/newsfirstlive-kannada/media/post_attachments/wp-content/uploads/2024/09/RISHAB-PANT-2.jpg)
ಮೆಲ್ಬೋರ್ನ್ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್​​ ರೋಹಿತ್ ಶರ್ಮಾ ನಾಯಕತ್ವದ ಟೀಮ್​ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 184 ರನ್ಗಳಿಂದ ಸೋಲು ಕಂಡಿದೆ. ಈ ಸೋಲಿಗೆ ಯಾರು ಹೊಣೆ ಎಂಬ ಚರ್ಚೆ ಶುರುವಾಗಿದೆ.
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್​ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 369 ರನ್ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​​ನಲ್ಲಿ 105 ರನ್ಗಳ ಮುನ್ನಡೆ ಸಾಧಿಸಿತು. 2ನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 234 ರನ್ ಗಳಿಸಿ 340 ರನ್ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ 155 ರನ್ ಗಳಿಸಿ 184 ರನ್ಗಳಿಂದ ಹೀನಾಯ ಸೋಲು ಕಂಡಿದೆ.
ಭಾರತ ತಂಡ ಮೆಲ್ಬೋರ್ನ್ ಟೆಸ್ಟ್ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು. ಆದರೆ, ಟೀಮ್​ ಇಂಡಿಯಾ ಪರ ಕೆಲವು ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್ ಪಂದ್ಯ ಸೋಲುವ ಮೂಲಕ ಟೀಮ್​ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವ ಸಾಧ್ಯತೆ ಇದೆ. ಇದರ ಮಧ್ಯೆ ಟೀಮ್​ ಇಂಡಿಯಾಗೆ ಶಾಕಿಂಗ್​ ನ್ಯೂಸ್​ ಒಂದಿದೆ.
ತಂಡದಿಂದ ಪಂತ್​ಗೆ ಕೊಕ್​​
ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳ ಹೀನಾಯ ಪ್ರದರ್ಶನ ಟೀಕೆಗೆ ಗುರಿಯಾಗುತ್ತಿದೆ. ಅದರಲ್ಲೂ ವಿಕೆಟ್ ಕೀಪರ್ ರಿಷಬ್​ ಪಂತ್ ಬೇಕಾಬಿಟ್ಟಿ ಬ್ಯಾಟ್​ ಬೀಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಪಂತ್ ಅವರನ್ನು ತಂಡದಿಂದ ಕೈ ಬಿಡುವ ಮಾತುಗಳು ಕೇಳಿ ಬರುತ್ತಿವೆ.
ಪಂತ್​ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇವರ ಲೂಸ್ ಶಾಟ್ಗಳು ಟೀಂ ಇಂಡಿಯಾಗೆ ಸಮಸ್ಯೆ ಹೆಚ್ಚಿಸುತ್ತಿವೆ. ಆಸ್ಟ್ರೇಲಿಯಾ ವಿರುದ್ಧ ಪಂತ್ ಆಡಿದ 4 ಟೆಸ್ಟ್ ಪಂದ್ಯಗಳಲ್ಲಿ 22ರ ಸರಾಸರಿಯಲ್ಲಿ 154 ರನ್ ಸಿಡಿಸಿದ್ದಾರೆ. ಇದರಲ್ಲಿ 1 ಅರ್ಧಶತಕ ಮಾತ್ರ ಸೇರಿದೆ. ಹೀಗಾಗಿ ಈಗ ಸಿಡ್ನಿ ಟೆಸ್ಟ್ನಿಂದ ಪಂತ್ ಕೈಬಿಡಬಹುದು ಎಂಬ ಸುದ್ದಿ ಬರುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ