/newsfirstlive-kannada/media/post_attachments/wp-content/uploads/2025/01/Darshan-Pavithra-gowda.jpg)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಲಿದ್ದಾರೆ.
ಇದನ್ನೂ ಓದಿ: ಸೀರಿಯಲ್ ಮುಗಿಯುತ್ತಿದ್ದಂತೆ ಸಖತ್ ಬ್ಯುಸಿಯಾದ ಲಕ್ಷ್ಮೀ; ನಟಿ ಭೂಮಿಕಾ ರಮೇಶ್ ನೆಕ್ಸ್ಟ್ ಪ್ಲಾನ್ ಏನು?
ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕಿತ್ತು. ಹೀಗಾಗಿ ಇಂದು ಎಲ್ಲರೂ ಕೋರ್ಟ್ಗೆ ಹಾಜರಾಗಲಿದ್ದಾರೆ. ಈಗ ಹಲವು ದಿನಗಳ ನಂತರ ಮತ್ತೆ ದರ್ಶನ್ ಭೇಟಿಯಾಗುವ ಸಾಧ್ಯತೆಯಿದೆ.
ಸದ್ಯ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್ನಿಂದ ಅನುಮತಿ ಪಡೆದು ಹಲವು ರಾಜ್ಯಗಳನ್ನು ಸುತ್ತಿ ಬಂದಿದ್ದಾರೆ. ಇಂದು ಕೋರ್ಟ್ನಲ್ಲಿ ಮತ್ತೆ ಮುಖಾ ಮುಖಿಯಾಗಲಿದ್ದಾರೆ. ಹೈಕೋರ್ಟ್ನಿಂದ ಜಾಮೀನು ಪಡೆದಿರುವ ದರ್ಶನ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಈಗಾಗಲೇ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ, ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿಕೆ ಮಾಡಿದೆ. ಇದರ ಮಧ್ಯೆ ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ