/newsfirstlive-kannada/media/post_attachments/wp-content/uploads/2024/09/RISHAB-PANT-2.jpg)
ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್​ ಟ್ರೋಫಿಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈಗಾಗಲೇ ಟೀಮ್​​ ಇಂಡಿಯಾ ದುಬೈ ತಲುಪಿದ್ದು, ಅಭ್ಯಾಸ ಆರಂಭಿಸಿದೆ. ಹೆಡ್ಕೋಚ್ ಗೌತಮ್ ಗಂಭೀರ್ ಮತ್ತು ಕ್ಯಾಪ್ಟನ್​ ರೋಹಿತ್​ ಶರ್ಮಾ ನೇತೃತ್ವದಲ್ಲಿ ಟೀಮ್​ ಇಂಡಿಯಾ ಆಟಗಾರರು ಪ್ರಾಕ್ಟೀಸ್​ ನಡೆಸುತ್ತಿದ್ದಾರೆ. ಈ ಮಧ್ಯೆ ಟೀಮ್​ ಇಂಡಿಯಾ ಫ್ಯಾನ್ಸ್​ಗೆ ಶಾಕಿಂಗ್​ ಸುದ್ದಿ ಒಂದಿದೆ.
ಅಂಥದ್ದೇನಾಯ್ತು?
ಟೀಮ್​ ಇಂಡಿಯಾದ ಸ್ಟಾರ್​ ವಿಕೆಟ್​ ಕೀಪರ್​ ಬ್ಯಾಟರ್​​​ ರಿಷಬ್​ ಪಂತ್. ಇವರು ಪ್ರಾಕ್ಟೀಸ್​​ ಮಾಡುವಾಗ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರ ಮೊಣಕಾಲಿಗೆ ಗಾಯವಾಗಿದೆ. ಕಳೆದ ಸಲ ಅಪಘಾತಕ್ಕೆ ಒಳಗಾಗಿದ್ದ ಪಂತ್​ ಅವರ ಮೊಣಕಾಲಿಗೆ ಸರ್ಜರಿ ಆಗಿತ್ತು. ಈಗ ಅದೇ ಜಾಗದಲ್ಲಿ ಗಾಯ ಆಗಿದೆ ಎಂದು ತಿಳಿದು ಬಂದಿದೆ.
ಚಾಂಪಿಯನ್ಸ್​ ಟ್ರೋಫಿಯಿಂದ ಪಂತ್​ ಔಟ್​​?
ರಿಷಬ್​ ಪಂತ್​​ ಗಾಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಒಂದು ವೇಳೆ ಪಂತ್​ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಬಿದ್ದರೆ ಟೀಮ್​ ಇಂಡಿಯಾಗೆ ಇದು ಆಘಾತ ತರುತ್ತದೆ. ಇವರ ಬದಲಿಗೆ ಬೇರೆ ಯಾರನ್ನಾದ್ರೂ ಸೇರಿಸಿಕೊಳ್ಳಬೇಕಾಗಬಹುದು.
15 ಸದಸ್ಯರ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಅವರೊಂದಿಗೆ 2ನೇ ವಿಕೆಟ್​ ಕೀಪರ್​ ಆಗಿ ಪಂತ್​ ಆಯ್ಕೆಯಾಗಿದ್ದರು. ಟೀಮ್​ ಇಂಡಿಯಾ ಪ್ಲೇಯಿಂಗ್​ ಎಲೆವೆನ್​ನಲ್ಲಿ ಕೆ.ಎಲ್​​ ರಾಹುಲ್ ಮೊದಲ ವಿಕೆಟ್​​ ಕೀಪರ್​ ಆಗಿ ಆಡಲಿದ್ದಾರೆ ಎಂದು ಕೋಚ್​ ಗೌತಮ್​ ಗಂಭೀರ್​ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಪಂತ್​​ ಜಾಗದಲ್ಲಿ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗಬಹುದು ಎನ್ನುವ ಮಾತುಗಳು ಕೇಳಿ ಬಂದಿವೆ.
ಟೀಮ್​ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್​​), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್​ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us