/newsfirstlive-kannada/media/post_attachments/wp-content/uploads/2024/06/renukaswami.jpg)
ಚಿತ್ರದುರ್ಗ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಸಾಕ್ಷಿಗಳ ಮೊಬೈಲ್​ ಫೋನ್​ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಮೊಬೈಲ್​ಗಳನ್ನು ರಿಟ್ರೀವ್ ಮಾಡಿ ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ.
ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸುಮಾರು 27 ಜನರನ್ನು ವಿಚಾರಣೆ ನಡೆಸಿದ್ದಾರೆ. ಅದರಲ್ಲಿ ದರ್ಶನ್​ ಸೇರಿ ಅವರ ಗ್ಯಾಂಗ್​ ಅನ್ನು ಅರೆಸ್ಟ್​ ಮಾಡಿ ಜೈಲಿಗಟ್ಟಿದ್ದಾರೆ.
ಪಂಚರ ಸಮಕ್ಷಮದಲ್ಲಿ ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.
ಸಾಕ್ಷಿದಾರರ ಗೌಪ್ಯತೆ ಕಾಪಾಡಲು ಪೊಲೀಸರ ಪ್ರಯತ್ನಿಸಿದ್ದಾರೆ. ಸಾಕ್ಷಿದಾರರ ಮೇಲೆ ಪ್ರಭಾವ ಹಾಗೂ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅವರ ಹೆಸರು ಉಲ್ಲೇಖಿಸಲು ಹಿಂದೇಟು ಹಾಕಿದ್ದಾರೆ.
ಇದನ್ನೂ ಓದಿ: ದರ್ಶನ್ ಗ್ಯಾಂಗ್ ಜೈಲಲ್ಲಿ ಒಳಸಂಚು ರೂಪಿಸುತ್ತಾ.. ಕೋರ್ಟ್​ಗೆ ಪೊಲೀಸರು ಮತ್ತೆ ಮನವಿ ಮಾಡಿದ್ದೇನು?
ಸದ್ಯ ಪ್ರಕರಣಕ್ಕೆ ಸಂಬಂಧ ಸಾಕ್ಷಿದಾರರ ಮೊಬೈಲ್ ಫೋನ್ ಜಪ್ತಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಏನೆಲ್ಲಾ ಸಂಗತಿ ಹೊರಬೀಳಲಿದೆ ಎಂದು ಕಾದುನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us