/newsfirstlive-kannada/media/post_attachments/wp-content/uploads/2024/11/RINKU_TILAK.jpg)
ಇತ್ತೀಚೆಗೆ ನಡೆದ 2ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಸೋಲು ಕಂಡಿದೆ. ಮೊದಲ ಪಂದ್ಯದಿಂದ 61 ರನ್ಗಳಿಂದ ರೋಚಕ ಗೆಲುವು ಸಾಧಿಸಿದ್ದ ಟೀಮ್ ಇಂಡಿಯಾ 2ನೇ ಟಿ20 ಮ್ಯಾಚ್ ಸೋಲಿಗೆ ಕಾರಣ ಬ್ಯಾಟಿಂಗ್ ವೈಫಲ್ಯ.
ಇನ್ನು, 3ನೇ ಟಿ20 ಪಂದ್ಯ ಗೆದ್ದು ಹೇಗಾದ್ರೂ ಟಿ20 ಸರಣಿ ವಶಪಡಿಸಿಕೊಳ್ಳೋ ಯೋಚನೆಯಲ್ಲಿ ಟೀಮ್ ಇಂಡಿಯಾ ಇದೆ. ಅದಕ್ಕಾಗಿ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಭರ್ಜರಿ ಸರ್ಕಸ್ ಮಾಡುತ್ತಿದ್ದಾರೆ. ಮುಂದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ನಲ್ಲಿ ಮೇಜರ್ ಸರ್ಜರಿ ಆಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯಶ್ ದಯಾಳ್ ಡೆಬ್ಯೂ ಮಾಡಲಿದ್ದಾರೆ.
ಸಂಜು ಸ್ಯಾಮ್ಸನ್ ಮೇಲೆ ಎಲ್ಲರ ಕಣ್ಣು
ಟೀಮ್ ಇಂಡಿಯಾ ವಿರುದ್ಧ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾಗೆ ಹೀನಾಯ ಸೋಲಾಗಿತ್ತು. ಕೇವಲ 17.5 ಓವರ್ನಲ್ಲೇ ಆಲೌಟ್ ಆದ ಕಾರಣ 20 ಓವರ್ ಆಡಲು ಆಗಿರಲಿಲ್ಲ. ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದಿದ್ದ ಸಂಜು ಸ್ಯಾಮ್ಸನ್ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಆದರೆ, 2ನೇ ಪಂದ್ಯದಲ್ಲಿ ಸ್ಯಾಮ್ಸನ್ ಡಕೌಟ್ ಆದ್ರು. ಮುಂದಿನ ಪಂದ್ಯದಲ್ಲಿ ಇವರ ಮೇಲೆ ಬಹಳ ಭರವಸೆ ಇದೆ.
ಸೆಂಚೂರಿ ಸ್ಟಾರ್ಗೆ ಗೇಟ್ಪಾಸ್
ಟೀಮ್ ಇಂಡಿಯಾದ ಸ್ಟಾರ್ ಯುವ ಬ್ಯಾಟರ್ ಅಭಿಷೇಕ್ ಶರ್ಮಾ. ಇವರು ರನ್ ಕಲೆ ಹಾಕುವಲ್ಲಿ ಫೇಲ್ಯೂರ್ ಆಗುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಅವರದ್ದು ದೊಡ್ಡ ಚಿಂತೆಯಾಗಿದೆ. ಕಾರಣ ಇವರು ಇದುವರೆಗೆ ಆಡಿರೋ 9 ಇನ್ನಿಂಗ್ಸ್ನಲ್ಲಿ 1 ಶತಕ ಸಿಡಿಸಿದ್ರು. ಉಳಿದ 7 ಇನ್ನಿಂಗ್ಸ್ಗಳಲ್ಲಿ ಅಭಿಷೇಕ್ ಹೈಎಸ್ಟ್ ಸ್ಕೋರ್ ಕೇವಲ 16 ರನ್. ನಿನ್ನೆಯೂ ಅಭಿಷೇಕ್ ಕೇವಲ 4 ರನ್ಗೆ ವಿಕೆಟ್ ಒಪ್ಪಿಸಿದ್ರು. ಹೀಗಾಗಿ ಇವರು ರನ್ ಕಲೆ ಹಾಕದೆ ಹೋದಲ್ಲಿ ಮುಂದಿನ ಎಲ್ಲಾ ಪಂದ್ಯಗಳಿಂದಲೂ ಗೇಟ್ಪಾಸ್ ನೀಡುವ ಸಾಧ್ಯತೆ ಇದೆ.
ಮಧ್ಯಮ ಕ್ರಮಾಂಕದ ಬ್ಯಾಟರ್ಸ್ ಅಬ್ಬರಿಸಲೇಬೇಕು
ಟೀಮ್ ಇಂಡಿಯಾದ ಪರ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಿಂಕು ಸಿಂಗ್ ಇದ್ದಾರೆ. ಇವರು ಸ್ಥಿರ ಪ್ರದರ್ಶನ ನೀಡಬೇಕಿದೆ. ಸ್ಟಾರ್ ಆಲ್ರೌಂಡರ್ಸ್ ಆದ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ತಮ್ಮ ಕ್ಷಮತೆ ಪ್ರದರ್ಶಿಸಲೇಬೇಕಿದೆ.
2ನೇ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಅರ್ಷದೀಪ್ ಸಿಂಗ್ ಬದಲಿಗೆ ಆರ್ಸಿಬಿ ಸ್ಟಾರ್ ಬೌಲರ್ ಡೆಬ್ಯೂ ಮಾಡುವ ಸಾಧ್ಯತೆ ಇದೆ. ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ ಕೂಡ ತಂಡದ ಭಾಗವಾಗಿ ಇರಲಿದ್ದಾರೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ಹೀಗಿದೆ!
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಯಶ್ ದಯಾಳ್, ಆವೇಶ್ ಖಾನ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ