ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ವಿರುದ್ಧ ರೋಹಿತ್ ಕೆಂಡಾಮಂಡಲ
ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಪರೋಕ್ಷವಾಗಿ ರೋಹಿತ್ ಆಕ್ರೋಶ
ಹಸಿವು ಇದ್ದವರಿಗೆ ಮಾತ್ರ ತಂಡದಲ್ಲಿ ಅವಕಾಶ ಎಂದು ಪುನರುಚ್ಚಾರಣೆ!
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ಗೆ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೊಕ್ ನೀಡಿ ಬಿಸಿಸಿಐ ಬಿಗ್ ಶಾಕ್ ಕೊಟ್ಟಿದೆ. ಈ ಬೆನ್ನಲ್ಲೇ ಎಚ್ಚೆತ್ತ ಅಯ್ಯರ್ ಮಾತ್ರ ಮಾರ್ಚ್ 2ನೇ ತಾರೀಕಿನಿಂದ ತಮಿಳುನಾಡು ವಿರುದ್ಧ ನಡೆಯೋ ರಣಜಿ ಸೆಮಿ ಫೈನಲ್ನಲ್ಲಿ ಮುಂಬೈ ತಂಡದ ಪರ ಆಡಲು ಮುಂದಾಗಿದ್ದಾರೆ. ಇನ್ನೊಂದೆಡೆ ಇಶಾನ್ ಕಿಶನ್ ಐಪಿಎಲ್ ತಯಾರಿಯಲ್ಲಿ ತೊಡಗಿದ್ದಾರೆ. ಈ ಮಧ್ಯೆ ಇಬ್ಬರ ಬಗ್ಗೆ ಮಹತ್ವದ ಸುದ್ದಿ ಹೊರಬಿದ್ದಿದೆ.
ಹೌದು, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಕುರಿತು ದೊಡ್ಡ ಸುದ್ದಿ ಹೊರಬಿದ್ದಿದೆ. ಐಪಿಎಲ್ ಬಳಿಕ ನಡೆಯೋ 2024ರ ಟಿ20 ವಿಶ್ವಕಪ್ನಲ್ಲೂ ಇಶಾನ್ ಮತ್ತು ಅಯ್ಯರ್ ಭಾಗವಹಿಸುವುದು ಬಹುತೇಕ ಡೌಟ್. ಇಬ್ಬರನ್ನು ಐಸಿಸಿ ಮಹತ್ವದ ಟೂರ್ನಿಯಿಂದಲೇ ಕೈ ಬಿಡೋ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
So Rohit Sharma Was Talking about Shreyas Iyer and Ishan Kishan Here ……….#ShreyasIyer #IshanKishan #BCCI #HardikPandya #Chahalpic.twitter.com/FUdHG7iR0m
— Anvar Khan (@anvarkhan63) February 29, 2024
ಇನ್ನು, ಈ ಬಗ್ಗೆ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಮಾತಾಡಿದ್ದಾರೆ. ಸವಾಲುಗಳನ್ನು ಸ್ವೀಕರಿಸಿ ಯಶಸ್ಸು ಸಾಧಿಸಬೇಕು ಎನ್ನುವ ‘ಹಸಿವು’ ಇರುವ ಆಟಗಾರರಿಗೆ ಮಾತ್ರ ಅವಕಾಶ ನೀಡುತ್ತೇವೆ ಎಂದು ಈಗಾಗಲೇ ಹೇಳಿದ್ದೇನೆ. ‘ಹಸಿವು’ ಇಲ್ಲದವರನ್ನು ಆಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದಿದ್ದಾರೆ.
ಇಶಾನ್ ಕಿಶನ್ ಸೇರಿದಂತೆ ಹಲವರು ಭಾರತ ತಂಡದಿಂದ ಹೊರಗುಳಿದಿದ್ದರು. ಈ ಸಂದರ್ಭದಲ್ಲಿ ದೇಸಿ ಕ್ರಿಕೆಟ್ನಲ್ಲಿ ಆಡದೆ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿದ್ದರು. ಈ ಬಗ್ಗೆ ಬಿಸಿಸಿಐ ಸೂಕ್ತ ಕ್ರಮದ ಎಚ್ಚರಿಗೆ ನೀಡಿದ್ರೂ ಕೆಲ ಆಟಗಾರರು ಅದನ್ನು ಕಡೆಗಣಿಸಿದ್ದಾರೆ. ಇದರ ಮಧ್ಯೆ ರೋಹಿತ್ ಹೇಳಿಕೆ ಬಂದಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ವಿರುದ್ಧ ರೋಹಿತ್ ಕೆಂಡಾಮಂಡಲ
ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಪರೋಕ್ಷವಾಗಿ ರೋಹಿತ್ ಆಕ್ರೋಶ
ಹಸಿವು ಇದ್ದವರಿಗೆ ಮಾತ್ರ ತಂಡದಲ್ಲಿ ಅವಕಾಶ ಎಂದು ಪುನರುಚ್ಚಾರಣೆ!
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ಗೆ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೊಕ್ ನೀಡಿ ಬಿಸಿಸಿಐ ಬಿಗ್ ಶಾಕ್ ಕೊಟ್ಟಿದೆ. ಈ ಬೆನ್ನಲ್ಲೇ ಎಚ್ಚೆತ್ತ ಅಯ್ಯರ್ ಮಾತ್ರ ಮಾರ್ಚ್ 2ನೇ ತಾರೀಕಿನಿಂದ ತಮಿಳುನಾಡು ವಿರುದ್ಧ ನಡೆಯೋ ರಣಜಿ ಸೆಮಿ ಫೈನಲ್ನಲ್ಲಿ ಮುಂಬೈ ತಂಡದ ಪರ ಆಡಲು ಮುಂದಾಗಿದ್ದಾರೆ. ಇನ್ನೊಂದೆಡೆ ಇಶಾನ್ ಕಿಶನ್ ಐಪಿಎಲ್ ತಯಾರಿಯಲ್ಲಿ ತೊಡಗಿದ್ದಾರೆ. ಈ ಮಧ್ಯೆ ಇಬ್ಬರ ಬಗ್ಗೆ ಮಹತ್ವದ ಸುದ್ದಿ ಹೊರಬಿದ್ದಿದೆ.
ಹೌದು, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಕುರಿತು ದೊಡ್ಡ ಸುದ್ದಿ ಹೊರಬಿದ್ದಿದೆ. ಐಪಿಎಲ್ ಬಳಿಕ ನಡೆಯೋ 2024ರ ಟಿ20 ವಿಶ್ವಕಪ್ನಲ್ಲೂ ಇಶಾನ್ ಮತ್ತು ಅಯ್ಯರ್ ಭಾಗವಹಿಸುವುದು ಬಹುತೇಕ ಡೌಟ್. ಇಬ್ಬರನ್ನು ಐಸಿಸಿ ಮಹತ್ವದ ಟೂರ್ನಿಯಿಂದಲೇ ಕೈ ಬಿಡೋ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
So Rohit Sharma Was Talking about Shreyas Iyer and Ishan Kishan Here ……….#ShreyasIyer #IshanKishan #BCCI #HardikPandya #Chahalpic.twitter.com/FUdHG7iR0m
— Anvar Khan (@anvarkhan63) February 29, 2024
ಇನ್ನು, ಈ ಬಗ್ಗೆ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಮಾತಾಡಿದ್ದಾರೆ. ಸವಾಲುಗಳನ್ನು ಸ್ವೀಕರಿಸಿ ಯಶಸ್ಸು ಸಾಧಿಸಬೇಕು ಎನ್ನುವ ‘ಹಸಿವು’ ಇರುವ ಆಟಗಾರರಿಗೆ ಮಾತ್ರ ಅವಕಾಶ ನೀಡುತ್ತೇವೆ ಎಂದು ಈಗಾಗಲೇ ಹೇಳಿದ್ದೇನೆ. ‘ಹಸಿವು’ ಇಲ್ಲದವರನ್ನು ಆಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದಿದ್ದಾರೆ.
ಇಶಾನ್ ಕಿಶನ್ ಸೇರಿದಂತೆ ಹಲವರು ಭಾರತ ತಂಡದಿಂದ ಹೊರಗುಳಿದಿದ್ದರು. ಈ ಸಂದರ್ಭದಲ್ಲಿ ದೇಸಿ ಕ್ರಿಕೆಟ್ನಲ್ಲಿ ಆಡದೆ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿದ್ದರು. ಈ ಬಗ್ಗೆ ಬಿಸಿಸಿಐ ಸೂಕ್ತ ಕ್ರಮದ ಎಚ್ಚರಿಗೆ ನೀಡಿದ್ರೂ ಕೆಲ ಆಟಗಾರರು ಅದನ್ನು ಕಡೆಗಣಿಸಿದ್ದಾರೆ. ಇದರ ಮಧ್ಯೆ ರೋಹಿತ್ ಹೇಳಿಕೆ ಬಂದಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ