newsfirstkannada.com

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು? ಕಾರಣವೇನು?

Share :

Published May 9, 2024 at 4:32pm

    ಇಂದು ಆರ್​​ಸಿಬಿ, ಪಂಜಾಬ್​​​ ಕಿಂಗ್ಸ್​​ ತಂಡದ​ ಮಧ್ಯೆ ರೋಚಕ ಪಂದ್ಯ

    ಧರ್ಮಶಾಲಾ ಸ್ಟೇಡಿಯಮ್​ನಲ್ಲಿ ನಡೆಯಲಿರೋ ಹೈವೋಲ್ಟೇಜ್​ ಮ್ಯಾಚ್

    ​​ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್​​!

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಧರ್ಮಶಾಲಾ ಇಂಟರ್​ ನ್ಯಾಷನಲ್​ ಕ್ರಿಕೆಟ್​​ ಸ್ಟೇಡಿಯಮ್​​ನಲ್ಲಿ ನಡೆಯಬೇಕಿದ್ದ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್​ ಕಿಂಗ್ಸ್​​ ನಡುವಿನ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.

ಆರ್‌ಸಿಬಿ ಇತ್ತೀಚೆಗಷ್ಟೇ ಬ್ಯಾಕ್​ ಟು ಬ್ಯಾಕ್​ 3 ಪಂದ್ಯ ಗೆದ್ದು ಕಮ್​ಬ್ಯಾಕ್​ ಮಾಡಿದೆ. 11 ಪಂದ್ಯಗಳಲ್ಲಿ ಕೇವಲ 8 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಇದರಿಂದ ನೆಟ್ ರನ್ ರೇಟ್ ಸುಧಾರಿಸಿದೆ.

ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವನ್ನು ಯಾವುದೇ ಕಾರಣಕ್ಕೂ ಗುಜರಾತ್​ ಟೈಟನ್ಸ್​ ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಈಗಂತೂ ವಿರಾಟ್, ದಿನೇಶ್​ ಕಾರ್ತಿಕ್​​​, ಫಾಫ್​ ಡುಪ್ಲೆಸಿಸ್, ರಜತ್​ ಪಾಟಿದಾರ್​​, ವಿಲ್​ ಜಾಕ್ಸ್​ ಎಲ್ಲರೂ ಫಾರ್ಮ್​ಗೆ ಬಂದಿದ್ದಾರೆ.

ಇನ್ನು, ಆರ್​ಸಿಬಿ ಮತ್ತು ಪಂಜಾಬ್​ ​ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್​​ ನಡೆಯೋ ಕಾರಣ ಭರ್ಜರಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 10ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.

ಇದನ್ನೂ ಓದಿ: ಆರ್​​​​ಸಿಬಿಗೆ ಬಿಗ್​ ಶಾಕ್​​.. ಇಂದಿನ ಪಂದ್ಯದಿಂದ ಸ್ಟಾರ್​ ಪ್ಲೇಯರ್​ ಔಟ್​​! ಕಾರಣವೇನು?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು? ಕಾರಣವೇನು?

https://newsfirstlive.com/wp-content/uploads/2024/05/RCB_Punjab.jpg

    ಇಂದು ಆರ್​​ಸಿಬಿ, ಪಂಜಾಬ್​​​ ಕಿಂಗ್ಸ್​​ ತಂಡದ​ ಮಧ್ಯೆ ರೋಚಕ ಪಂದ್ಯ

    ಧರ್ಮಶಾಲಾ ಸ್ಟೇಡಿಯಮ್​ನಲ್ಲಿ ನಡೆಯಲಿರೋ ಹೈವೋಲ್ಟೇಜ್​ ಮ್ಯಾಚ್

    ​​ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್​​!

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಧರ್ಮಶಾಲಾ ಇಂಟರ್​ ನ್ಯಾಷನಲ್​ ಕ್ರಿಕೆಟ್​​ ಸ್ಟೇಡಿಯಮ್​​ನಲ್ಲಿ ನಡೆಯಬೇಕಿದ್ದ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್​ ಕಿಂಗ್ಸ್​​ ನಡುವಿನ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.

ಆರ್‌ಸಿಬಿ ಇತ್ತೀಚೆಗಷ್ಟೇ ಬ್ಯಾಕ್​ ಟು ಬ್ಯಾಕ್​ 3 ಪಂದ್ಯ ಗೆದ್ದು ಕಮ್​ಬ್ಯಾಕ್​ ಮಾಡಿದೆ. 11 ಪಂದ್ಯಗಳಲ್ಲಿ ಕೇವಲ 8 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಇದರಿಂದ ನೆಟ್ ರನ್ ರೇಟ್ ಸುಧಾರಿಸಿದೆ.

ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವನ್ನು ಯಾವುದೇ ಕಾರಣಕ್ಕೂ ಗುಜರಾತ್​ ಟೈಟನ್ಸ್​ ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಈಗಂತೂ ವಿರಾಟ್, ದಿನೇಶ್​ ಕಾರ್ತಿಕ್​​​, ಫಾಫ್​ ಡುಪ್ಲೆಸಿಸ್, ರಜತ್​ ಪಾಟಿದಾರ್​​, ವಿಲ್​ ಜಾಕ್ಸ್​ ಎಲ್ಲರೂ ಫಾರ್ಮ್​ಗೆ ಬಂದಿದ್ದಾರೆ.

ಇನ್ನು, ಆರ್​ಸಿಬಿ ಮತ್ತು ಪಂಜಾಬ್​ ​ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್​​ ನಡೆಯೋ ಕಾರಣ ಭರ್ಜರಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 10ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.

ಇದನ್ನೂ ಓದಿ: ಆರ್​​​​ಸಿಬಿಗೆ ಬಿಗ್​ ಶಾಕ್​​.. ಇಂದಿನ ಪಂದ್ಯದಿಂದ ಸ್ಟಾರ್​ ಪ್ಲೇಯರ್​ ಔಟ್​​! ಕಾರಣವೇನು?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More