/newsfirstlive-kannada/media/post_attachments/wp-content/uploads/2024/06/darshan-8-1.jpg)
- ರಾಬರ್ಟ್ ನಿರ್ಮಾಪಕರ ಜೊತೆಗೆ ದರ್ಶನ್ ಗಲಾಟೆ
- ಉಮಾಪತಿಗೆ ಸಿಟ್ಟಿನಲ್ಲಿ ತಗಡು ಎಂದಿದ್ದ ನಟ ದರ್ಶನ್
- ಇಂದು ತಗಡಾಗಿರುವವನು ಮುಂದೊಂದು ದಿನ ಚಿನ್ನದ ತಗಡಾಗಬಹುದು
ರಾಬರ್ಟ್​​ ಸಿನಿಮಾ ಬಳಿಕ ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ನಡುವೆ ಘರ್ಷಣೆ ಉಂಟಾಗಿತ್ತು. ದರ್ಶನ್​​ ಮಾಧ್ಯಮ ಮುಂದೆ ಪ್ರತಿಕ್ರಿಯಿಸುವಾಗ ಉಮಾಪತಿ ಗೌಡಗೆ ತಗಡು ಎಂದು ಹೇಳಿದ್ದರು. ಅದಕ್ಕೆ ಉಮಾಪತಿ ಗೌಡ ಇಂದು ತಗಡಾಗಿರುವವನು ಮುಂದೊಂದು ದಿನ ಚಿನ್ನದ ತಗಡಾಗಬಹುದು ಎಂದು ಪ್ರತ್ಯುತ್ತರ ನೀಡಿದ್ದರು. ಇದೀಗ ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಿರ್ಮಾಪಕ ಉಮಾಪತಿ ಗೌಡರವರು ದರ್ಶನ್​ಗೆ ಟಾಂಗ್​ ಕೊಟ್ಟಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್​ ಹಂಚಿಕೊಳ್ಳುವ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಉಮಾಪತಿ ಗೌಡ​ "ತಾಳ್ಮೆ ಕೆಲವೊಮ್ಮೆ ಶಕ್ತಿ" ಎಂದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಆ ಮೂಲಕ ತಗಡು ಯಾರು ಗೊತೈತಾ, ಎಂದು ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್​ ಅರೆಸ್ಟ್​ ಆದ ಬಳಿಕ ಅವರ​ ಹಳೆಯ ಹೇಳಿಕೆಗಳು, ಡೈಲಾಗ್​ಗಳು ಟ್ರೋಲ್​ ಆಗುತ್ತಿದೆ. ಜೊತೆಗೆ ಉಮಾಪತಿ ಪರವಾಗಿ ಹಲವು ಮೀಮ್ಸ್ ವೈರಲ್ ಆಗಿವೆ. ಸದ್ಯ ಮೀಮ್ಸ್ ಗಳನ್ನು ಉಮಾಪತಿ ಗೌಡ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ