/newsfirstlive-kannada/media/post_attachments/wp-content/uploads/2025/04/DG-IGP-Om-prakash-3.jpg)
ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬೆಂಗಳೂರು ನಗರದ ಹೆಚ್ಎಸ್ಆರ್ ಲೇಔಟ್ನ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಘಟನೆ ನಡೆದಿರುವ ಮನೆಯಲ್ಲಿ ಪೊಲೀಸರು ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಲಿಕಾನ್ ಸಿಟಿಯ ನಿವೃತ್ತ ಪೊಲೀಸ್ ಮಹಾನಿರ್ದೇಶಕರು ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ. ಅವರ ದೇಹದ ಮೂರು ಕಡೆಗಳಲ್ಲಿ ಚಾಕುವಿನಿಂದ ಇರಿದು ಭೀಕರವಾಗಿ ಜೀವ ತೆಗೆಯಲಾಗಿದೆ. ಸದ್ಯ ಈ ಸಂಬಂಧ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ನಿವೃತ್ತ DG-IGP ಓಂ ಪ್ರಕಾಶ್ ದುರಂತ ಅಂತ್ಯ; ಕಾರಣವೇನು?
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರು ಬಿಹಾರ ಮೂಲದವರು. 1981 ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದರು. ತಮ್ಮ ಕರ್ತವ್ಯದಲ್ಲಿ ತುಂಬಾ ಚಾಣಕ್ಷರಾಗಿದ್ದ ಓಂ ಪ್ರಕಾಶ್ ಅವರು ಬೆಂಗಳೂರಿನ ಎರಡು ಭಯೋತ್ಪಾದಕ ಪ್ರಕರಣಗಳನ್ನು ತನಿಖೆ ಮಾಡಿದ್ದರು. 2013 ಏಪ್ರಿಲ್ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ನಡೆದ ಸ್ಫೋಟ ಹಾಗೂ 2014 ಡಿಸೆಂಬರ್ 28 ರಂದು ಚರ್ಚ್ ಸ್ಟ್ರೀಟ್ನಲ್ಲಿ ನಡೆದ ಬ್ಲಾಸ್ಟ್ ಪ್ರಕರಣದಲ್ಲಿ ಶಂಕಿತ ಉಗ್ರರನ್ನ ಬಂಧಿಸಿದ್ದರು.
ಕೌಟುಂಬಿಕ ಕಲಹ ಹಿನ್ನೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನ ಹೆಂಡತಿಯೇ ಬರ್ಬರವಾಗಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ