ಹೊಸ ಬಾಂಬ್ ಸಿಡಿಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ; ರಾಜೀನಾಮೆ ಕೊಡಲು ಸಿದ್ಧ ಎಂದಿದ್ದೇಕೆ?

author-image
Veena Gangani
Updated On
ಹೊಸ ಬಾಂಬ್ ಸಿಡಿಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ; ರಾಜೀನಾಮೆ ಕೊಡಲು ಸಿದ್ಧ ಎಂದಿದ್ದೇಕೆ?
Advertisment
  • ನಾವು ಪ್ರಯತ್ನಿಸಿದ್ದರು, ಅವರು ಇನ್ನೂ ನಮ್ಮ ಮನವಿಗೆ ಒಪ್ಪಿಲ್ಲ!
  • ಸುಮಾರು ಒಂದೂವರೆ ಗಂಟೆಗಳ ಕಾಲ ಕಾದಿದ್ರು ಮುಖ್ಯಮಂತ್ರಿ
  • ಕೋಲ್ಕತಾದ ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆದ ಘಟನೆ ವಿಚಾರ

ನವದೆಹಲಿ: ಕೋಲ್ಕತಾದ ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ದೊಡ್ಡ ಬಾಂಬ್​ವೊಂದನ್ನು ಸಿಡಿಸಿದ್ದಾರೆ.

ಇದನ್ನೂ ಓದಿ: ವರುಣ್ ಆರಾಧ್ಯ ಮತ್ತು ಮಾಜಿ ಪ್ರೇಯಸಿಯ ಕತೆಯಲ್ಲಿ ಬಿಗ್​​ ಟ್ವಿಸ್ಟ್​​! ಇನ್​​ಸ್ಟಾಗ್ರಾಂನಲ್ಲಿ ಹೀಗೊಂದು ಪೋಸ್ಟ್​

ವೈದ್ಯರು ನಡೆಸುತ್ತಿರುವ ಪ್ರತಿಭಟನೆ ವಿಚಾರದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಟಿಎಂಸಿ ಸರ್ಕಾರದ ನಡುವೆ ಉಂಟಾಗಿರುವ ಸಂಘರ್ಷದ ನಡುವೆ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ. ಮಮತಾ ಅವರೊಂದಿಗೆ ಮಾತುಕತೆ ನಡೆಸಬೇಕಿದ್ದ ವೈದ್ಯರು, ನೇರ ಪ್ರಸಾರದ ಸೌಲಭ್ಯ ಇಲ್ಲದ ಕಾರಣ ಅದಕ್ಕೆ ನಿರಾಕರಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜನರ ಹಿತಾಸಕ್ತಿ ರಕ್ಷಿಸುವ ಸಲುವಾಗಿ ನನ್ನ ರಾಜೀನಾಮೆಗೂ ಸಿದ್ಧ, ಆರ್ ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆಗೆ ನಾನು ಕೂಡಾ ನ್ಯಾಯ ಬಯಸುತ್ತೇನೆ ಎಂದಿದ್ದಾರೆ.

publive-image

ಮುಖ್ಯಮಂತ್ರಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಾದಿದ್ದಾರೆ. ಇಂತಹ ಬೇಡಿಕೆಗೂ ಒಂದು ಮಿತಿ ಇರುತ್ತದೆ. ವೈದ್ಯರ ಮನವೊಲಿಸಲು ನಾವು ಪ್ರಯತ್ನಿಸಿದೆವು. ಆದರೆ, ಅವರು ಇನ್ನೂ ನಮ್ಮ ಮನವಿಗೆ ಒಪ್ಪಿಲ್ಲ. ಈ ಸಭೆಗೆ ಪಾಲ್ಗೊಳ್ಳುವಂತೆ ಅವರಿಗೆ ಮನವಿ ಕಳುಹಿಸಲಾಗಿತ್ತು ಎಂದು ಮುಖ್ಯ ಕಾರ್ಯದರ್ಶಿ ಪಂತ್ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment