/newsfirstlive-kannada/media/post_attachments/wp-content/uploads/2025/03/Rajat-Patidar.jpg)
ಕ್ರಿಕೆಟ್ ಜಗತ್ತು ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ದಿನ ಬಂದೇ ಬಿಡ್ತು. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಒಂದು ಪ್ರತಿಷ್ಟಿತ ಟ್ರೋಫಿಗಾಗಿ ಇಂದಿನಿಂದ 10 ತಂಡಗಳು ಬ್ಯಾಟಲ್ ಫೀಲ್ಡ್ನಲ್ಲಿ ಫೈಟ್ ನಡೆಸಲಿದೆ. 75 ಪಂದ್ಯಗಳಿಗೆ 18ನೇ ಸೀಸನ್ನ ಐಪಿಎಲ್ ಸಾಕ್ಷಿಯಾಗಲಿದ್ದು, 65 ದಿನಗಳ ಕಾಲ ಕ್ರಿಕೆಟ್ ಫ್ಯಾನ್ಸ್ಗೆ ಫುಲ್ ಟ್ರೀಟ್ ಕಾದಿದೆ.
ಇದನ್ನೂ ಓದಿ: ಕರ್ನಾಟಕ ಬಂದ್! ನಾಳೆ ಏನಿರುತ್ತೆ? ಏನಿರಲ್ಲ? ಕನ್ನಡ ಪರ ಸಂಘಟನೆ ಇಟ್ಟ 20 ಬೇಡಿಕೆಗಳು ಏನೇನು?
ಪಂದ್ಯ ಆರಂಭಕ್ಕೂ ಮುನ್ನ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಅವರು ಎರಡು ಕೈ ಜೋಡಿಸಿ ನಟ ರಾಜ್ಕುಮಾರ್ ಅವರ ಖ್ಯಾತ ಡೈಲಾಗ್ ಹೊಡೆದಿದ್ದಾರೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ವರನಟ ಡಾಕ್ಟರ್ ರಾಜ್ಕುಮಾರ್ರನ್ನ ನೆನೆದಿದ್ದಾರೆ.
View this post on Instagram
ಮಿಸ್ಟರ್ ನ್ಯಾಗ್ಸ್ ಜೊತೆಗಿನ ಇನ್ಸೈಡರ್ ಶೋನಲ್ಲಿ ಭಾಗಿಯಾಗಿದ್ದ ವೇಳೆ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ಫ್ಯಾನ್ಸ್ ಬೆಂಬಲಕ್ಕೆ ಧನ್ಯವಾದ ಹೇಳಿರೋ ರಜತ್, ಡಾಕ್ಟರ್ ರಾಜ್ಕುಮಾರ್ ಅವರು ಹೇಳಿದಂತೆ ಅಭಿಮಾನಿಗಳೇ ನಮ್ಮ ದೇವ್ರು ಎಂದು ಡೈಲಾಗ್ ಹೊಡೆದಿದ್ದಾರೆ.
ಕನ್ನಡದಲ್ಲಿ ಅಭಿಮಾನಿಗಳೇ ನಮ್ಮ ದೇವ್ರು ಎಂದು ರಜತ್ ಪಾಟಿದಾರ್ ಹೊಡೆದ ಡೈಲಾಗ್ ಕೇಳಿ ಆರ್ಸಿಬಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು, ಅಭಿಮಾನಿಗಳಿಗೆ ನಮ್ಮನೇ ದೇವ್ರು, RCBನೇ ನಮ್ ಎದೆ ಉಸಿರು, ಕನ್ನಡ ಮಾತಾಡಿ ಮನಸ್ಸು ಗೆದ್ದು ಬಿಟ್ಟೆ, ಈ ಸಲ cup ನಮ್ದೇ, ನಮ್ಮ ನಾಯಕ ನಮ್ಮ ಹೆಮ್ಮೆ ಎಂದು ಕಾಮೆಂಟ್ಸ್ ಹಾಕುತ್ತಿದ್ದಾರೆ. ಇನ್ನೂ, 2022 ರಿಂದ 2024ರವರೆಗೆ ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿಸ್ (Faf du Plessis) ಆರ್ಸಿಬಿ ನಾಯಕರಾಗಿದ್ದರು. ಆದರೆ ಈ ಬಾರಿಯ ರಜತ್ ಪಾಟಿದಾರ್ ಆರ್ಸಿಬಿ ತಂಡದ ನಾಯಕರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ