Advertisment

ಜಾಮೀನು ಸಿಕ್ಕರೂ ಬಿಡುಗಡೆ ಇಲ್ಲ; A4 ಜಗದೀಶ್ ತಾಯಿ ಅಳಲು ಏನು..?

author-image
Ganesh
Updated On
ಜಾಮೀನು ಸಿಕ್ಕರೂ ಬಿಡುಗಡೆ ಇಲ್ಲ; A4 ಜಗದೀಶ್ ತಾಯಿ ಅಳಲು ಏನು..?
Advertisment
  • ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್​
  • ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಸೇರಿರುವ ಜಗದೀಶ್
  • ದರ್ಶನ್ ಅವರೇ ಬಿಡಿಸಿಕೊಂಡು ಬರಬೇಕು ಎಂದು ಅಳಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಾಲ್ಕನೇ ಆರೋಪಿ ಜಗದೀಶ್​​ಗೆ ಜಾಮೀನು ಸಿಕ್ಕಿದ್ದು, ಇನ್ನೂ ಬಿಡುಗಡೆ ಆಗಿಲ್ಲ. ಇಡೀ ದಿನ ನಮ್ಮವರು ತಮ್ಮವರು ಎನ್ನುವವರ ಬಳಿ ಹೋಗಿ ಕೇಳಿದ್ವಿ, ಯಾರೂ ಶ್ಯೂರಿಟಿ ಕೊಡಲು ಮುಂದೆ ಬರುತ್ತಿಲ್ಲ ಅಂತ ಆರೋಪಿ ಜಗದೀಶ್ ತಾಯಿ ಸುಲೋಚನಮ್ಮ ಹೇಳಿದ್ದಾರೆ.

Advertisment

ನಮಗೆ ಆತ್ಮೀಯರು ಒಬ್ಬರು ಶ್ಯೂರಿಟಿ ಹಾಕಲು ಮುಂದೆ ಬಂದಿದ್ದಾರೆ. ಆದ್ರೆ ಶ್ಯೂರಿಟಿ ಹಾಕಲು ಇಬ್ಬರು ಬೇಕು ಹಾಗಾಗಿ ಇನ್ನೊಬ್ಬರಿಗಾಗಿ ಹುಡುಕುತ್ತಿದ್ದೇವೆ. ಊಟ, ನೀರು ಬಿಟ್ಟು ಊರೂರು ಅಲೆದಾಟ ಮಾಡ್ತಿದೇವೆ. ದರ್ಶನ್ ಅವರು ಈ ಸಮಯದಲ್ಲಿ ಕೈ ಹಿಡಿಯಬೇಕಿದೆ. 6 ತಿಂಗಳು ನಂತರನಾದರೂ ಮಗ ಮನೆಗೆ ಬರುತ್ತಾರೆಂದು ಖುಷಿಯಾಗಿದೆ.

ಇದನ್ನೂ ಓದಿ:ಭಿಕ್ಷೆ ಬೇಡೋದನ್ನೇ ವ್ಯಾವಹಾರಿಕ ಉದ್ಯಮವಾಗಿ ಬದಲಾಯಿಸಿದ ಪಾಕ್.. ಅರಬ್ ರಾಷ್ಟ್ರಗಳು ಎಚ್ಚರಿಕೆ

ಈಗ ನೋಡಿದ್ರೆ ಸಮಸ್ಯೆಗಳು ಒಂದರ ಮೇಲೆ ಒಂದು ಬರುತ್ತಿವೆ. ದರ್ಶನ್ ಅವರೇ ಶ್ಯೂರಿಟಿ ವ್ಯವಸ್ಥೆ ಮಾಡಬೇಕು ಅಂತ ಆರೋಪಿ ಜಗದೀಶ್ ತಾಯಿ ಮನವಿ ಮಾಡಿದ್ದಾರೆ. ಹೇಗೊ ನಮ್ಮ ಮಗ ಮನೆಗೆ ಬಂದರೆ ನಮಗೆ ಅನುಕೂಲವಾಗುತ್ತದೆ. ಆರು ತಿಂಗಳು ನಂತರವಾದರೂ ಮಗ ಮನೆಗೆ ಬರುತ್ತಾರೆಂದು ಖುಷಿಯಾಗಿದೆ. ಈಗ ನೋಡಿದ್ರೆ ಸಮಸ್ಯೆಗಳು ಒಂದರ ಮೇಲೆ ಒಂದು ಬರುತ್ತಿವೆ ಎಂದಿದ್ದಾರೆ.

Advertisment

ಕಳೆದ ಶುಕ್ರವಾರ ರೇಣುಕಾಸ್ವಾಮಿ ಕೇಸ್​ನಲ್ಲಿ ದರ್ಶನ್, ಪವಿತ್ರಗೌಡ ಸೇರಿ ಒಟ್ಟು 7 ಮಂದಿಗೆ ಹೈಕೋರ್ಟ್​ ಪೂರ್ಣಾವಧಿಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್​ಗೆ ಜಾಮೀನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ಪುಷ್ಪಾ 2 ಸಿನಿಮಾ ವೇಳೆ ನಡೆದ ಕಾಲ್ತುಳಿತ; ಮೃತ ರೇವತಿ ಮಗನ ಆರೋಗ್ಯ ಸ್ಥಿತಿ ಚಿಂತಾಜನಕ !

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment