ಭಾರತ ತಂಡಕ್ಕೆ ಮೋಸ ಮಾಡಿ ಸಿಕ್ಕಿಬಿದ್ದ ಸ್ಟಾರ್​ ಬ್ಯಾಟರ್​​.. ಪಂತ್​ ವಿರುದ್ಧ ಕೇಳಿ ಬಂದ ಆರೋಪವೇನು?

author-image
Ganesh Nachikethu
Updated On
ಈ ಲೆಜೆಂಡರಿ ಬ್ಯಾಟ್ಸಮನ್​​​ನಂತೆ ರಿಷಬ್ ಪಂತ್.. ಮಾರಕ ಬ್ಯಾಟಿಂಗ್.. ಇಬ್ಬರ ಬಲವೂ ಒಂದೇ.. ಯಾರವರು..?
Advertisment
  • ಬರೋಬ್ಬರಿ 17 ವರ್ಷಗಳ ತಪಸ್ಸಿನ ಬಳಿಕ ಟಿ20 ವಿಶ್ವಕಪ್ ಗೆದ್ದ ಟೀಮ್​ ಇಂಡಿಯಾ​
  • ಟೀಮ್​ ಇಂಡಿಯಾ ಸ್ಟಾರ್​ ಬ್ಯಾಟರ್​​ ಪಂತ್​ ವಿರುದ್ಧ ಕೇಳಿ ಬಂತು ಗಂಭೀರ ಆರೋಪ
  • ಬಿಸಿಸಿಐಗೆ ಸುಳ್ಳು ಹೇಳಿ ಮೋಸ ಮಾಡಿ ಸಿಕ್ಕಿಬಿದ್ದ ಸ್ಟಾರ್​ ಆಟಗಾರ​​ ರಿಷಬ್​ ಪಂತ್​..!​

T20 ವಿಶ್ವಕಪ್​​ ಚಾಂಪಿಯನ್​​​​ ಮತ್ತು ಟೀಮ್​ ಇಂಡಿಯಾದ ಸ್ಟಾರ್​​ ವಿಕೆಟ್​ ಕೀಪರ್​ ಬ್ಯಾಟರ್​ ರಿಷಭ್​ ಪಂತ್​​​ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ತನ್ನ ವಯಸ್ಸಿನ ವಿಚಾರದಲ್ಲಿ ಪಂತ್​ ಬಿಸಿಸಿಐಗೆ ಮೋಸ ಮಾಡಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಸಿಸಿಐಗೆ ಮೋಸ ಮಾಡಿದ್ರಾ ಪಂತ್​​..?

ಹೌದು, ಬಿಸಿಸಿಐಗೆ ಪಂತ್​ ಮೋಸ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಬಿಸಿಸಿಐ ಮುಂದೆ ಪಂತ್​ ತನಗೆ ಕೇವಲ 26 ವರ್ಷ ಎಂದು ಹೇಳಿಕೊಂಡಿದ್ದಾರೆ. ಶಾಲೆಯಲ್ಲಿ ಪಂತ್​ ನನಗಿಂತಲೂ 3 ವರ್ಷ ಸೀನಿಯರ್​​. ನನಗೆ 27 ವರ್ಷ, 30 ವರ್ಷ ಇರಬೇಕಾದ ಪಂತ್​ಗೆ 26 ವಯಸ್ಸು ಆಗಿರಲು ಹೇಗೆ ಸಾಧ್ಯ? ಎಂದು ನೆಟ್ಟಿಗರು ಒಬ್ಬರು ಪ್ರಶ್ನಿಸಿದ್ದಾರೆ. ಇದಕ್ಕೆ ಪಂತ್​ ಬಿಸಿಸಿಐಗೆ ಮೋಸ ಮಾಡಿದ್ದು, ಈ ವಿಚಾರ ತನಿಖೆ ಆಗಲೇಬೇಕು ಎಂದು ನೆಟ್ಟಿಗರು ಪಟ್ಟು ಹಿಡಿದಿದ್ದಾರೆ.

ಬರೋಬ್ಬರಿ 17 ವರ್ಷಗಳ ತಪಸ್ಸಿನ ಬಳಿಕ ಟೀಮ್​ ಇಂಡಿಯಾ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿದಿದೆ. ಈ ಬೆನ್ನಲ್ಲೇ ಟೀಮ್​ ಇಂಡಿಯಾ ಮುಖ್ಯ ಕೋಚ್​​ ರಾಹುಲ್​ ದ್ರಾವಿಡ್​ ಕೂಡ ವಿದಾಯ ಹೇಳಿದ್ದಾರೆ. ರಾಹುಲ್​ ದ್ರಾವಿಡ್​ ನಿರ್ಗಮನದ ಬಳಿಕ ಗೌತಮ್​ ಗಂಭೀರ್​​ ಟೀಮ್​ ಇಂಡಿಯಾ ಮುಖ್ಯ ಕೋಚ್​ ಆಗಿ ಅನೌನ್ಸ್​ ಆಗಿದ್ದಾರೆ.


">July 15, 2024

ಇತ್ತೀಚೆಗಷ್ಟೇ ಜಿಂಬಾಬ್ವೆ ವಿರುದ್ಧದ ಟಿ20 ಸರಣಿ ಮುಗಿದಿದ್ದು, ಟೀಮ್​ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಶ್ರೀಲಂಕಾ ವಿರುದ್ಧ ಟೀಮ್​ ಇಂಡಿಯಾ 3 ಟಿ20 ಪಂದ್ಯಗಳು ಮತ್ತು 3 ಏಕದಿನ ಪಂದ್ಯಗಳ ಸರಣಿ ಆಡಲಿದೆ. ಈ ಸರಣಿಗೆ ಪಂತ್​ ಆಯ್ಕೆ ಆಗೋದು ಡೌಟ್​​ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಪಂತ್​​​ ಟಿ20 ವಿಶ್ವಕಪ್​ನಲ್ಲಿ ನೀಡಿದ ಕಳಪೆ ಪ್ರದರ್ಶನ.

2024ರ ಟಿ20 ವಿಶ್ವಕಪ್​ನಲ್ಲಿ ಒಂದೆರಡು ಪಂದ್ಯ ಹೊರತುಪಡಿಸಿ ಪಂತ್​​ ಹೇಳಿಕೊಳ್ಳುವಷ್ಟು ಪ್ರದರ್ಶನವೇನು ನೀಡಿಲ್ಲ. ಅಷ್ಟೇ ಅಲ್ಲ ಇದುವರೆಗೂ ಪಂತ್​ ಆಡಿರೋ 74 ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಕೇವಲ 1158 ರನ್​ ಕಲೆ ಹಾಕಿದ್ದಾರೆ. ಆವರೇಜ್​​ ಕೇವಲ 22 ಇದ್ದು, ಸ್ಟ್ರೈಕ್​ ರೇಟ್​ ಕೂಡ 127 ಮಾತ್ರ ಇದೆ. ಹಾಗಾಗಿ ಪಂತ್​ ಜಾಗಕ್ಕೆ ಸಂಜು ಸ್ಯಾಮ್ಸನ್​ ಅವರನ್ನು ಗಂಭೀರ್​ ತಂದು ಕೂರಿಸೋ ಸಾಧ್ಯತೆ ಇದೆ. ಇದರ ಮಧ್ಯೆ ಪಂತ್​ ವಿರುದ್ಧ ಗಂಭೀರ ಆರೋಪ ಒಂದು ಕೇಳಿ ಬಂದಿದೆ.

ಇದನ್ನೂ ಓದಿ: ‘ಕೆ.ಎಲ್​​ ರಾಹುಲ್​​​ ಕ್ಯಾಪ್ಟನ್ಸಿಯಲ್ಲಿ ಆಡೋಕೆ ಇಷ್ಟ ಇಲ್ಲ’ ಎಂದ ಹಾರ್ದಿಕ್.. ಬಿಸಿಸಿಐಗೆ ಬಿಗ್​ ಶಾಕ್​!​​

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment