/newsfirstlive-kannada/media/post_attachments/wp-content/uploads/2024/12/Rohit-Sharma_News.jpg)
ಮೆಲ್ಬೋರ್ನ್ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ 4ನೇ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು, ಮಹತ್ವದ ಸರಣಿಯನ್ನು ಉಳಿಸಿಕೊಳ್ಳಲು ಟೀಮ್​ ಇಂಡಿಯಾ ಸಿಡ್ನಿ ಟೆಸ್ಟ್​ ಗೆಲ್ಲಲೇಬೇಕು. ಮೂರು ದಿನಗಳ ಬಳಿಕ ಎಂದರೆ ಜನವರಿ 3ನೇ ತಾರೀಕಿನಿಂದ ಈ ಟೆಸ್ಟ್​ ಶುರುವಾಗಲಿದೆ. ಇದರ ಮಧ್ಯೆ ಮೆಲ್ಬೋರ್ನ್ ಟೆಸ್ಟ್​ನಲ್ಲಿ ಆದ ಯಶಸ್ವಿ ಜೈಸ್ವಾಲ್ ವಿವಾದಾತ್ಮಕ ಔಟ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಕ್ಯಾಪ್ಟನ್​ ರೋಹಿತ್​ ಶರ್ಮಾ ಮಾತಾಡಿದ್ದಾರೆ.
ಕ್ಯಾಪ್ಟನ್​ ರೋಹಿತ್​ ಶರ್ಮಾ ಏನಂದ್ರು?
ಜೈಸ್ವಾಲ್ ಔಟಾಗಿದ್ದು ದುರದೃಷ್ಟಕರ. ತಂತ್ರಜ್ಞಾನ 100 ಪರ್ಸೆಟ್​​ ಪರಿಪೂರ್ಣವಲ್ಲ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ ಅಂಪೈರ್ ತೀರ್ಮಾನ ದುರದೃಷ್ಟಕರ. ಮೊದಲು ಚೆಂಡು ಬ್ಯಾಟ್ಗೆ ತಗುಲಿರಲಿಲ್ಲ ಎಂದು ತೋರಿತು. ಇನ್ನೂ ನಾವು ಈ ಬಗ್ಗೆ ಹೆಚ್ಚು ಗಮನ ಹರಿಸಲು ಬಯಸುವುದಿಲ್ಲ ಎಂದರು.
ಭಾರತ ತಂಡಕ್ಕೆ ಹೀನಾಯ ಸೋಲು
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್​ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 369 ರನ್ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​​ನಲ್ಲಿ 105 ರನ್ಗಳ ಮುನ್ನಡೆ ಸಾಧಿಸಿತು. 2ನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 234 ರನ್ ಗಳಿಸಿ 340 ರನ್ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ 155 ರನ್ ಗಳಿಸಿ 184 ರನ್ಗಳಿಂದ ಹೀನಾಯ ಸೋಲು ಕಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us