5 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿಕೆಟ್ ಪಡೆಯಲಾಗದೇ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ವೈಫಲ್ಯ
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಮೊಹಮ್ಮದ್ ಸಿರಾಜ್ ಔಟ್!
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಶುರುವಾಗಿದೆ. ಈ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಕ್ ಟು ಬ್ಯಾಕು 5 ಪಂದ್ಯ ಸೋತಿದೆ. ಇತ್ತೀಚೆಗೆ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲೂ ಹೀನಾಯ ಬೌಲಿಂಗ್ ಕಾರಣಕ್ಕೆ ಆರ್ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿದೆ. ಇದರ ಮಧ್ಯೆ ಆರ್ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
ಇದಕ್ಕೆ ಕಾರಣ ಆರ್ಸಿಬಿ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಫೇಲ್ಯೂರ್ ಆಗಿರುವುದು. ಅದರಲ್ಲೂ ತಂಡದ ಸೋಲಿಗೆ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನ ಕೂಡ ಕಾರಣವಾಗಿದೆ. ಪ್ರತಿ ಪಂದ್ಯದಲ್ಲೂ ಬೌಲರ್ಗಳು ಭಾರೀ ರನ್ಗಳು ಬಿಟ್ಟುಕೊಡೋ ಮೂಲಕ ಬಹಳ ದುಬಾರಿ ಆಗುತ್ತಿದ್ದಾರೆ.
ಆರ್ಸಿಬಿ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆಯಲು ಸಾಧ್ಯವಾಗದೆ ಫೇಲ್ಯೂರ್ ಆಗಿದ್ದಾರೆ. ಆರಂಭದಲ್ಲೇ ಹೆಚ್ಚಿನ ರನ್ ಬಿಟ್ಟುಕೊಟ್ಟು ದುಬಾರಿಯಾಗೋ ಮೂಲಕ ಕಳಪೆ ಫಾರ್ಮ್ನಲ್ಲಿ ಇದ್ದಾರೆ. ಸಿರಾಜ್ 6 ಪಂದ್ಯಗಳಲ್ಲಿ ಕೇವಲ 4 ವಿಕೆಟ್ಗಳನ್ನು ಪಡೆದಿದ್ದಾರೆ. ಹೀಗಾಗಿ ಇವರನ್ನು ಬೆಂಚ್ ಕಾಯಿಸಬೇಕು ಅನ್ನೋ ಮಾತುಗಳು ಕೇಳಿ ಬಂದಿವೆ. ಯಾವುದೇ ಕಾರಣಕ್ಕೂ ಸನ್ರೈಸರ್ಸ್ ಹೈದಾರಾಬಾದ್ ವಿರುದ್ಧ ನಡೆಯೋ ಪಂದ್ಯಕ್ಕೆ ಹಾಕಿಕೊಳ್ಳಬಾರದು ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡಲಾಗುತ್ತಿದೆ. ಆರ್ಸಿಬಿ ಮ್ಯಾನೇಜ್ಮೆಂಟ್ ಕೂಡ ಸಿರಾಜ್ಗೆ ಕೊಕ್ ನೀಡಲಿದೆ ಎನ್ನಲಾಗಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್; ಟೀಮ್ ಇಂಡಿಯಾದಲ್ಲಿ ಕೊಹ್ಲಿಗೆ ಹೊಸ ಜವಾಬ್ದಾರಿ; ಬಿಸಿಸಿಐನಿಂದ ಮಹತ್ವದ ನಿರ್ಧಾರ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
5 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿಕೆಟ್ ಪಡೆಯಲಾಗದೇ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ವೈಫಲ್ಯ
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಮೊಹಮ್ಮದ್ ಸಿರಾಜ್ ಔಟ್!
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಶುರುವಾಗಿದೆ. ಈ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಕ್ ಟು ಬ್ಯಾಕು 5 ಪಂದ್ಯ ಸೋತಿದೆ. ಇತ್ತೀಚೆಗೆ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲೂ ಹೀನಾಯ ಬೌಲಿಂಗ್ ಕಾರಣಕ್ಕೆ ಆರ್ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿದೆ. ಇದರ ಮಧ್ಯೆ ಆರ್ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.
ಇದಕ್ಕೆ ಕಾರಣ ಆರ್ಸಿಬಿ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಫೇಲ್ಯೂರ್ ಆಗಿರುವುದು. ಅದರಲ್ಲೂ ತಂಡದ ಸೋಲಿಗೆ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನ ಕೂಡ ಕಾರಣವಾಗಿದೆ. ಪ್ರತಿ ಪಂದ್ಯದಲ್ಲೂ ಬೌಲರ್ಗಳು ಭಾರೀ ರನ್ಗಳು ಬಿಟ್ಟುಕೊಡೋ ಮೂಲಕ ಬಹಳ ದುಬಾರಿ ಆಗುತ್ತಿದ್ದಾರೆ.
ಆರ್ಸಿಬಿ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆಯಲು ಸಾಧ್ಯವಾಗದೆ ಫೇಲ್ಯೂರ್ ಆಗಿದ್ದಾರೆ. ಆರಂಭದಲ್ಲೇ ಹೆಚ್ಚಿನ ರನ್ ಬಿಟ್ಟುಕೊಟ್ಟು ದುಬಾರಿಯಾಗೋ ಮೂಲಕ ಕಳಪೆ ಫಾರ್ಮ್ನಲ್ಲಿ ಇದ್ದಾರೆ. ಸಿರಾಜ್ 6 ಪಂದ್ಯಗಳಲ್ಲಿ ಕೇವಲ 4 ವಿಕೆಟ್ಗಳನ್ನು ಪಡೆದಿದ್ದಾರೆ. ಹೀಗಾಗಿ ಇವರನ್ನು ಬೆಂಚ್ ಕಾಯಿಸಬೇಕು ಅನ್ನೋ ಮಾತುಗಳು ಕೇಳಿ ಬಂದಿವೆ. ಯಾವುದೇ ಕಾರಣಕ್ಕೂ ಸನ್ರೈಸರ್ಸ್ ಹೈದಾರಾಬಾದ್ ವಿರುದ್ಧ ನಡೆಯೋ ಪಂದ್ಯಕ್ಕೆ ಹಾಕಿಕೊಳ್ಳಬಾರದು ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡಲಾಗುತ್ತಿದೆ. ಆರ್ಸಿಬಿ ಮ್ಯಾನೇಜ್ಮೆಂಟ್ ಕೂಡ ಸಿರಾಜ್ಗೆ ಕೊಕ್ ನೀಡಲಿದೆ ಎನ್ನಲಾಗಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್; ಟೀಮ್ ಇಂಡಿಯಾದಲ್ಲಿ ಕೊಹ್ಲಿಗೆ ಹೊಸ ಜವಾಬ್ದಾರಿ; ಬಿಸಿಸಿಐನಿಂದ ಮಹತ್ವದ ನಿರ್ಧಾರ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್