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ’ ಎಂದು ಕರೆಯುವ ಮೂಲಕ ಬೇಸರ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us