/newsfirstlive-kannada/media/post_attachments/wp-content/uploads/2023/09/Chitradurga.jpg)
ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಕೋಟೆನಾಡಿನ ಮಲ್ಲಾಪುರ ಗ್ರಾಮದ ಬ್ರಿಡ್ಜ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಗುದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 13ರ ಮಲ್ಲಾಪುರ ಗ್ರಾಮದ ಬ್ರಿಡ್ಜ್ ಬಳಿ ಈ ಘಟನೆ ನಡೆದಿದ್ದು, ಮೃತರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಅಪಘಾತ ನಡೆದ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ