ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅನಾಹುತ
ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣ ಮಾಡುತ್ತಿದ್ದರು
ಗಾಯಗೊಂಡಿರುವ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು-ಸಿಮೆಂಟ್ ಸಾಗಾಟ ಮಾಡುತ್ತಿದ್ದ ಟ್ರಕ್ ಮುಖಾಮುಖಿಯಾಗಿ ದುರಂತ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಬಾಲಕಿಯನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿ ಒಟ್ಟು ಏಳು ಜನರಿದ್ದರು.
ಇದನ್ನೂ ಓದಿ: ಮೂವರು ಮಕ್ಕಳ ಸ್ಕೂಲ್ ಫೀಸ್ ಕಟ್ಟದೇ ಧೋನಿ ನೋಡಲು 64,000 ಖರ್ಚು ಮಾಡಿದ ಅಭಿಮಾನಿ..!
ಬ್ಯಾಂಕ್ ಉದ್ಯೋಗಿ ಅರ್ಜುನ್ ಹಾಗೂ ಅವರ ಮಗ ಮೇಘರಾಜ, ಮಾವ ರವಿನಾಥ್, ಅತ್ತೆ ಸಾವನ್ನಪ್ಪಿದ್ದಾರೆ. ಹೆಂಡತಿ, ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಅರ್ಜುನ್ಗೆ ರವಿನಾಥ್ ತಮ್ಮ ಮಗಳು ಜಯಶ್ರೀಯನ್ನು ಮದುವೆ ಮಾಡಿಕೊಟ್ಟಿದ್ದರು. ಅರ್ಜುನ್ ಮೂವರು ಮಕ್ಕಳಿದ್ದು, ಅವರಲ್ಲಿ ಓರ್ವ ಮಗ ಮೇಘರಾಜ ಅಪಘಾತದಿಂಂದ ಸಾವನ್ನಪ್ಪಿದ್ದಾನೆ.
6 ವರ್ಷದ ನಾಯನಾ ಸ್ಥಿತಿ ಗಂಭೀರವಾಗಿದ್ದು,. 13 ವರ್ಷದ ಮತ್ತೊಬ್ಬ ಮಗ ಪ್ರೇಮಸಿಂಗ್ಗೂ ಗಾಯವಾಗಿದೆ. ಇವರು ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬರಟಗಿ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ. ಮೃತ ರವಿನಾಥ ಸುನಿಲಾಲ್ ಪತ್ತಾರ ( 52 ), ಪುಷ್ಪಾ ರವಿನಾಥ ಪತ್ತಾರ ( 40) ಇಬ್ಬರು ಗಂಡ-ಹೆಂಡತಿ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ನಿವಾಸಿಗಳು.
ಇದನ್ನೂ ಓದಿ:ಬೇರೊಬ್ಬನ ಜೊತೆ ಮದುವೆ; ನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಜೀವಬಿಟ್ಟ ಪ್ರೇಮಿಗಳು
30 ವರ್ಷದ ಜಯಶ್ರೀ ಅರ್ಜುನ ರಜಪೂತ, 6 ವರ್ಷದ ನಯಾರಾ ಅರ್ಜುನ ರಜಪೂತ, 13 ವರ್ಷದ ಪ್ರೇಮಸಿಂಗ್ ಅರ್ಜುನ ರಜಪೂತಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪುರದಿಂದ ಮಹಾಲಿಂಗಪುರಕ್ಕೆ ಮನೆ ಸ್ಥಳಾಂತರಿಸಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಬ್ಯಾಂಕ್ ಉದ್ಯೋಗಿಯಾಗಿದ್ದ ಅರ್ಜುನ್ ಸಿಂಗ್ಗೆ ಮಹಾಲಿಂಗಪುರದಿಂದ ವಿಜಯಪುರಕ್ಕೆ ವರ್ಗಾವಣೆ ಗೊಂಡಿತ್ತು. ಮನೆ ಸ್ಥಳಾಂತರಿಸಲು ವಿಜಯಪುರದಿಂದ ಜಮಖಂಡಿ ಮಾರ್ಗವಾಗಿ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. KA 28 D 1021 ನಂಬರಿನ ಕಾರಿನಲ್ಲಿ ಏಳು ಜನ ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ಲೋಡ್ ಇದ್ದ KA 16 B 6472 ನಂಬರಿನ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ.
ಇದನ್ನೂ ಓದಿ: RCBಗೆ ಪ್ಲೇ-ಆಫ್ ದಾರಿ ಕಷ್ಟವೇನೂ ಅಲ್ಲ.. ಕಮರುತ್ತಿರುವ ಕನಸುಗಳಿಗೆ ಜೀವ ತುಂಬಲು ಇನ್ನೂ ಇವೆ ದಾರಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅನಾಹುತ
ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣ ಮಾಡುತ್ತಿದ್ದರು
ಗಾಯಗೊಂಡಿರುವ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು-ಸಿಮೆಂಟ್ ಸಾಗಾಟ ಮಾಡುತ್ತಿದ್ದ ಟ್ರಕ್ ಮುಖಾಮುಖಿಯಾಗಿ ದುರಂತ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಬಾಲಕಿಯನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿ ಒಟ್ಟು ಏಳು ಜನರಿದ್ದರು.
ಇದನ್ನೂ ಓದಿ: ಮೂವರು ಮಕ್ಕಳ ಸ್ಕೂಲ್ ಫೀಸ್ ಕಟ್ಟದೇ ಧೋನಿ ನೋಡಲು 64,000 ಖರ್ಚು ಮಾಡಿದ ಅಭಿಮಾನಿ..!
ಬ್ಯಾಂಕ್ ಉದ್ಯೋಗಿ ಅರ್ಜುನ್ ಹಾಗೂ ಅವರ ಮಗ ಮೇಘರಾಜ, ಮಾವ ರವಿನಾಥ್, ಅತ್ತೆ ಸಾವನ್ನಪ್ಪಿದ್ದಾರೆ. ಹೆಂಡತಿ, ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಅರ್ಜುನ್ಗೆ ರವಿನಾಥ್ ತಮ್ಮ ಮಗಳು ಜಯಶ್ರೀಯನ್ನು ಮದುವೆ ಮಾಡಿಕೊಟ್ಟಿದ್ದರು. ಅರ್ಜುನ್ ಮೂವರು ಮಕ್ಕಳಿದ್ದು, ಅವರಲ್ಲಿ ಓರ್ವ ಮಗ ಮೇಘರಾಜ ಅಪಘಾತದಿಂಂದ ಸಾವನ್ನಪ್ಪಿದ್ದಾನೆ.
6 ವರ್ಷದ ನಾಯನಾ ಸ್ಥಿತಿ ಗಂಭೀರವಾಗಿದ್ದು,. 13 ವರ್ಷದ ಮತ್ತೊಬ್ಬ ಮಗ ಪ್ರೇಮಸಿಂಗ್ಗೂ ಗಾಯವಾಗಿದೆ. ಇವರು ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬರಟಗಿ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ. ಮೃತ ರವಿನಾಥ ಸುನಿಲಾಲ್ ಪತ್ತಾರ ( 52 ), ಪುಷ್ಪಾ ರವಿನಾಥ ಪತ್ತಾರ ( 40) ಇಬ್ಬರು ಗಂಡ-ಹೆಂಡತಿ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ನಿವಾಸಿಗಳು.
ಇದನ್ನೂ ಓದಿ:ಬೇರೊಬ್ಬನ ಜೊತೆ ಮದುವೆ; ನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಜೀವಬಿಟ್ಟ ಪ್ರೇಮಿಗಳು
30 ವರ್ಷದ ಜಯಶ್ರೀ ಅರ್ಜುನ ರಜಪೂತ, 6 ವರ್ಷದ ನಯಾರಾ ಅರ್ಜುನ ರಜಪೂತ, 13 ವರ್ಷದ ಪ್ರೇಮಸಿಂಗ್ ಅರ್ಜುನ ರಜಪೂತಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪುರದಿಂದ ಮಹಾಲಿಂಗಪುರಕ್ಕೆ ಮನೆ ಸ್ಥಳಾಂತರಿಸಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಬ್ಯಾಂಕ್ ಉದ್ಯೋಗಿಯಾಗಿದ್ದ ಅರ್ಜುನ್ ಸಿಂಗ್ಗೆ ಮಹಾಲಿಂಗಪುರದಿಂದ ವಿಜಯಪುರಕ್ಕೆ ವರ್ಗಾವಣೆ ಗೊಂಡಿತ್ತು. ಮನೆ ಸ್ಥಳಾಂತರಿಸಲು ವಿಜಯಪುರದಿಂದ ಜಮಖಂಡಿ ಮಾರ್ಗವಾಗಿ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. KA 28 D 1021 ನಂಬರಿನ ಕಾರಿನಲ್ಲಿ ಏಳು ಜನ ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ಲೋಡ್ ಇದ್ದ KA 16 B 6472 ನಂಬರಿನ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ.
ಇದನ್ನೂ ಓದಿ: RCBಗೆ ಪ್ಲೇ-ಆಫ್ ದಾರಿ ಕಷ್ಟವೇನೂ ಅಲ್ಲ.. ಕಮರುತ್ತಿರುವ ಕನಸುಗಳಿಗೆ ಜೀವ ತುಂಬಲು ಇನ್ನೂ ಇವೆ ದಾರಿಗಳು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ