ಸಾಕಷ್ಟು ಮುಂಜಾಗ್ರತೆ ತೆಗೆದುಕೊಂಡ್ರು ಹೊರಬರಲಾಗಲಿಲ್ಲ
ನಗರದ ಡಿಸಿಎಂ ಟೌನ್ಶಿಪ್ನ ಮನೆಯಲ್ಲಿ ನೇಣಿಗೆ ಶರಣು
ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು
ದಾವಣಗೆರೆ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಎಎಸ್ಐ ಅಧಿಕಾರಿಯೊಬ್ಬರು ನೇಣು ಬಿಗದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ನಗರದ ಡಿಸಿಎಂ ಟೌನ್ಶಿಪ್ನಲ್ಲಿ ನಡೆದಿದೆ.
ಇದನ್ನೂ ಓದಿ: ವರುಣಾರ್ಭಟಕ್ಕೆ 90 ಜನ ಸಾವು.. 12 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತ; ಇಂದು ಕೂಡ ಭಾರೀ ಮಳೆ ಎಚ್ಚರಿಕೆ
ನಗರದ ಡಿಸಿಎಂ ಟೌನ್ ಶಿಪ್ನ ನಿವಾಸಿಯಾಗಿರುವ ನಿವೃತ್ತ ಎಎಸ್ಐ ಸುರೇಶ್ (70) ಆತ್ಮಹತ್ಯೆ ಮಾಡಿಕೊಂಡವರು. ಇವರು ಬಿ.ಪಿ, ಶುಗರ್ನಿಂದ ಬಳಲುತಿದ್ದರು. ಇವುಗಳಿಗಾಗಿ ಸಾಕಷ್ಟು ಮುಂಜಾಗ್ರತೆ ತೆಗೆದುಕೊಂಡಿದ್ದರೂ ಅವುಗಳು ಕಡಿಮೆಯಾಗಲಿಲ್ಲ. ಹೀಗಾಗಿ ಬಿ.ಪಿ, ಶುಗರ್ ಹತೋಟಿಗೆ ಬಾರದಿದ್ದಕ್ಕೆ ಮನನೊಂದು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಸುರೇಶ್ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಾಕಷ್ಟು ಮುಂಜಾಗ್ರತೆ ತೆಗೆದುಕೊಂಡ್ರು ಹೊರಬರಲಾಗಲಿಲ್ಲ
ನಗರದ ಡಿಸಿಎಂ ಟೌನ್ಶಿಪ್ನ ಮನೆಯಲ್ಲಿ ನೇಣಿಗೆ ಶರಣು
ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು
ದಾವಣಗೆರೆ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಎಎಸ್ಐ ಅಧಿಕಾರಿಯೊಬ್ಬರು ನೇಣು ಬಿಗದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ನಗರದ ಡಿಸಿಎಂ ಟೌನ್ಶಿಪ್ನಲ್ಲಿ ನಡೆದಿದೆ.
ಇದನ್ನೂ ಓದಿ: ವರುಣಾರ್ಭಟಕ್ಕೆ 90 ಜನ ಸಾವು.. 12 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತ; ಇಂದು ಕೂಡ ಭಾರೀ ಮಳೆ ಎಚ್ಚರಿಕೆ
ನಗರದ ಡಿಸಿಎಂ ಟೌನ್ ಶಿಪ್ನ ನಿವಾಸಿಯಾಗಿರುವ ನಿವೃತ್ತ ಎಎಸ್ಐ ಸುರೇಶ್ (70) ಆತ್ಮಹತ್ಯೆ ಮಾಡಿಕೊಂಡವರು. ಇವರು ಬಿ.ಪಿ, ಶುಗರ್ನಿಂದ ಬಳಲುತಿದ್ದರು. ಇವುಗಳಿಗಾಗಿ ಸಾಕಷ್ಟು ಮುಂಜಾಗ್ರತೆ ತೆಗೆದುಕೊಂಡಿದ್ದರೂ ಅವುಗಳು ಕಡಿಮೆಯಾಗಲಿಲ್ಲ. ಹೀಗಾಗಿ ಬಿ.ಪಿ, ಶುಗರ್ ಹತೋಟಿಗೆ ಬಾರದಿದ್ದಕ್ಕೆ ಮನನೊಂದು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಸುರೇಶ್ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ