ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಸೋಲು
ಈ ಬೆನ್ನಲ್ಲೇ ವೆಸ್ಟ್ ಇಂಡೀಸ್ ಟೆಸ್ಟ್ ಸೀರೀಸ್ಗೆ ಟೀಂ ಇಂಡಿಯಾ ಭರ್ಜರಿ ಸಿದ್ಧತೆ
ವೆಸ್ಟ್ ಇಂಡೀಸ್ ಸೀರೀಸ್ನಲ್ಲಿ ರೋಹಿತ್, ಕೊಹ್ಲಿ ಸೇರಿ ಸೀನಿಯರ್ಸ್ಗಿಲ್ಲ ರೆಸ್ಟ್
ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಈ ಬೆನ್ನಲ್ಲೇ ಮತ್ತೊಂದು ಟೆಸ್ಟ್ ಸೀರೀಸ್ಗೆ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಹೀಗಾಗಿ ಜುಲೈನಲ್ಲಿ ನಡೆಯಲಿರೋ ವೆಸ್ಟ್ ಇಂಡೀಸ್ ಸರಣಿಯಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಿ ಯಂಗ್ ಪ್ಲೇಯರ್ಸ್ಗೆ ಅವಕಾಶ ನೀಡುವ ನಿರ್ಧಾರವನ್ನು ಬಿಸಿಸಿಐ ಹಿಂದಕ್ಕೆ ತೆಗೆದುಕೊಂಡಿದೆ.
ಕ್ಯಾಪ್ಟನ್ ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಲವು ಸೀನಿಯರ್ ಪ್ಲೇಯರ್ಸ್ಗೆ ರೆಸ್ಟ್ ನೀಡಲಾಗುವುದು. ಇವರ ಜಾಗದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಲಾಗುವುದು. ಜತೆಗೆ ರೋಹಿತ್ ಅಲ್ಲದೆ ಬೇರೆ ಯಾರಿಗಾದ್ರೂ ನಾಯಕತ್ವದ ಜವಾಬ್ಧಾರಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆದರೀಗ ಈ ನಿರ್ಧಾರದಿಂದ ಬಿಸಿಸಿಐ ಹಿಂದೆ ಸರಿದಿದೆ.
ಇನ್ನು, ಈ ಸೀರೀಸ್ಗೂ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬೂಮ್ರಾ ಅವರಂಥಾ ಆಟಗಾರರು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅಲಭ್ಯವಾಗಿದ್ದಾರೆ. ಹೀಗಾಗಿ ಸೀನಿಯರ್ ಪ್ಲೇಯರ್ಸ್ಗೆ ರೆಸ್ಟ್ ನೀಡಲು ಬಿಸಿಸಿಐ ಹಿಂದೆ ಮುಂದೆ ನೋಡುತ್ತಿದೆ.
ಈ ಸಂಬಂಧ ಮಾತಾಡಿದ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು, ರೋಹಿತ್ ಸೇರಿದಂತೆ ಎಲ್ಲಾ ಸೀನಿಯರ್ಸ್ಗೂ ಸಾಕಾಗುವಷ್ಟು ವಿಶ್ರಾಂತಿ ಸಿಕ್ಕಿದೆ. ಹಾಗಾಗಿ ವರ್ಕ್ಲೋಡ್ ಮ್ಯಾನೇಜ್ಮೆಮಟ್ ಬಗ್ಗೆ ಆತಂಕಪಡೋ ಅಗತ್ಯವಿಲ್ಲ. ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲೇ ಆಡಲಿದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಸೋಲು
ಈ ಬೆನ್ನಲ್ಲೇ ವೆಸ್ಟ್ ಇಂಡೀಸ್ ಟೆಸ್ಟ್ ಸೀರೀಸ್ಗೆ ಟೀಂ ಇಂಡಿಯಾ ಭರ್ಜರಿ ಸಿದ್ಧತೆ
ವೆಸ್ಟ್ ಇಂಡೀಸ್ ಸೀರೀಸ್ನಲ್ಲಿ ರೋಹಿತ್, ಕೊಹ್ಲಿ ಸೇರಿ ಸೀನಿಯರ್ಸ್ಗಿಲ್ಲ ರೆಸ್ಟ್
ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಈ ಬೆನ್ನಲ್ಲೇ ಮತ್ತೊಂದು ಟೆಸ್ಟ್ ಸೀರೀಸ್ಗೆ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಹೀಗಾಗಿ ಜುಲೈನಲ್ಲಿ ನಡೆಯಲಿರೋ ವೆಸ್ಟ್ ಇಂಡೀಸ್ ಸರಣಿಯಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಿ ಯಂಗ್ ಪ್ಲೇಯರ್ಸ್ಗೆ ಅವಕಾಶ ನೀಡುವ ನಿರ್ಧಾರವನ್ನು ಬಿಸಿಸಿಐ ಹಿಂದಕ್ಕೆ ತೆಗೆದುಕೊಂಡಿದೆ.
ಕ್ಯಾಪ್ಟನ್ ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಲವು ಸೀನಿಯರ್ ಪ್ಲೇಯರ್ಸ್ಗೆ ರೆಸ್ಟ್ ನೀಡಲಾಗುವುದು. ಇವರ ಜಾಗದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಲಾಗುವುದು. ಜತೆಗೆ ರೋಹಿತ್ ಅಲ್ಲದೆ ಬೇರೆ ಯಾರಿಗಾದ್ರೂ ನಾಯಕತ್ವದ ಜವಾಬ್ಧಾರಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆದರೀಗ ಈ ನಿರ್ಧಾರದಿಂದ ಬಿಸಿಸಿಐ ಹಿಂದೆ ಸರಿದಿದೆ.
ಇನ್ನು, ಈ ಸೀರೀಸ್ಗೂ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬೂಮ್ರಾ ಅವರಂಥಾ ಆಟಗಾರರು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅಲಭ್ಯವಾಗಿದ್ದಾರೆ. ಹೀಗಾಗಿ ಸೀನಿಯರ್ ಪ್ಲೇಯರ್ಸ್ಗೆ ರೆಸ್ಟ್ ನೀಡಲು ಬಿಸಿಸಿಐ ಹಿಂದೆ ಮುಂದೆ ನೋಡುತ್ತಿದೆ.
ಈ ಸಂಬಂಧ ಮಾತಾಡಿದ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು, ರೋಹಿತ್ ಸೇರಿದಂತೆ ಎಲ್ಲಾ ಸೀನಿಯರ್ಸ್ಗೂ ಸಾಕಾಗುವಷ್ಟು ವಿಶ್ರಾಂತಿ ಸಿಕ್ಕಿದೆ. ಹಾಗಾಗಿ ವರ್ಕ್ಲೋಡ್ ಮ್ಯಾನೇಜ್ಮೆಮಟ್ ಬಗ್ಗೆ ಆತಂಕಪಡೋ ಅಗತ್ಯವಿಲ್ಲ. ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲೇ ಆಡಲಿದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ