ನಟ ಯಶ್ ಶೇರ್ ಮಾಡಿಕೊಂಡಿರೋ ಸ್ಟೋರಿಗೆ ಕಕ್ಕಾಬಿಕ್ಕಿಯಾದ ನೆಟ್ಟಿಗರು
ಟಾಕ್ಸಿಕ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿರೋ ಗೀತು ಮೋಹನ್ ದಾಸ್
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಈ ಪೋಸ್ಟ್
ರಾಕಿಂಗ್ ಸ್ಟಾರ್ ಯಶ್ ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಕೂಡ ಸದ್ದು ಮಾಡುತ್ತಿದ್ದಾರೆ. ಇದೀಗ ನಟ ಯಶ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿರೋ ಸ್ಟೋರಿಗೆ ನೆಟ್ಟಿಗರು ಕಕ್ಕಾಬಿಕ್ಕಿಯಾಗಿದ್ದಾರೆ. ಹೌದು, ನಟ ಯಶ್ ಟಾಕ್ಸಿಕ್ ಬಗ್ಗೆ ಸುಳಿವು ನೀಡುತ್ತಿದ್ದಾರಾ ಅಥವಾ ಮುಂದಿನ ಹೊಸ ಸಿನಿಮಾ ಬಗ್ಗೆ ಏನಾದರೂ ವಿಚಾರ ಹಂಚಿಕೊಳ್ಳಲಿದ್ದಾರಾ ಅಂತ ಫ್ಯಾನ್ಸ್ ಕುತೂಹಲದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: ಬ್ಯೂಟಿ ಕ್ವೀನ್ ಬರ್ಬರ ಹತ್ಯೆ.. ರೆಸ್ಟೋರೆಂಟ್ನಲ್ಲಿ ಗುಂಡಿಕ್ಕಿ ಕೊಂದ ಹಂತಕರು; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!
ಇನ್ನು, ಟಾಕ್ಸಿಕ್ ಸಿನಿಮಾದ ಕೆಲಸದಲ್ಲಿ ಸಖತ್ ಬ್ಯುಸಿಯಾಗಿರೊ ನಟ ಯಶ್ ರಾಮಾಯಣ ಚಿತ್ರಕ್ಕೆ ನಿರ್ಮಾಪಕರಾಗಿಯೂ ಸಾಥ್ ನೀಡುತ್ತಿದ್ದಾರೆ. ಕೆಜಿಎಫ್ 2 ಸಿನಿಮಾ ರಿಲೀಸ್ ಆಗಿ ಬಾಕ್ಸ್ ಆಫೀಸ್ ಉಡೀಸ್ ಬೆನ್ನಲ್ಲೇ ನಟ ಯಶ್ ಮೌನಕ್ಕೆ ಜಾರಿದ್ದರು. ಇದಾದ ಬಳಿಕ ನಟ ಯಶ್ ಟಾಕ್ಸಿಕ್ ಸಿನಿಮಾದ ಬಗ್ಗೆ ಅಪ್ಡೇಟ್ ನೀಡಿದ್ದರು. ಸದ್ಯ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಮೇಲೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು.
ಗೀತು ಮೋಹನ್ ದಾಸ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಟೀಸರ್ ಸಮೇತ ಸಿನಿಮಾ ಘೋಷಣೆ ಮಾಡಿದ್ದರು. ಆದರೆ ಇದೀಗ ನಟ ಯಶ್ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಪೋಸ್ಟ್ ಮಾಡಬೇಕೇ? ಎಂದು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಯೆಸ್ ಅಥವಾ ನೋ ಅಂತಾ ಕೇಳಿದ್ದಾರೆ. ಹೌದು ಎಂಬ ಉತ್ತರ ಅಭಿಮಾನಿಗಳಿಂದ 94% ಬಂದಿದೆ. ಈ ಪೋಸ್ಟ್ನಿಂದ ಯಶ್ ಪರೋಕ್ಷವಾಗಿ ಮುಂದಿನ ಸಿನಿಮಾದ ಬಗ್ಗೆ ಸುಳಿವು ನೀಡುತ್ತಿದ್ದಾರಾ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಟ ಯಶ್ ಶೇರ್ ಮಾಡಿಕೊಂಡಿರೋ ಸ್ಟೋರಿಗೆ ಕಕ್ಕಾಬಿಕ್ಕಿಯಾದ ನೆಟ್ಟಿಗರು
ಟಾಕ್ಸಿಕ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿರೋ ಗೀತು ಮೋಹನ್ ದಾಸ್
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಈ ಪೋಸ್ಟ್
ರಾಕಿಂಗ್ ಸ್ಟಾರ್ ಯಶ್ ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಕೂಡ ಸದ್ದು ಮಾಡುತ್ತಿದ್ದಾರೆ. ಇದೀಗ ನಟ ಯಶ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿರೋ ಸ್ಟೋರಿಗೆ ನೆಟ್ಟಿಗರು ಕಕ್ಕಾಬಿಕ್ಕಿಯಾಗಿದ್ದಾರೆ. ಹೌದು, ನಟ ಯಶ್ ಟಾಕ್ಸಿಕ್ ಬಗ್ಗೆ ಸುಳಿವು ನೀಡುತ್ತಿದ್ದಾರಾ ಅಥವಾ ಮುಂದಿನ ಹೊಸ ಸಿನಿಮಾ ಬಗ್ಗೆ ಏನಾದರೂ ವಿಚಾರ ಹಂಚಿಕೊಳ್ಳಲಿದ್ದಾರಾ ಅಂತ ಫ್ಯಾನ್ಸ್ ಕುತೂಹಲದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: ಬ್ಯೂಟಿ ಕ್ವೀನ್ ಬರ್ಬರ ಹತ್ಯೆ.. ರೆಸ್ಟೋರೆಂಟ್ನಲ್ಲಿ ಗುಂಡಿಕ್ಕಿ ಕೊಂದ ಹಂತಕರು; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!
ಇನ್ನು, ಟಾಕ್ಸಿಕ್ ಸಿನಿಮಾದ ಕೆಲಸದಲ್ಲಿ ಸಖತ್ ಬ್ಯುಸಿಯಾಗಿರೊ ನಟ ಯಶ್ ರಾಮಾಯಣ ಚಿತ್ರಕ್ಕೆ ನಿರ್ಮಾಪಕರಾಗಿಯೂ ಸಾಥ್ ನೀಡುತ್ತಿದ್ದಾರೆ. ಕೆಜಿಎಫ್ 2 ಸಿನಿಮಾ ರಿಲೀಸ್ ಆಗಿ ಬಾಕ್ಸ್ ಆಫೀಸ್ ಉಡೀಸ್ ಬೆನ್ನಲ್ಲೇ ನಟ ಯಶ್ ಮೌನಕ್ಕೆ ಜಾರಿದ್ದರು. ಇದಾದ ಬಳಿಕ ನಟ ಯಶ್ ಟಾಕ್ಸಿಕ್ ಸಿನಿಮಾದ ಬಗ್ಗೆ ಅಪ್ಡೇಟ್ ನೀಡಿದ್ದರು. ಸದ್ಯ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಮೇಲೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು.
ಗೀತು ಮೋಹನ್ ದಾಸ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಟೀಸರ್ ಸಮೇತ ಸಿನಿಮಾ ಘೋಷಣೆ ಮಾಡಿದ್ದರು. ಆದರೆ ಇದೀಗ ನಟ ಯಶ್ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಪೋಸ್ಟ್ ಮಾಡಬೇಕೇ? ಎಂದು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಯೆಸ್ ಅಥವಾ ನೋ ಅಂತಾ ಕೇಳಿದ್ದಾರೆ. ಹೌದು ಎಂಬ ಉತ್ತರ ಅಭಿಮಾನಿಗಳಿಂದ 94% ಬಂದಿದೆ. ಈ ಪೋಸ್ಟ್ನಿಂದ ಯಶ್ ಪರೋಕ್ಷವಾಗಿ ಮುಂದಿನ ಸಿನಿಮಾದ ಬಗ್ಗೆ ಸುಳಿವು ನೀಡುತ್ತಿದ್ದಾರಾ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ