/newsfirstlive-kannada/media/post_attachments/wp-content/uploads/2025/04/KOHLI_RCB.jpg)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ಗೆ ತವರಿನಲ್ಲಿ ಮತ್ತೆ ಟಾಸ್ ಕೈಕೊಟ್ಟಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಆರ್ಸಿಬಿ ಮೊದಲ ಬ್ಯಾಟಿಂಗ್ ಮಾಡಲಿದೆ.
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಅವರು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆರ್ಸಿಬಿ ಟೀಮ್ ಮೊದಲ ಬ್ಯಾಟಿಂಗ್ ಮಾಡಲಿದ್ದು ಫಿಲಿಪ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಇಬ್ಬರು ಎಂದಿನಂತೆ ಓಪನರ್ ಆಗಿ ಕ್ರೀಸ್ಗೆ ಬರಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ ಬ್ಯಾಟಿಂಗ್ ತಂಡಕ್ಕೆ ಬಹುದೊಡ್ಡ ಶಕ್ತಿಯಾಗಿರುತ್ತದೆ.
ಇದನ್ನೂ ಓದಿ: ‘ಅದು ಏನೋ ಗೊತ್ತಿಲ್ಲ, RCB ಅಂದ್ರೆ ನಮ್ಮ ಜೀವ, ಪ್ರಾಣ’.. ನೆಚ್ಚಿನ ಟೀಮ್ ಬಗ್ಗೆ ಶಿವಣ್ಣ ಹೇಳಿದ್ದೇನು?
ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಆಗಿ ಜಿತೇಶ್ ಶರ್ಮಾ ಟೀಮ್ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಪಂದ್ಯದಲ್ಲಿ ನಾಯಕ ರಜತ್ ಪಾಟಿದಾರ್, ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಅಬ್ಬರದಿಂದ ಆರ್ಸಿಬಿ ದೊಡ್ಡ ಮೊತ್ತದ ರನ್ ಗಳಿಸಿತ್ತು. ಫಿನಿಸಿಂಗ್ ಟಚ್ನಲ್ಲಿ ಲೈಮ್ ಲಿವಿಂಗ್ಸ್ಟನ್, ಟಿಮ್ ಡೇವಿಡ್, ಜಿತೇಶ್ ಶರ್ಮಾ ಬ್ಯಾಟಿಂಗ್ ತಂಡದ ಗತಿಯನ್ನೇ ಬದಲಿಸುತ್ತದೆ.
ಆಲೌರೌಂಡರ್ ಆಗಿ ಲೈಮ್ ಲಿವಿಂಗ್ಸ್ಟನ್, ಕೃನಾಲ್ ಪಾಂಡ್ಯ ಅವರ ಬ್ಯಾಟಿಂಗ್, ಬೌಲಿಂಗ್ ತಂಡದಲ್ಲಿ ಮಹತ್ವದ ಬದಲಾವಣೆ ತರುವ ಸಾಧ್ಯತೆ ಇದೆ. ಭುವನೇಶ್ವರ್ ಹಾಗೂ ಜೋಶ್ ಹ್ಯಾಜಲ್ವುಡ್, ಯಶ್ ದಯಾಳ್ ಆರ್ಸಿಬಿಯ ಬೌಲಿಂಗ್ ಬಲವಾಗಿದ್ದಾರೆ. ಎದುರಾಳಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಬಲಿಷ್ಠವಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ ಒಳ್ಳೆಯ ಪಾರ್ಫನಲ್ಲಿದ್ದು ಇಂದು ಅವರ ಬ್ಯಾಟಿಂಗ್ ಬಲ ಮತ್ತಷ್ಟು ಶಕ್ತಿಯಾಗಿ ಪರಿಣಮಿಸಬಹುದು. ಆರ್ಸಿಬಿಯ ಮಾಜಿ ಕ್ಯಾಪ್ಟನ್ ಆಗಿದ್ದ ಫಾಫ್ ಡುಪ್ಲೆಸ್ಸಿಗೆ ಚಿನ್ನಸ್ವಾಮಿ ಸ್ಟೇಡಿಯಂನ ಅಣು ಅಣುವು ಗೊತ್ತಿದ್ದರಿಂದ ಫಾಫ್ ಬ್ಯಾಟಿಂಗ್ ಕೂಡ ಆರ್ಸಿಬಿ ಮೇಲೆ ಪರಿಣಾಮ ಬೀರಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್- 11
ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್ವುಡ್, ಯಶ್ ದಯಾಳ್.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ