/newsfirstlive-kannada/media/post_attachments/wp-content/uploads/2024/04/KL_RAHUL_RCB.jpg)
ಇತ್ತೀಚೆಗೆ ಲಕ್ನೋ ಸೂಪರ್​ ಜೈಂಟ್ಸ್​ ತಂಡ ತೊರೆದ ಕೆ.ಎಲ್​ ರಾಹುಲ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಸೇರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಈ ಮಧ್ಯೆ ಆರ್​​ಸಿಬಿ ತಂಡ ಮಾಕ್​ ಆಕ್ಷನ್​ನಲ್ಲಿ ರಾಹುಲ್​ ಅವರನ್ನು ಖರೀದಿ ಮಾಡಿದೆ.
ಮಾಕ್​ ಆಕ್ಷನ್​​ನಲ್ಲಿ ಆರ್​​ಸಿಬಿಗೆ ರಾಹುಲ್
ಇನ್ನು, ಮೆಗಾ ಹರಾಜಿಗೆ ಮುನ್ನ ಸನ್​ರೈಸರ್ಸ್​ ಹೈದರಾಬಾದ್​ ತಂಡದಿಂದ ಮಾಕ್​​​ ಆಕ್ಷನ್​​ ನಡೆಸಲಾಯ್ತು. ಸನ್​ರೈಸರ್ಸ್​ ಹೈದರಾಬಾದ್​ ನಡೆಸಿದ ಮಾಕ್​ ಆಕ್ಷನ್​​ನಲ್ಲಿ ಕನ್ನಡಿಗ ಕೆ.ಎಲ್​ ರಾಹುಲ್​ ಅವರನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರೋಬ್ಬರಿ 18 ಕೋಟಿ ನೀಡಿ ಖರೀದಿ ಮಾಡಿದೆ. ಕೆಕೆಆರ್​​, ಹೈದರಾಬಾದ್​​, ಮುಂಬೈ, ಬೆಂಗಳೂರು ಫ್ರಾಂಚೈಸಿ ಮಧ್ಯೆ ರಾಹುಲ್​ ಖರೀದಿಗೆ ಪೈಪೋಟಿ ನಡೆಯಿತು. ಕೊನೆಗೂ ರಾಹುಲ್​ ಆರ್​​ಸಿಬಿಗೆ ಮಾಕ್​ ಆಕ್ಷನ್​​ನಲ್ಲಿ ಸಿಕ್ಕರು.
Kl Rahul Sold for 18CR to RCB at Our Mock auctions! pic.twitter.com/r3pWpPUNO1
— SunRisers OrangeArmy Official (@srhfansofficial)
Kl Rahul Sold for 18CR to RCB at Our Mock auctions! pic.twitter.com/r3pWpPUNO1
— SunRisers OrangeArmy Official (@srhfansofficial) November 17, 2024
">November 17, 2024
2025ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈಗಾಗಲೇ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತನ್ನ ರೀಟೈನ್​ ಲಿಸ್ಟ್​​ ರಿಲೀಸ್​ ಮಾಡಿದೆ. ಆರ್​​​ಸಿಬಿ ಟೀಮ್​​​ ಮೊದಲು ರೀಟೈನ್​ ಮಾಡಿಕೊಂಡಿದ್ದು ವಿರಾಟ್​​ ಕೊಹ್ಲಿ. 2ನೇ ಆಯ್ಕೆ ರಜತ್​ ಪಾಟಿದಾರ್​​ ಮತ್ತು 3ನೇ ಆಯ್ಕೆಯಾಗಿ ಯಶ್​ ದಯಾಳ್​​ ಅವರನ್ನು ಉಳಿಸಿಕೊಂಡಿದೆ.
ಆರ್​​ಸಿಬಿ ತಂಡ ವಿರಾಟ್​ ಕೊಹ್ಲಿ ಅವರಿಗೆ ಬರೋಬ್ಬರಿ 21 ಕೋಟಿ ನೀಡಿ ಉಳಿಸಿಕೊಂಡಿದೆ. ರಜತ್​ ಪಾಟಿದಾರ್​ ಅವರಿಗೆ 11 ಕೋಟಿ ಮತ್ತು ಯಶ್​ ದಯಾಳ್​ ಅವರಿಗೆ 5 ಕೋಟಿ ನೀಡಿ ರೀಟೈನ್​ ಮಾಡಿಕೊಳ್ಳಲಾಗಿದೆ. ಈ ಮೂವರಿಗಾಗಿ ಆರ್​​ಸಿಬಿ ಸುಮಾರು 37 ಕೋಟಿ ಖರ್ಚು ಮಾಡಿದೆ.
ಬೆಂಗಳೂರು ಪ್ಲಾನ್ ಏನು?​
ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಹಾಗಾಗಿ ವರ್ಷದ ಕೊನೆ ಡಿಸೆಂಬರ್​ನಲ್ಲಿ ನಡೆಯಲಿರೋ 2025ರ ಐಪಿಎಲ್​​​​ ಮೆಗಾ ಆಕ್ಷನ್​​ನಲ್ಲಿ ಸ್ಟಾರ್​ ಆಟಗಾರರಿಗೆ ಮಣೆ ಹಾಕಬೇಕು. ಈ ಮೂಲಕ ಬಲಿಷ್ಠ ತಂಡ ಕಟ್ಟಬೇಕು ಎಂಬುದು ಆರ್​​ಸಿಬಿ ಪ್ಲಾನ್​​. ಅದರಲ್ಲೂ ರಾಹುಲ್​ ಖರೀದಿ ಮಾಡಲೇಬೇಕು ಎಂಬುದು ಆರ್​​ಸಿಬಿ ಸ್ಟ್ರಾಟರ್ಜಿ.
ಆರ್​ಸಿಬಿ ಸೇರೋ ಬಗ್ಗೆ ಕೆ.ಎಲ್​ ರಾಹುಲ್​​ ಏನಂದ್ರು?
ಈ ಬಗ್ಗೆ ಹಿಂದೆ ಮಾತಾಡಿದ್ದ ಕೆ.ಎಲ್​ ರಾಹುಲ್​​, ಆರ್​​​ಸಿಬಿ ಬೆಂಗಳೂರು ಫ್ರಾಂಚೈಸಿ. ನಾನು ಬೆಂಗಳೂರು ಹುಡುಗ. ಎಲ್ಲರೂ ನನ್ನ ಲೋಕಲ್​ ಬಾಯ್​ ಎಂದು ಕರೆಯುತ್ತಾರೆ. 2016 ರಲ್ಲಿ ಆರ್​​​ಸಿಬಿ ಪರ ಆಡಿದ್ದು, ಬಹಳ ಖುಷಿ ತಂದಿತ್ತು. ಮತ್ತೆ ಆರ್​​ಸಿಬಿ ಸೇರೋ ಆಸೆ ಇದೆ. ಆದರೆ, ಆಕ್ಷನ್​​ನಲ್ಲಿ ಏನಾಗುತ್ತೋ ಕಾದು ನೋಡಬೇಕು ಎಂದರು.
ಇದನ್ನೂ ಓದಿ: ಹರಾಜಿಗೆ ಮುನ್ನ RCB ಮಹತ್ವದ ಹೆಜ್ಜೆ; ಬೆಂಗಳೂರು ತಂಡ ಸೇರಿದ ಚಾಂಪಿಯನ್ ಕೋಚ್
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us