ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಭರ್ಜರಿ ತಯಾರಿ
ಐಪಿಎಲ್ 2025ರ ಮೆಗಾ ಆಕ್ಷನ್ನಲ್ಲಿ ರಾಹುಲ್ ಖರೀದಿಗೆ ಮಾಸ್ಟರ್ ಪ್ಲಾನ್..!
ಕೆ.ಎಲ್ ರಾಹುಲ್ ಜೊತೆಗೆ ಮತ್ತೋರ್ವ ಕನ್ನಡಿಗನಿಗೆ ಆರ್ಸಿಬಿ ಮಣೆ ಸಾಧ್ಯತೆ
ಲಕ್ನೋ ಸೂಪರ್ ಜೈಂಟ್ಸ್ ತಂಡ ತೊರೆದು ಕೆ.ಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಈ ಮಧ್ಯೆ ಮತ್ತೋರ್ವ ಸ್ಟಾರ್ ಕ್ರಿಕೆಟರ್ ಆರ್ಸಿಬಿ ತಂಡ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದು ಕರ್ನಾಟಕ ಮೂಲದ ಕ್ರಿಕೆಟರ್ ಎಂಬುದು ವಿಶೇಷ.
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೇಗಾದ್ರೂ ಮಾಡಿ ಕಪ್ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಹಾಗಾಗಿ ವರ್ಷದ ಕೊನೆ ಡಿಸೆಂಬರ್ನಲ್ಲಿ ನಡೆಯಲಿರೋ 2025ರ ಐಪಿಎಲ್ ಮೆಗಾ ಆಕ್ಷನ್ನಲ್ಲಿ ಸ್ಟಾರ್ ಆಟಗಾರರಿಗೆ ಮಣೆ ಹಾಕಬೇಕು. ಈ ಮೂಲಕ ಬಲಿಷ್ಠ ತಂಡ ಕಟ್ಟಬೇಕು ಎಂಬುದು ಆರ್ಸಿಬಿ ಪ್ಲಾನ್.
ದೇವದತ್ ಪಡಿಕ್ಕಲ್ಗೆ ಮತ್ತೆ ಮಣೆ!
ಆರ್ಸಿಬಿ ತಂಡದಲ್ಲಿದ್ದಾಗ ಅದ್ಭುತ ಪ್ರದರ್ಶನ ನೀಡುತ್ತಿದ್ದ ದೇವದತ್ ಪಡಿಕ್ಕಲ್ ರಾಜಸ್ಥಾನ್ ರಾಯಲ್ಸ್ ಸೇರಿದ ಮೇಲೆ ಮಂಕಾಗಿದ್ದಾರೆ. ದೇಸಿ ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ರೂ ಐಪಿಎಲ್ನಲ್ಲಿ ಮಾತ್ರ ಎಡವುತ್ತಿದ್ದಾರೆ. ಹಾಗಾಗಿ ರಾಜಸ್ಥಾನ್ ರಾಯಲ್ಸ್ ಪಡಿಕ್ಕಲ್ ಅವರನ್ನು ಕೈ ಬಿಡುವ ಸಾಧ್ಯತೆ ಇದ್ದು, ಮತ್ತೆ ಆರ್ಸಿಬಿ ಇವರನ್ನು ಖರೀದಿ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಅಬ್ಬಬ್ಬಾ! KL ರಾಹುಲ್ ಖರೀದಿಗೆ ಆರ್ಸಿಬಿ ಮೀಸಲಿಟ್ಟ ಹಣ ಎಷ್ಟು ಕೋಟಿ ಗೊತ್ತಾ..?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಭರ್ಜರಿ ತಯಾರಿ
ಐಪಿಎಲ್ 2025ರ ಮೆಗಾ ಆಕ್ಷನ್ನಲ್ಲಿ ರಾಹುಲ್ ಖರೀದಿಗೆ ಮಾಸ್ಟರ್ ಪ್ಲಾನ್..!
ಕೆ.ಎಲ್ ರಾಹುಲ್ ಜೊತೆಗೆ ಮತ್ತೋರ್ವ ಕನ್ನಡಿಗನಿಗೆ ಆರ್ಸಿಬಿ ಮಣೆ ಸಾಧ್ಯತೆ
ಲಕ್ನೋ ಸೂಪರ್ ಜೈಂಟ್ಸ್ ತಂಡ ತೊರೆದು ಕೆ.ಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಈ ಮಧ್ಯೆ ಮತ್ತೋರ್ವ ಸ್ಟಾರ್ ಕ್ರಿಕೆಟರ್ ಆರ್ಸಿಬಿ ತಂಡ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದು ಕರ್ನಾಟಕ ಮೂಲದ ಕ್ರಿಕೆಟರ್ ಎಂಬುದು ವಿಶೇಷ.
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೇಗಾದ್ರೂ ಮಾಡಿ ಕಪ್ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಹಾಗಾಗಿ ವರ್ಷದ ಕೊನೆ ಡಿಸೆಂಬರ್ನಲ್ಲಿ ನಡೆಯಲಿರೋ 2025ರ ಐಪಿಎಲ್ ಮೆಗಾ ಆಕ್ಷನ್ನಲ್ಲಿ ಸ್ಟಾರ್ ಆಟಗಾರರಿಗೆ ಮಣೆ ಹಾಕಬೇಕು. ಈ ಮೂಲಕ ಬಲಿಷ್ಠ ತಂಡ ಕಟ್ಟಬೇಕು ಎಂಬುದು ಆರ್ಸಿಬಿ ಪ್ಲಾನ್.
ದೇವದತ್ ಪಡಿಕ್ಕಲ್ಗೆ ಮತ್ತೆ ಮಣೆ!
ಆರ್ಸಿಬಿ ತಂಡದಲ್ಲಿದ್ದಾಗ ಅದ್ಭುತ ಪ್ರದರ್ಶನ ನೀಡುತ್ತಿದ್ದ ದೇವದತ್ ಪಡಿಕ್ಕಲ್ ರಾಜಸ್ಥಾನ್ ರಾಯಲ್ಸ್ ಸೇರಿದ ಮೇಲೆ ಮಂಕಾಗಿದ್ದಾರೆ. ದೇಸಿ ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ರೂ ಐಪಿಎಲ್ನಲ್ಲಿ ಮಾತ್ರ ಎಡವುತ್ತಿದ್ದಾರೆ. ಹಾಗಾಗಿ ರಾಜಸ್ಥಾನ್ ರಾಯಲ್ಸ್ ಪಡಿಕ್ಕಲ್ ಅವರನ್ನು ಕೈ ಬಿಡುವ ಸಾಧ್ಯತೆ ಇದ್ದು, ಮತ್ತೆ ಆರ್ಸಿಬಿ ಇವರನ್ನು ಖರೀದಿ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಅಬ್ಬಬ್ಬಾ! KL ರಾಹುಲ್ ಖರೀದಿಗೆ ಆರ್ಸಿಬಿ ಮೀಸಲಿಟ್ಟ ಹಣ ಎಷ್ಟು ಕೋಟಿ ಗೊತ್ತಾ..?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್