Breaking News: ಮತ್ತೆ ಹುಟ್ಟಿ ಬಂದ ರೇಣುಕಾಸ್ವಾಮಿ! ಮುದ್ದಾದ ಗಂಡು ಮಗುವನ್ನು ಬರಮಾಡಿಕೊಂಡ ಕುಟುಂಬ

author-image
AS Harshith
Updated On
Breaking News: ಮತ್ತೆ ಹುಟ್ಟಿ ಬಂದ ರೇಣುಕಾಸ್ವಾಮಿ! ಮುದ್ದಾದ ಗಂಡು ಮಗುವನ್ನು ಬರಮಾಡಿಕೊಂಡ ಕುಟುಂಬ
Advertisment
  • ದರ್ಶನ್​ ಮತ್ತು ಗ್ಯಾಂಗ್​ನಿಂದ ಹತ್ಯೆಯಾದ ರೇಣುಕಾಸ್ವಾಮಿ
  • ಇಂದು ಬೆಳಗಿನ ಜಾವ 7 ಗಂಟೆ 1 ನಿಮಿಷಕ್ಕೆ ಮಗು ಜನನ
  • ಪತಿಯ ಹತ್ಯೆಯ ಸಮಯದಲ್ಲಿ ಪ್ರೆಗ್ನೆಂಟ್​ ಆಗಿದ್ದ ಪತ್ನಿ ಸಹನಾ

ಚಿತ್ರದುರ್ಗ: ದರ್ಶನ್​ ಮತ್ತು ಗ್ಯಾಂಗ್​ನಿಂದ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹೆಂಡತಿ ಗಂಡು ಮಗುವಿಗೆ ಜನನ ನೀಡಿದ್ದಾರೆ. ಇಂದು ಬೆಳಗಿನ ಜಾವ 7 ಗಂಟೆ 1 ನಿಮಿಷಕ್ಕೆ ಮುದ್ದಾದ ಮಗುವನ್ನು ಬರಮಾಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಸಮಯದಲ್ಲಿ ಪತ್ನಿ ಸಹನಾ ಗರ್ಭಿಣಿಯಾಗಿದ್ದು, ಮನೆಯಲ್ಲಿಯೇ ವಿಶ್ರಾಂತಿಯಲ್ಲಿದ್ದರು. ಇದೇ ಸಮಯದಲ್ಲಿ ದರ್ಶನ್​​ ಮತ್ತು ಗ್ಯಾಂಗ್​ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿ ಕೊಲೆ ಮಾಡಿದ್ದರು. ಆದರೆ ಇದೀಗ ಸಹನಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ರೈಲಿನ ಕಿಟಕಿಯಿಂದ ಜಾರಿದ ಕಂದಮ್ಮ; ಕಗ್ಗತ್ತಲಲ್ಲಿ 16 ಕಿಮೀ ಓಡಿ ಮಗಳ ಉಳಿಸಿಕೊಂಡ ಅಪ್ಪ..

ಸಹನಾ ನಗರದ  ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗುವನ್ನ ಹೆತ್ತಿದ್ದಾರೆ. ಸದ್ಯ ಮಗುವನ್ನ ವೈದ್ಯರು ಅಬ್ಜರ್ವೇಶನ್​ನಲ್ಲಿ ಇಟ್ಟಿದ್ದಾರೆ.

ಇದನ್ನೂ ಓದಿ: ಫ್ಯಾನ್ಸ್​​ಗೆ ಗುಡ್​ನ್ಯೂಸ್​​; ರಶ್ಮಿಕಾ ಮಂದಣ್ಣಗೆ ಕೇಂದ್ರ ಸರ್ಕಾರದಿಂದ ಮಹತ್ವದ ಜವಾಬ್ದಾರಿ

ಇತ್ತ ಮನೆ ನೋಡಿಕೊಳ್ಳಬೇಕಾದ ಮಗ ರೇಣುಕಾಸ್ವಾಮಿ ಕೊಲೆಯಾದ ಬಳಿಕ ಕಣ್ಣೀರಿನಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬ ಇದೀಗ ಮುದ್ದಾದ ಮಗುವನ್ನು ಬರಮಾಡಿಕೊಳ್ಳುವ ಮೂಲಕ ಸಂತಸಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment