/newsfirstlive-kannada/media/post_attachments/wp-content/uploads/2025/06/SMG-RCB-FAN.jpg)
‘ಈ ಸಲ ಕಪ್ ನಮ್ದೇ ಆಗಿದೆ’. ಐಪಿಎಲ್ ಟ್ರೋಫಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುತ್ತಿಡುತ್ತಿದ್ದಂತೆಯೇ ಅಭಿಮಾನಿಗಳ ಸಂಭ್ರಮ ಸಖತ್ ಜೋರಾಗಿದೆ. ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗ್ತಿದೆ.
ಸಂಭ್ರಮಾಚರಣೆಯ ಖುಷಿಯಲ್ಲಿ ಶಿವಮೊಗ್ಗದಲ್ಲಿ ಅಭಿಮಾನಿಯೊಬ್ಬನ ಜೀವ ಹೋಗಿದೆ. ಆರ್​ಸಿಬಿ ಕಪ್ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಬೈಕ್ ಱಲಿ ಮಾಡುತ್ತಿದ್ದರು. ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ಭೀಕರ ಅಪಘಾತ ನಡೆದು, ಓರ್ವ ಯುವಕ ಪ್ರಾಣ ಬಿಟ್ಟಿದ್ದಾನೆ.
ಇದನ್ನೂ ಓದಿ: ಪಂಜಾಬ್ ಕಿಂಗ್ಸ್​ಗೆ 13 ಕೋಟಿ ಹಣ.. ಚಾಂಪಿಯನ್ ಆರ್​ಸಿಬಿಗೆ ಕೋಟಿ ಕೋಟಿ ದುಡ್ಡು..!
/newsfirstlive-kannada/media/post_attachments/wp-content/uploads/2025/06/RCB-Mallya.jpg)
ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಮ್ಯಾಚ್ ನಡೆಯಿತು. ಟಾಸ್ ಸೋತು ಆರ್​ಸಿಬಿ ಮೊದಲು ಬ್ಯಾಟಿಂಗ್​ ಮಾಡಿತ್ತು. ಕೊಹ್ಲಿ ಅವರ 43 ರನ್​ಗಳ ನೆರವಿನಿಂದ ಆರ್​​ಸಿಬಿ 190 ರನ್ಗಳ ಬೃಹತ್ ಸ್ಕೋರ್ ಗಳಿಸಿತ್ತು. 191 ರನ್​ಗಳ ಗುರಿ ಬೆನ್ನು ಹತ್ತಿದ್ದ ಪಂಜಾಬ್ ಕಿಂಗ್ಸ್, 20 ಓವರ್ಗಳಲ್ಲಿ ಕೇವಲ 184 ರನ್ಗಳಿಸಿ ಸೋಲಿಗೆ ಶರಣಾಯ್ತು. ಆ ಮೂಲಕ ಆರ್​ಸಿಬಿ ಟ್ರೋಫಿಗೆ ಮುತ್ತಿಟ್ಟು 18 ವರ್ಷಗಳ ಕನಸನ್ನು ನನಸು ಮಾಡಿಕೊಂಡಿತು.
ಇದನ್ನೂ ಓದಿ: ಟ್ರೋಫಿ ಗೆದ್ದ ಬೆನ್ನಲ್ಲೇ ವಿಜಯ್ ಮಲ್ಯ ಖುಷ್​.. ಏನು ಹೇಳಿದ್ದಾರೆ ಗೊತ್ತಾ..?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us