/newsfirstlive-kannada/media/post_attachments/wp-content/uploads/2024/07/Team-india.jpg)
ಭಾರತಕ್ಕೆ ಟಿ20 ವಿಶ್ವಕಪ್​​​​ ಚಾಂಪಿಯನ್​ ವೀರರ ಆಗಮನವಾಗಿದೆ. 3 ದಿನ ತಡವಾಗಿ ಎಂಟ್ರಿಕೊಟ್ಟ ರೋಹಿತ್​ ಪಡೆಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಬಾರ್ಬಡೋಸ್​​​ನಂತೆ ಭಾರತದಲ್ಲಿ ಸಂಭ್ರಮ ಮರುಸೃಷ್ಟಿಯಾಗಲಿದ್ದು, ಕೌಂಟ್​ಡೌನ್​ ಶುರುವಾಗಿದೆ. ಬನ್ನಿ ಹಾಗಾದ್ರೆ ವಿಶ್ವಕಪ್​​ ವಿಜೇತ ತಂಡದ ಆಟಗಾರರ ಇಂದಿನ ಡೈರಿ ಹೇಗಿರಲಿದೆ ? ಆ ಕುರಿತ ಕಂಪ್ಲೀಟ್​ ರಿಪೋರ್ಟ್​ ಇಲ್ಲಿದೆ.
ಟಿ20 ವಿಶ್ವಕಪ್​ ಗೆದ್ದು ಚರಿತ್ರೆ ಸೃಷ್ಟಿಸಿದ ಟೀಮ್ ಇಂಡಿಯಾ ಆಟಗಾರರು ಸ್ವದೇಶಕ್ಕೆ ರಿಟರ್ನ್​ ಆಗಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ಬಂದಿಳಿದ ರೋಹಿತ್​ ಬಳಗವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯ್ತು.
ಬೆರಿಲ್​ ಚಂಡಮಾರುತದ ಪರಿಣಾಮ ಕಳೆದ ಮೂರು ದಿನಗಳಿಂದ ಟೀಂ ಇಂಡಿಯಾ ವೆಸ್ಟ್​ಇಂಡೀಸ್​​ನ ಬಾರ್ಬಡೊಸ್​ನಲ್ಲಿ ಉಳಿದುಕೊಂಡಿತ್ತು. ಬಿಸಿಸಿಐ ವಿಶೇಷ ಮುತುವರ್ಜಿ ವಹಿಸಿ ಚಾರ್ಟರ್ಡ್​ ಫ್ಲೈಟ್​ ಮೂಲಕ ಆಟಗಾರರನ್ನ ದೇಶಕ್ಕೆ ಕರೆತಂದಿದೆ. ಇಂದು ಬೆಳಿಗ್ಗೆ 6 ಗಂಟೆಗೆ ರೋಹಿತ್​ & ಟೀಮ್​​ ದೆಹಲಿಗೆ ಬಂದಿಳಿದಿದೆ.
/newsfirstlive-kannada/media/post_attachments/wp-content/uploads/2024/07/Team-india-1.jpg)
ಬೆಳಗಿನ ಜಾವ ಭಾರತಕ್ಕೆ ಆಗಮಿಸಿದ ವಿಶ್ವ ಗೆದ್ದ ವೀರ ಕಲಿಗಳಿಗೆ ಅದ್ಧೂರಿ ಸ್ವಾಗತ ಸಿಕ್ತು. ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್​​ ವಿಜೇತ ತಂಡದ ಜೊತೆ ಉಪಹಾರ ಕೂಟವನ್ನ ಹಮ್ಮಿಕೊಂಡಿದ್ದಾರೆ. ಇದು ಮುಗಿಯುತ್ತಿದ್ದಂತೆ ಇಡೀ ತಂಡ ಮುಂಬೈನತ್ತ ಪ್ರಯಾಣ ಬೆಳೆಸಲಿದೆ.
4 ಗಂಟೆಗೆ ದೆಹಲಿಯಿಂದ ಮುಂಬೈಗೆ ಆಗಮನ.!
ದೆಹಲಿಯಿಂದ ನಾಲ್ಕು ಗಂಟೆಗೆ ಹೊರಡುವ ಟೀಮ್ ಇಂಡಿಯಾ ಆಟಗಾರರು ನೇರವಾಗಿ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. 5 ಗಂಟೆ ವೇಳೆಗೆ ಮರೀನ್​ ಡ್ರೈವ್​​ಗೆ ಎಂಟ್ರಿಕೊಡಲಿದ್ದಾರೆ.
/newsfirstlive-kannada/media/post_attachments/wp-content/uploads/2024/07/India.jpg)
2 ಗಂಟೆ, 10 ಕಿ.ಮೀ.. ಟ್ರೋಫಿ ಜೊತೆ ಪ್ಲೇಯರ್ಸ್​ ಯಾತ್ರೆ.!
ವಿಶ್ವಕಪ್​​ ಜಯಿಸಿ ಬಾರ್ಬಡೋಸ್​ನಲ್ಲಿ ಸಂಭ್ರಮಾಚರಣೆ ಮಾಡಿದ್ದ ರೋಹಿತ್ ಪಡೆ ಭಾರತದಲ್ಲೂ ಸಂಭ್ರಮಿಸಲಿದೆ. ಮರೀನ್​​​ ಡ್ರೈವ್​ನಿಂದ ವಾಂಖೆಡೆ ಮೈದಾನದ ತನಕ ತೆರೆದ ಬಸ್​ನಲ್ಲಿ ಮೆರವಣಿಗೆ ನಡೆಯಲಿದೆ. ಸುಮಾರು 2 ಗಂಟೆಗಳ ಕಾಲ ಮೆರವಣಿಗೆ ಸಾಗಲಿದ್ದು, ಆಟಗಾರರು ಟ್ರೋಫಿ ಜೊತೆ ಈ ಸಂಭ್ರಮದಲ್ಲಿ ಮುಳುಗಲಿದ್ದಾರೆ.
‘ಬನ್ನಿ ಸಂಭ್ರಮಿಸೋಣ’
ನಾನು ವಿಶೇಷವಾದ ಕ್ಷಣವನ್ನ ನಿಮ್ಮೊಂದಿಗೆ ಸಂಭ್ರಮಿಸಲು ಬಯಸುತ್ತೇವೆ. ಈ ಗೆಲುವನ್ನ ಮರೀನ್​ ಡ್ರೈವ್​ನಿಂದ ವಾಂಖೆಡೆವರೆಗೆ ಗೆಲುವಿನ ಯಾತ್ರೆಯ ಮೂಲಕ ಸಂಭ್ರಮಿಸೋಣ. ಇಂದು ಸಂಜೆ 5 ಗಂಟೆಯಿಂದ. ಟ್ರೋಫಿ ಮನೆಗೆ ಬರುತ್ತಿದೆ.
-ರೋಹಿತ್​ ಶರ್ಮಾ, ಟೀಮ್​ ಇಂಡಿಯಾ ಕ್ಯಾಪ್ಟನ್​
ಒಂದೇ ವೇದಿಕೆಯಲ್ಲಿ ಬಿಸಿಸಿಐ ಬಾಸ್​ಗಳು, ಆಟಗಾರರು
ಇನ್ನು ಓಪನ್​ ಬಸ್​​ ಪರೇಡ್​ ಬಳಿಕ ಐಕಾನಿಕ್​​​ ವಾಂಖೆಡೆ ಮೈದಾನದಲ್ಲಿ ಅವಿಸ್ಮರಣೀಯ ಸಮಾರಂಭ ನಡೆಯಲಿದೆ. ಈ ವೇಳೆ ವಿಶ್ವಕಪ್ ಗೆದ್ದು ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಟೀಮ್ ಇಂಡಿಯಾ ಆಟಗಾರರು, ಕೋಚಸ್​ ಹಾಗೂ ಸಪೋರ್ಟಿಂಗ್ ಸ್ಟಾಪ್​​​​​​ಗೆ ಬಿಸಿಸಿಐ 125 ಕೋಟಿ ರೂಪಾಯಿ ಬಹುಮಾನವನ್ನ ವಿತರಿಸಲಿದೆ.
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us