/newsfirstlive-kannada/media/post_attachments/wp-content/uploads/2025/04/RCB-3.jpg)
ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ಉದ್ವಿಗ್ನ ತೀವ್ರಗೊಂಡಾಗ 2025ರ ಐಪಿಎಲ್ ಟೂರ್ನಿಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಎಲ್ಲವೂ ಶಾಂತವಾದ ಹಿನ್ನೆಲೆಯಲ್ಲಿ ಐಪಿಎಲ್ ಪುನರಾರಂಭವಾಗುತ್ತಿದೆ. ಈ ಪುನರಾರಂಭದ ಐಪಿಎಲ್​ನ ಮೊದಲ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಆರ್​ಸಿಬಿ ಸೆಣಸಾಟ ನಡೆಸಲಿದೆ. ಆದರೆ ಆರ್​ಸಿಬಿಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ಹೈವೋಲ್ಟೇಜ್​ ಮ್ಯಾಚ್ ಮೇ​ 17 ರಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯದಿಂದ ಆರ್​ಸಿಬಿ ಕ್ಯಾಪ್ಟನ್​ ರಜತ್ ಪಾಟಿದಾರ್ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.
ರಜತ್ ಪಾಟಿದಾರ್ ಮೊದಲ ಬಾರಿಗೆ ಆರ್​ಸಿಬಿಯ ನಾಯಕತ್ವ ವಹಿಸಿಕೊಂಡು ಯಶಸ್ಸು ಕಂಡಿದ್ದಾರೆ. ಸದ್ಯ ಈಗ ಪ್ಲೇ ಆಫ್ ಹಂತದಲ್ಲಿ ನಾಯಕ ಬಹು ಮುಖ್ಯ ಪಾತ್ರ ವಹಿಸಬೇಕಿದೆ. ಚೆನ್ನೈ ವಿರುದ್ಧ ಪಂದ್ಯವನ್ನಾಡುವಾಗ ರಜತ್ ಅವರು ಬೆರಳಿನ ಗಾಯಕ್ಕೆ ತುತ್ತಾಗಿದ್ದಾರೆ. ಈಗಾಗಲೇ ಈಗಾಯದಿಂದ ಚೇತರಿಸಿಕೊಂಡಿದ್ದರು ಎನ್ನಲಾಗಿತ್ತು.
/newsfirstlive-kannada/media/post_attachments/wp-content/uploads/2025/04/RAJAT-2.jpg)
ಆದರೆ ಆರ್​ಸಿಬಿ ನಾಯಕ ರಜತ್ ಪಾಟಿದಾರ್​ ಅವರು ಬೆರಳಿನ ಗಾಯಕ್ಕೆ ಒಳಗಾಗಿದ್ದರಿಂದ ಅವರಿಗೆ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಿದೆ ಎಂದು ಹೇಳಲಾಗುತ್ತಿದೆ. ಕೆಕೆಆರ್​ ವಿರುದ್ಧದ ಪಂದ್ಯ ಮಾತ್ರವಲ್ಲ, ಬದಲಾಗಿ ಇಂಗ್ಲೆಂಡ್ ಲಯನ್ಸ್​​ ವಿರುದ್ಧದ ಟೆಸ್ಟ್ ಮ್ಯಾಚ್​ಗೆ​ ಇಂಡಿಯಾ-ಎ ತಂಡದಲ್ಲಿ ಆಡುವ ಸಾಧ್ಯತೆ ಕೂಡ ಕಡಿಮೆ ಇದೆ.
ಭಾರತ -ಪಾಕಿಸ್ತಾನದ ಘರ್ಷಣೆಯಿಂದ ಸ್ಥಗಿತಗೊಂಡ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧದ ಆರ್​ಸಿಬಿ ಪಂದ್ಯದಲ್ಲಿ ರಜತ್ ಪಾಟಿದಾರ್ ಅವರು ಆಡುವುದಿಲ್ಲ ಎಂದು ಹೇಳಲಾಗಿತ್ತು. ಈ ಪಂದ್ಯಕ್ಕೆ ವಿಕೆಟ್​ ಕೀಪರ್ ಜೀತೇಶ್ ಶರ್ಮಾಗೆ ನಾಯಕತ್ವ ಪಟ್ಟ ನೀಡಲು ಎಲ್ಲ ತಯಾರಿ ನಡೆದಿತ್ತು. ಆದರೆ ಪಂದ್ಯ ಸ್ಥಗಿತವಾಗಿತ್ತು. ಹೀಗಾಗಿ ಕೆಕೆಆರ್ ಜೊತೆ ಮೇ 17 ರಂದು ನಡೆಯುವ ಪಂದ್ಯದಲ್ಲಿ ರಜತ್ ಪಾಟಿದಾರ್ ಕಣಕ್ಕೆ ಇಳಿಯಲಿಲ್ಲ ಎಂದರೆ ಜಿತೇಶ್​ ಶರ್ಮಾಗೆ ನಾಯಕನ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us