ಚಾಂಪಿಯನ್ಸ್​​ ಟ್ರೋಫಿ; ಟೀಮ್​ ಇಂಡಿಯಾದಿಂದಲೇ ಹೊರಬಿದ್ದ ರಿಷಬ್​ ಪಂತ್​​; ಏನಾಯ್ತು?

author-image
Ganesh Nachikethu
Updated On
ಬಿಸಿಸಿಐನಿಂದ ಬಿಗ್​ ಶಾಕ್​​; ಟೀಮ್​ ಇಂಡಿಯಾದಿಂದ ರಿಷಬ್​ ಪಂತ್​​ ಔಟ್​​; ಕಾರಣವೇನು?
Advertisment
  • ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಟೂರ್ನಿ
  • ಚಾಂಪಿಯನ್ಸ್​ ಟ್ರೋಫಿಗೆ ಟೀಮ್​ ಇಂಡಿಯಾ ಭರ್ಜರಿ ತಯಾರಿ
  • ಈ ಮಧ್ಯೆ ಭಾರತದ ಕ್ರಿಕೆಟ್​ ಅಭಿಮಾನಿಗಳಿಗೆ ಶಾಕಿಂಗ್​ ಸುದ್ದಿ..!

ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್​ ಟ್ರೋಫಿಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈಗಾಗಲೇ ಟೀಮ್​​ ಇಂಡಿಯಾ ದುಬೈ ತಲುಪಿದ್ದು, ಅಭ್ಯಾಸ ಆರಂಭಿಸಿದೆ. ಹೆಡ್‌ಕೋಚ್ ಗೌತಮ್ ಗಂಭೀರ್ ಮತ್ತು ಕ್ಯಾಪ್ಟನ್​ ರೋಹಿತ್​ ಶರ್ಮಾ ನೇತೃತ್ವದಲ್ಲಿ ಟೀಮ್​ ಇಂಡಿಯಾ ಆಟಗಾರರು ಪ್ರಾಕ್ಟೀಸ್​ ನಡೆಸುತ್ತಿದ್ದಾರೆ. ಈ ಮಧ್ಯೆ ಟೀಮ್​ ಇಂಡಿಯಾ ಫ್ಯಾನ್ಸ್​ಗೆ ಶಾಕಿಂಗ್​ ಸುದ್ದಿ ಒಂದಿದೆ.

ಅಂಥದ್ದೇನಾಯ್ತು?

ಟೀಮ್​ ಇಂಡಿಯಾದ ಸ್ಟಾರ್​ ವಿಕೆಟ್​ ಕೀಪರ್​ ಬ್ಯಾಟರ್​​​ ರಿಷಬ್​ ಪಂತ್. ಇವರು ಪ್ರಾಕ್ಟೀಸ್​​ ಮಾಡುವಾಗ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರ ಮೊಣಕಾಲಿಗೆ ಗಾಯವಾಗಿದೆ. ಕಳೆದ ಸಲ ಅಪಘಾತಕ್ಕೆ ಒಳಗಾಗಿದ್ದ ಪಂತ್​ ಅವರ ಮೊಣಕಾಲಿಗೆ ಸರ್ಜರಿ ಆಗಿತ್ತು. ಈಗ ಅದೇ ಜಾಗದಲ್ಲಿ ಗಾಯ ಆಗಿದೆ ಎಂದು ತಿಳಿದು ಬಂದಿದೆ.

ಚಾಂಪಿಯನ್ಸ್​ ಟ್ರೋಫಿಯಿಂದ ಪಂತ್​ ಔಟ್​​?

ರಿಷಬ್​ ಪಂತ್​​ ಗಾಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಒಂದು ವೇಳೆ ಪಂತ್​ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಬಿದ್ದರೆ ಟೀಮ್​ ಇಂಡಿಯಾಗೆ ಇದು ಆಘಾತ ತರುತ್ತದೆ. ಇವರ ಬದಲಿಗೆ ಬೇರೆ ಯಾರನ್ನಾದ್ರೂ ಸೇರಿಸಿಕೊಳ್ಳಬೇಕಾಗಬಹುದು.

15 ಸದಸ್ಯರ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಅವರೊಂದಿಗೆ 2ನೇ ವಿಕೆಟ್​ ಕೀಪರ್​ ಆಗಿ ಪಂತ್​ ಆಯ್ಕೆಯಾಗಿದ್ದರು. ಟೀಮ್​ ಇಂಡಿಯಾ ಪ್ಲೇಯಿಂಗ್​ ಎಲೆವೆನ್​ನಲ್ಲಿ ಕೆ.ಎಲ್​​ ರಾಹುಲ್ ಮೊದಲ ವಿಕೆಟ್​​ ಕೀಪರ್​ ಆಗಿ ಆಡಲಿದ್ದಾರೆ ಎಂದು ಕೋಚ್​ ಗೌತಮ್​ ಗಂಭೀರ್​ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಪಂತ್​​ ಜಾಗದಲ್ಲಿ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗಬಹುದು ಎನ್ನುವ ಮಾತುಗಳು ಕೇಳಿ ಬಂದಿವೆ.

ಟೀಮ್​ ಇಂಡಿಯಾ ಹೀಗಿದೆ!

ರೋಹಿತ್ ಶರ್ಮಾ (ಕ್ಯಾಪ್ಟನ್​​), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್​ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ.

ಇದನ್ನೂ ಓದಿ:IPL 2025: ಮುಂಬೈ​ಗೆ ಬಿಗ್​ ಶಾಕ್​; ಹಾರ್ದಿಕ್​​ ಪಾಂಡ್ಯ ಮೇಲೆ ಬಿಸಿಸಿಐ ನಿಷೇಧ; ಕಾರಣವೇನು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment