/newsfirstlive-kannada/media/post_attachments/wp-content/uploads/2025/05/YASH_DAYAL-1.jpg)
18 ವರ್ಷಗಳಿಂದ ಐಪಿಎಲ್ ಟ್ರೋಫಿ ಗೆಲ್ಲಬೇಕು ಎನ್ನವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಹತ್ವಾಕಾಂಕ್ಷೆ ಆಗಿದೆ. ಈ ಮೊದಲಿನ ಸೀಸನ್​ಗಳಲ್ಲಿ ಫೈನಲ್​ವರೆಗೆ ಪ್ರವೇಶ ಪಡೆದಿದ್ದರೂ ಕಪ್​ ಮಾತ್ರ ಕೈಜಾರಿ ಹೋಗಿತ್ತು. ಆದರೆ ಈ ಬಾರಿ ಆರ್​ಸಿಬಿ ಟ್ರೋಫಿ ಗೆಲ್ಲುವ ಟೀಮ್​ಗಳಲ್ಲಿ ಪ್ರಮುಖ ತಂಡವಾಗಿ ಕಾಣುತ್ತಿದೆ. ಇದರ ಬೆನ್ನಲ್ಲೇ ಆರ್​ಸಿಬಿಯ ಡೆತ್​ ಓವರ್​ ಸ್ಪೆಷಲಿಸ್ಟ್,​ ಹನುಮಾನ್​ನ ಆಶೀರ್ವಾದ ಪಡೆದುಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2025/05/YASH_DAYAL_HANUMAN.jpg)
ಇತ್ತೀಚೆಗಷ್ಟೇ ಆರ್​ಸಿಬಿ ನಾಯಕ ರಜತ್ ಪಾಟಿದಾರ್, ವಿಕೆಟ್​ ಕೀಪರ್​ ಜಿತೇಶ್ ಶರ್ಮಾ ಹಾಗೂ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ಅವರು ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದಿದ್ದರು. ಇದರ ಬೆನ್ನಲ್ಲೇ ಆರ್​ಸಿಬಿ ತಂಡದ ಡೆತ್ ಓವರ್​ ಸ್ಪೆಷಲಿಸ್ಟ್​ ಯಶ್ ದಯಾಳ್ ಅವರು ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿರುವ ಶ್ರೀ ಬಡೆ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಯಶ್ ದಯಾಳ್ ಅವರು ಪ್ರಯಾಗ್​ರಾಜ್​ನ ಬಡೆ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಆರ್​​ಸಿಬಿ ಆಟಗಾರ ದೇವಾಲಯಕ್ಕೆ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಸ್ವಾಮೀಜಿ, ಯಶ್​ ಹಣೆಗೆ ಕುಂಕುಮವಿಟ್ಟು, ಹೂವಿನ ಹಾರ ಹಾಕಿ ಶುಭವಾಗಲಿ ಎಂದು ಹಾರೈಸಿದ್ದಾರೆ. ಇನ್ನು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್​ ಮಾಡಿ, ಆರ್​ಸಿಬಿ ಗೆಲುವಿಗೆ ಯಶ್​ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು.
/newsfirstlive-kannada/media/post_attachments/wp-content/uploads/2025/05/YASH_DAYAL_HANUMAN_1.jpg)
ಇನ್ನು ಬಡೆ ಹನುಮಾನ್ ದೇವಾಲಯ ಅತ್ಯಂತ ಪ್ರಖ್ಯಾತಿ ಪಡೆದಂತ ಗುಡಿ ಆಗಿದ್ದು ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮದಲ್ಲಿದೆ. ಈ ದೇವಾಲಯ ಮಳೆಗಾಲದಲ್ಲಿ ನೀರಿನಿಂದ ಮುಳುಗಿ ಹೋಗುತ್ತದೆ. ಆದರೆ ಉಳಿದ ದಿನಗಳಲ್ಲಿ ಭಕ್ತರಿಗೆ ತೆರೆದಿರುತ್ತದೆ. ಹೀಗಾಗಿ ಹೆಚ್ಚು ಹೆಚ್ಚು ಜನರು ಈ ದೇವಸ್ಥಾನಕ್ಕೆ ಭೇಟಿ ಕೊಡುತ್ತಿರುತ್ತಾರೆ. ಸದ್ಯ ಇದೀಗ ಆರ್​ಸಿಬಿ ಸ್ಟಾರ್ ಬೌಲರ್ ಆಗಿರುವ ಯಶ್ ದಯಾಳ್ ಅವರು ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us