/newsfirstlive-kannada/media/post_attachments/wp-content/uploads/2025/04/RAJAT-PATIDAR-1.jpg)
ಕೊನೆಗೂ ಆರ್​ಸಿಬಿ ತವರಿನಲ್ಲಿ ರೋಚಕವಾಗಿ ಗೆದ್ದು ಬೀಗಿದೆ. ಅಭಿಮಾನಿಗಳು ಫುಲ್ ಖುಷ್ ಆಗಿದ್ದು, ಪ್ಲೇ-ಆಫ್ ಕನಸಿನ ಬಗ್ಗೆ ಜೋರಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
ಪಂದ್ಯ ಗೆದ್ದ ಖುಷಿಯಲ್ಲಿ ಮಾತನಾಡಿರುವ ಕ್ಯಾಪ್ಟನ್ ರಜತ್ ಪಾಟೀದಾರ್, ಈ ಗೆಲುವು ನಮಗೆ ತುಂಬಾ ಅಗತ್ಯವಾಗಿತ್ತು. ಇಂದು ವಿಕೆಟ್ ವಿಭಿನ್ನವಾಗಿತ್ತು. 10ನೇ ಓವರ್ ನಂತರ ನಮ್ಮ ಬೌಲರ್​ಗಳು ಕಂಟ್ರೋಲ್​ಗೆ ತಂದರು. ಗೆಲುವಿನ ಕ್ರೆಡಿಟ್ ಬೌಲರ್ಗಳಿಗೆ ಸಲ್ಲುತ್ತದೆ. ಅವರು ಧೈರ್ಯ ಅದ್ಭುತವಾಗಿತ್ತು.
ರಾಜಸ್ಥಾನ್ ರಾಯಲ್ಸ್​, ಆರಂಭದಲ್ಲಿ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ನಾವು ವಿಕೆಟ್ಗಳನ್ನು ಹುಡುಕುತ್ತಿದ್ದೆವು. ವಿಕೆಟ್ ಬಿದ್ದಾಗ ಮಾತ್ರ ರನ್​​ ಓಟಕ್ಕೆ ಬ್ರೇಕ್ ಹಾಕಬಹುದು. ನಮ್ಮಲ್ಲಿ ಉತ್ತಮ ನಾಯಕರ ತಂಡವಿದೆ. ಅವರ ಇನ್ಪುಟ್ಗಳು ಬಹಳಷ್ಟು ಸಹಾಯ ಮಾಡುತ್ತವೆ ಎಂದರು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ಐದು ವಿಕೆಟ್ ಕಳೆದುಕೊಂಡು 205 ರನ್​ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ರಾಜಸ್ಥಾನ್ ರಾಯಲ್ಸ್, 9 ವಿಕೆಟ್ ಕಳೆದುಕೊಂಡು 194 ರನ್​ಗಳಿಸಿ ಸೋಲಿಗೆ ಶರಣಾಯ್ತು.
ಇದನ್ನೂ ಓದಿ: RCBಗೆ ತವರಲ್ಲಿ ಮೊದಲ ಗೆಲುವು.. ರೋಚಕ ಪಂದ್ಯದಲ್ಲಿ ರಾಯಲ್ಸ್​ಗೆ ಪಂಚ್, ರಾಯಲ್​ ಸಂಭ್ರಮ
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us