newsfirstkannada.com

EXCLUSIVE: ಅಂಗಿ, ಬನಿಯಾನ್​ ಹರಿದು ವಿಕೃತಿ.. ಡಿಲೀಟ್​ ಆದ ರೇಣುಕಾಸ್ವಾಮಿ ಫೋಟೋ ಪತ್ತೆ  

Share :

Published September 5, 2024 at 9:03am

Update September 5, 2024 at 9:13am

    ರಿಟ್ರೀವ್​ ವೇಳೆ ಸಿಕ್ತು 10ಕ್ಕೂ ಹೆಚ್ಚು ಫೋಟೋಗಳು

    FSL ಟೀಂ ​ಕೈ ಸೇರಿರುವ ಆ ಹತ್ತು ಫೋಟೋಗಳು ಯಾವ್ಯಾವುವು?

    ಅಂಗಲಾಚುತ್ತಿರೋ ರೇಣುಕಾಸ್ವಾಮಿ ಕತೆ ಹೇಳಿತ್ತಿದೆ ಈ ಫೋಟೋ

ರೇಣುಕಾಸ್ವಾಮಿ ಕೊಲೆ ಮಾಡಿದ ಬಳಿಕ ಡಿಲೀಟ್​​ ಮಾಡಿದ್ದ ಫೋಟೋಗಳನ್ನು ಪೊಲೀಸರು ಆರೋಪಿಗಳ ಮೊಬೈಲ್​ನಿಂದ ರಿಟ್ರೀವ್​ ಮಾಡಿದ್ದಾರೆ. 10ಕ್ಕೂ ಹೆಚ್ಚು ಫೋಟೋ ರಿಟ್ರೀವ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ನೂಸ್ಟ್​ಫಸ್ಟ್​ಗೂ ಕೆಲವು ಫೋಟೋಗಳು ಸಿಕ್ಕಿವೆ.

ಕೊಲೆಗೂ ಮುನ್ನ ವಿನಯ್ ಮೊಬೈಲ್​ನಲ್ಲಿ ಸೆರೆಯಾದ ರೇಣುಕಾಸ್ವಾಮಿ ಫೋಟೋಸ್ ಪತ್ತೆಯಾಗಿತ್ತು. ಆರೋಪಿ ವಿನಯ್ ಮೊಬೈಲ್​​ನಲ್ಲಿ ಫೋಟೋ ಕ್ಲಿಕ್ಕಿಸಿ ಡಿಲೀಟ್ ಮಾಡಿದ್ದನು. ಡಿಲೀಟ್ ಆದ ಫೋಟೋಗಳನ್ನ FSL ಟೀಂ ​ರಿಟ್ರೀವ್ ಮಾಡಿದೆ.

ಕೊಲೆಯ ಭೀಕರತೆಯನ್ನು ಹೇಳಿದ ಫೋಟೋ 

ಕಿಡ್ನಾಪ್ ಮಾಡಿದ ಬಳಿಕ ರೇಣುಕಾಸ್ವಾಮಿಯನ್ನ ಶೆಡ್​ಗೆ ಕರೆತಂದಿದ್ದರು. ಆರೋಪಿಗಳಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ಮಾಡಿದ್ದರು. ಪವನ್, ಧನರಾಜ್ ಮತ್ತು 5 ಮಂದಿಯಿಂದ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಬಳಿಕ ಎಲೆಕ್ಟ್ರಿಕ್ ಮೆಗ್ಗರ್​ನಿಂದ ಆತನ ಕೈಗಳಿಗೆ ಬರೆ ಹಾಕಿದ್ದಾರೆ. ಶೆಡ್​ನಲ್ಲಿ ನಿಲ್ಲಿಸಿದ್ದ ವಾಹನಗಳ ಬಳಿ ಚೆನ್ನಾಗಿ ಹೊಡೆದು ಅಲ್ಲೇ ಬಿಸಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:  EXCLUSIVE: ಕೈಮುಗಿದು ಬೇಡಿಕೊಳ್ತಿರುವ ರೇಣುಕಾಸ್ವಾಮಿ, ಡಿಲೀಟ್ ಮಾಡಿದ್ದ ಫೋಟೋಸ್ ಪತ್ತೆ

ಫೋಟೋ ತೆಗೆದದ್ದು ಯಾರು?

ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡುವಾಗ ಚಿರಾಡಿದ್ದಾನಂತೆ. ಅದೇ ವೇಳೆ ಅಟ್ಟಹಾಸದಲ್ಲಿ ಆರೋಪಿಗಳು ಕೂಗಾಡಿದ್ದಾರಂತೆ. ಈ ವೇಳೆ ಗೇಟ್ ಹೊರಗಿದ್ದ ಸೆಕ್ಯೂರಿಟಿ ಒಳಗೆ ಬಂದಿದ್ದಾರೆ. ಹಲ್ಲೆ ಮಾಡಿದನ್ನ ಸೆಕ್ಯೂರಿಟಿ ಗಾರ್ಡ್ ಕಣ್ಣಾರೆ ನೋಡಿದ್ದಾರೆ. ಬಳಿಕ ತಕ್ಷಣ ವಿನಯ್​ಗೆ ಫೋನ್​ ಮಾಡಿದ್ದಾನೆ ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ಸೆಕ್ಯೂರಿಟಿ ಗಾರ್ಡ್ ಐ ವಿಟ್ನೇಸ್ ಆಗಿದ್ದು, ಈ ವೇಳೆ ವಿನಯ್ ಅವರು ನಮ್ಮವರೇ ಬಿಡು ಎಂದು ಸೆಕ್ಯೂರಿಟಿ ಗಾರ್ಡ್​ ಬಳಿ ಹೇಳಿದ್ದಾನಂತೆ. ನಂತರ ರೇಣುಕಾಸ್ವಾಮಿ ಫೋಟೋ ಕಳಿಸುವುದಕ್ಕೆ ವಿನಯ್ ಹೇಳಿದ್ದಾನೆ. ಆಗ ಸೆಕ್ಯೂರಿಟಿ ಫೋಟೋ ತೆಗೆದು ವಿನಯ್​​ಗೆ ಕಳಿಸಿದ್ದಾನೆ. ವಿನಯ್ ಆ ಫೋಟೋಗಳನ್ನ ನಟ ದರ್ಶನ್​ಗೆ ತೋರಿಸಿದ್ದಾನೆ. ಫೋಟೋಸ್​ ನೋಡಿದ ಬಳಿಕ ದರ್ಶನ್ ಶೆಡ್​ಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಅಂಗಲಾಚುತ್ತಿರೋ ರೇಣುಕಾಸ್ವಾಮಿ

ಗಾಯಗೊಂಡ ರೇಣುಕಾಸ್ವಾಮಿ ಅಂಗಲಾಚ್ತಿರೋ ಫೋಟೋ ರಿಟ್ರೀವ್​ ಬಳಿಕ ಸಿಕ್ಕಿದೆ. ತನ್ನ ಬಿಟ್ಟು ಬಿಡುವಂತೆ ಬೇಡಿಕೊಂಡತೆ ಫೋಟೋ ಕಾಣಿಸಿದೆ. ತಪ್ಪಾಯ್ತು ಎಂದು ಅಳುತ್ತಿರುವ ಮತ್ತು ಮೈಮೇಲೆ ಹಾಕಿದ್ದ ಆತನ ಬನಿಯನ್ ಸಹ ಕಿತ್ತು ಹಾಕಿರುವುದನ್ನು ಫೋಟೋಗಳಲ್ಲಿ ಕಂಡಿವೆ.

ಫೋಟೋ​ ಹಿಂದಿನ ಕಥೆ ಏನು?

ಆರೋಪಿ ದರ್ಶನ್ ಶೆಡ್​ಗೆ ಬಂದು ದರ್ಶನ್​ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಕೆಳಗೆ ಬಿದ್ದವನನ್ನ ಎಳೆದು ಹೊಡೆದು ಬನಿಯನ್ ಹರಿದುಹಾಕಿದ್ದಾರೆ. ಶೆಡ್​ಗೆ ಬಂದವನೇ ರೇಣುಕಾಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಸಿನಿಮಾ ರೀತಿಯಲ್ಲಿ ಎತ್ತಿ ಬಿಸಾಡಿ ತುಳಿದಿದ್ದಾರೆ ಎನ್ನಲಾಗುತ್ತಿದೆ.ರೇಣುಕಾಸ್ವಾಮಿ ಮುಖಕ್ಕೆ ಶೂ ಕಾಲಿನಿಂದ ಒದ್ದಿದ್ದಾನೆ ಎಂದು ಹೇಳಲಾಗುತ್ತಿದೆ.

ಫೋಟೋ ತೆಗೆದದ್ದು ಯಾರು?

ಆರೋಪಿ ವಿನಯ್ ಫೋನ್​ನಲ್ಲಿ ರೇಣುಕಾಸ್ವಾಮಿ ಫೋಟೋಗಳು ಪತ್ತೆಯಾಗಿವೆ. ವಿನಯ್ ಫೋನ್​ನಲ್ಲಿ ರಿಟ್ರೀವ್ ಮಾಡಿದಾಗ ಪತ್ತೆಯಾಗಿದೆ. ದರ್ಶನ್ ಹಲ್ಲೆ ಮಾಡಿದ್ದಾಗ ಎ10 ವಿನಯ್ ಕ್ಲಿಕ್ ಮಾಡಿದ್ದಾನೆ. ಬಳಿಕ ಫೋಟೋವನ್ನ ಸಮತಾಗೂ ಕಳಿಸಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆ ಫೋಟೋವನ್ನು ಸಹ ಪತ್ತೆಹಚ್ಚಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

EXCLUSIVE: ಅಂಗಿ, ಬನಿಯಾನ್​ ಹರಿದು ವಿಕೃತಿ.. ಡಿಲೀಟ್​ ಆದ ರೇಣುಕಾಸ್ವಾಮಿ ಫೋಟೋ ಪತ್ತೆ  

https://newsfirstlive.com/wp-content/uploads/2024/09/Renukaswamy-3.jpg

    ರಿಟ್ರೀವ್​ ವೇಳೆ ಸಿಕ್ತು 10ಕ್ಕೂ ಹೆಚ್ಚು ಫೋಟೋಗಳು

    FSL ಟೀಂ ​ಕೈ ಸೇರಿರುವ ಆ ಹತ್ತು ಫೋಟೋಗಳು ಯಾವ್ಯಾವುವು?

    ಅಂಗಲಾಚುತ್ತಿರೋ ರೇಣುಕಾಸ್ವಾಮಿ ಕತೆ ಹೇಳಿತ್ತಿದೆ ಈ ಫೋಟೋ

ರೇಣುಕಾಸ್ವಾಮಿ ಕೊಲೆ ಮಾಡಿದ ಬಳಿಕ ಡಿಲೀಟ್​​ ಮಾಡಿದ್ದ ಫೋಟೋಗಳನ್ನು ಪೊಲೀಸರು ಆರೋಪಿಗಳ ಮೊಬೈಲ್​ನಿಂದ ರಿಟ್ರೀವ್​ ಮಾಡಿದ್ದಾರೆ. 10ಕ್ಕೂ ಹೆಚ್ಚು ಫೋಟೋ ರಿಟ್ರೀವ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ನೂಸ್ಟ್​ಫಸ್ಟ್​ಗೂ ಕೆಲವು ಫೋಟೋಗಳು ಸಿಕ್ಕಿವೆ.

ಕೊಲೆಗೂ ಮುನ್ನ ವಿನಯ್ ಮೊಬೈಲ್​ನಲ್ಲಿ ಸೆರೆಯಾದ ರೇಣುಕಾಸ್ವಾಮಿ ಫೋಟೋಸ್ ಪತ್ತೆಯಾಗಿತ್ತು. ಆರೋಪಿ ವಿನಯ್ ಮೊಬೈಲ್​​ನಲ್ಲಿ ಫೋಟೋ ಕ್ಲಿಕ್ಕಿಸಿ ಡಿಲೀಟ್ ಮಾಡಿದ್ದನು. ಡಿಲೀಟ್ ಆದ ಫೋಟೋಗಳನ್ನ FSL ಟೀಂ ​ರಿಟ್ರೀವ್ ಮಾಡಿದೆ.

ಕೊಲೆಯ ಭೀಕರತೆಯನ್ನು ಹೇಳಿದ ಫೋಟೋ 

ಕಿಡ್ನಾಪ್ ಮಾಡಿದ ಬಳಿಕ ರೇಣುಕಾಸ್ವಾಮಿಯನ್ನ ಶೆಡ್​ಗೆ ಕರೆತಂದಿದ್ದರು. ಆರೋಪಿಗಳಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ಮಾಡಿದ್ದರು. ಪವನ್, ಧನರಾಜ್ ಮತ್ತು 5 ಮಂದಿಯಿಂದ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಬಳಿಕ ಎಲೆಕ್ಟ್ರಿಕ್ ಮೆಗ್ಗರ್​ನಿಂದ ಆತನ ಕೈಗಳಿಗೆ ಬರೆ ಹಾಕಿದ್ದಾರೆ. ಶೆಡ್​ನಲ್ಲಿ ನಿಲ್ಲಿಸಿದ್ದ ವಾಹನಗಳ ಬಳಿ ಚೆನ್ನಾಗಿ ಹೊಡೆದು ಅಲ್ಲೇ ಬಿಸಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:  EXCLUSIVE: ಕೈಮುಗಿದು ಬೇಡಿಕೊಳ್ತಿರುವ ರೇಣುಕಾಸ್ವಾಮಿ, ಡಿಲೀಟ್ ಮಾಡಿದ್ದ ಫೋಟೋಸ್ ಪತ್ತೆ

ಫೋಟೋ ತೆಗೆದದ್ದು ಯಾರು?

ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡುವಾಗ ಚಿರಾಡಿದ್ದಾನಂತೆ. ಅದೇ ವೇಳೆ ಅಟ್ಟಹಾಸದಲ್ಲಿ ಆರೋಪಿಗಳು ಕೂಗಾಡಿದ್ದಾರಂತೆ. ಈ ವೇಳೆ ಗೇಟ್ ಹೊರಗಿದ್ದ ಸೆಕ್ಯೂರಿಟಿ ಒಳಗೆ ಬಂದಿದ್ದಾರೆ. ಹಲ್ಲೆ ಮಾಡಿದನ್ನ ಸೆಕ್ಯೂರಿಟಿ ಗಾರ್ಡ್ ಕಣ್ಣಾರೆ ನೋಡಿದ್ದಾರೆ. ಬಳಿಕ ತಕ್ಷಣ ವಿನಯ್​ಗೆ ಫೋನ್​ ಮಾಡಿದ್ದಾನೆ ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ಸೆಕ್ಯೂರಿಟಿ ಗಾರ್ಡ್ ಐ ವಿಟ್ನೇಸ್ ಆಗಿದ್ದು, ಈ ವೇಳೆ ವಿನಯ್ ಅವರು ನಮ್ಮವರೇ ಬಿಡು ಎಂದು ಸೆಕ್ಯೂರಿಟಿ ಗಾರ್ಡ್​ ಬಳಿ ಹೇಳಿದ್ದಾನಂತೆ. ನಂತರ ರೇಣುಕಾಸ್ವಾಮಿ ಫೋಟೋ ಕಳಿಸುವುದಕ್ಕೆ ವಿನಯ್ ಹೇಳಿದ್ದಾನೆ. ಆಗ ಸೆಕ್ಯೂರಿಟಿ ಫೋಟೋ ತೆಗೆದು ವಿನಯ್​​ಗೆ ಕಳಿಸಿದ್ದಾನೆ. ವಿನಯ್ ಆ ಫೋಟೋಗಳನ್ನ ನಟ ದರ್ಶನ್​ಗೆ ತೋರಿಸಿದ್ದಾನೆ. ಫೋಟೋಸ್​ ನೋಡಿದ ಬಳಿಕ ದರ್ಶನ್ ಶೆಡ್​ಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಅಂಗಲಾಚುತ್ತಿರೋ ರೇಣುಕಾಸ್ವಾಮಿ

ಗಾಯಗೊಂಡ ರೇಣುಕಾಸ್ವಾಮಿ ಅಂಗಲಾಚ್ತಿರೋ ಫೋಟೋ ರಿಟ್ರೀವ್​ ಬಳಿಕ ಸಿಕ್ಕಿದೆ. ತನ್ನ ಬಿಟ್ಟು ಬಿಡುವಂತೆ ಬೇಡಿಕೊಂಡತೆ ಫೋಟೋ ಕಾಣಿಸಿದೆ. ತಪ್ಪಾಯ್ತು ಎಂದು ಅಳುತ್ತಿರುವ ಮತ್ತು ಮೈಮೇಲೆ ಹಾಕಿದ್ದ ಆತನ ಬನಿಯನ್ ಸಹ ಕಿತ್ತು ಹಾಕಿರುವುದನ್ನು ಫೋಟೋಗಳಲ್ಲಿ ಕಂಡಿವೆ.

ಫೋಟೋ​ ಹಿಂದಿನ ಕಥೆ ಏನು?

ಆರೋಪಿ ದರ್ಶನ್ ಶೆಡ್​ಗೆ ಬಂದು ದರ್ಶನ್​ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಕೆಳಗೆ ಬಿದ್ದವನನ್ನ ಎಳೆದು ಹೊಡೆದು ಬನಿಯನ್ ಹರಿದುಹಾಕಿದ್ದಾರೆ. ಶೆಡ್​ಗೆ ಬಂದವನೇ ರೇಣುಕಾಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಸಿನಿಮಾ ರೀತಿಯಲ್ಲಿ ಎತ್ತಿ ಬಿಸಾಡಿ ತುಳಿದಿದ್ದಾರೆ ಎನ್ನಲಾಗುತ್ತಿದೆ.ರೇಣುಕಾಸ್ವಾಮಿ ಮುಖಕ್ಕೆ ಶೂ ಕಾಲಿನಿಂದ ಒದ್ದಿದ್ದಾನೆ ಎಂದು ಹೇಳಲಾಗುತ್ತಿದೆ.

ಫೋಟೋ ತೆಗೆದದ್ದು ಯಾರು?

ಆರೋಪಿ ವಿನಯ್ ಫೋನ್​ನಲ್ಲಿ ರೇಣುಕಾಸ್ವಾಮಿ ಫೋಟೋಗಳು ಪತ್ತೆಯಾಗಿವೆ. ವಿನಯ್ ಫೋನ್​ನಲ್ಲಿ ರಿಟ್ರೀವ್ ಮಾಡಿದಾಗ ಪತ್ತೆಯಾಗಿದೆ. ದರ್ಶನ್ ಹಲ್ಲೆ ಮಾಡಿದ್ದಾಗ ಎ10 ವಿನಯ್ ಕ್ಲಿಕ್ ಮಾಡಿದ್ದಾನೆ. ಬಳಿಕ ಫೋಟೋವನ್ನ ಸಮತಾಗೂ ಕಳಿಸಿದ್ದಾನೆ ಎನ್ನಲಾಗುತ್ತಿದೆ. ಪೊಲೀಸರು ಆ ಫೋಟೋವನ್ನು ಸಹ ಪತ್ತೆಹಚ್ಚಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More