/newsfirstlive-kannada/media/post_attachments/wp-content/uploads/2025/04/RAJAT_PATIDAR.jpg)
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ನ ಪಂದ್ಯದಲ್ಲಿ ಆರ್ಸಿಬಿ ಯುವ ಬ್ಯಾಟ್ಸ್ಮನ್ ಕೇವಲ 12 ರನ್ಗೆ ವಿಕೆಟ್ ಒಪ್ಪಿಸಿದ್ರೆ, ಕನ್ನಡಿಗ ದೇವದತ್ ಪಡಿಕ್ಕಲ್ ಡಕೌಟ್, ರಜತ್ ಪಾಟಿದಾರ್ ಔಟ್ ಆಗಿದ್ದಾರೆ.
ದೆಹಲಿಯಲ್ಲಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 8 ವಿಕೆಟ್ಗೆ 163 ರನ್ಗಳ ಗುರಿಯನ್ನು ನೀಡಿದೆ. ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಟೀಮ್, ಆರ್ಸಿಬಿಗೆ ಸಾಧಾರಣ ಮೊತ್ತದ ಗುರಿಯನ್ನು ನೀಡಿದೆ. ಸದ್ಯ ಇದೀಗ ಬ್ಯಾಟಿಂಗ್ ಆರಂಭಿಸಿರುವ ಆರ್ಸಿಬಿ 26 ರನ್ಗೆ ತನ್ನ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡಿದೆ.
ಇದನ್ನೂ ಓದಿ:ಪಾಂಡ್ಯಗೆ ಅದೃಷ್ಟ ಕೈ ಹಿಡಿಯಿತಾ..? LSG ವಿರುದ್ಧ ಗೆಲ್ತಿದ್ದಂತೆ ಪಾಯಿಂಟ್ ಟೇಬಲ್ನಲ್ಲಿ ಮುಂಬೈ ಭಾರೀ ಜಿಗಿತ
ವಿಸ್ಫೋಟಕ ಬ್ಯಾಟರ್ ಫಿಲಿಪ್ ಸಾಲ್ಟ್ ಬದಲಿಗೆ ಆರ್ಸಿಬಿ ಪರ ವಿರಾಟ್ ಕೊಹ್ಲಿ ಜೊತೆ ಕ್ರೀಸ್ಗೆ ಆಗಮಿಸಿದ್ದ ಜಾಕೋಬ್ ಬೆಥೆಲ್ 6 ಎಸೆತದಲ್ಲಿ 1 ಬೌಂಡರಿ, 1 ಸಿಕ್ಸರ್ನಿಂದ 12 ರನ್ ಗಳಿಸಿ ಆಡುತ್ತಿದ್ದರು. ಈ ವೇಳೆ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಸ್ಪಿನ್ ಬೌಲಿಂಗ್ನಲ್ಲಿ ಕರುಣ್ ನಾಯರ್ಗೆ ಕ್ಯಾಚ್ ಕೊಟ್ಟಿದ್ದಾರೆ. ಬೆಥೆಲ್ ನಂತರ ಕ್ರೀಸ್ಗೆ ಆಗಮಿಸಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ ಡಕೌಟ್ ಆಗಿದ್ದಾರೆ. ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಪಡಿಕ್ಕಲ್ ಈ ಪಂದ್ಯದಲ್ಲಿ ಸೊನ್ನೆ ಸುತ್ತಿದ್ದಾರೆ.
ಕಳೆದ ಪಂದ್ಯದಲ್ಲೂ ಬ್ಯಾಟಿಂಗ್ನಲ್ಲಿ ವಿಫಲರಾಗಿದ್ದ ಕ್ಯಾಪ್ಟನ್ ರಜತ್ ಪಾಟಿದಾರ್ ಅವರು ಈ ಪಂದ್ಯದಲ್ಲೂ ತಂಡಕ್ಕೆ ಉತ್ತಮ ರನ್ಗಳ ಕಾಣಿಕೆ ನೀಡುವಲ್ಲಿ ವಿಫಲರಾಗಿದ್ದಾರೆ. 6 ರನ್ ಗಳಿಸಿ ಆಡುವಾಗ ರನೌಟ್ಗೆ ಬಲಿಯಾಗಿದ್ದಾರೆ. ಕರುಣ್ ನಾಯರ್ ಎಸೆದ ಚೆಂಡು ವಿಕೆಟ್ಗೆ ಬಿದ್ದಿದ್ದರಿಂದ ರಜತ್ ಕ್ರೀಸ್ನಿಂದ ಹೊರ ನಡೆದರು. ಸದ್ಯ 26 ರನ್ಗೆ 3 ವಿಕೆಟ್ ಕಳೆದುಕೊಂಡಿರುವ ಆರ್ಸಿಬಿ ಸಂಕಷ್ಟದಲ್ಲಿದೆ ಎಂದು ಹೇಳಬಹುದು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ