Advertisment

ರೋಹಿತ್ ಶರ್ಮಾಗೆ ಬಿಗ್​ ಶಾಕ್ ಕೊಟ್ಟ ಹಾರ್ದಿಕ್ ಪಾಂಡ್ಯ.. ಮುಂಬೈ ತಂಡದಿಂದ ಹಿಟ್​ಮ್ಯಾನ್ ಹೊರಕ್ಕೆ!

author-image
Bheemappa
Updated On
ರೋಹಿತ್ ಶರ್ಮಾಗೆ ಬಿಗ್​ ಶಾಕ್ ಕೊಟ್ಟ ಹಾರ್ದಿಕ್ ಪಾಂಡ್ಯ.. ಮುಂಬೈ ತಂಡದಿಂದ ಹಿಟ್​ಮ್ಯಾನ್ ಹೊರಕ್ಕೆ!
Advertisment
  • ರೋಹಿತ್ ಶರ್ಮಾ ಅವರನ್ನು ತಂಡದಿಂದ ಹೊರಗಿಟ್ಟಿದ್ದು ಯಾಕೆ?
  • ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ನಡೆಯುತ್ತಿರುವ ಪಂದ್ಯ
  • ರೋಹಿತ್ ಶರ್ಮಾ ಕುರಿತು ಹಾರ್ದಿಕ್ ಪಾಂಡ್ಯ ಹೇಳಿರುವುದು ಏನು?

ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹಿಟ್​ಮ್ಯಾನ್ ರೋಹಿತ್ ಶರ್ಮಾ ಅವರನ್ನು ಹೊರಗಿಡಲಾಗಿದೆ.

Advertisment

ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದುಕೊಂಡು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರಿಷಭ್ ಪಂತ್ ನೇತೃತ್ವದ ಲಕ್ನೋ ಟೀಮ್ ಅನ್ನು ಬ್ಯಾಟಿಂಗ್​ಗೆ ಆಹ್ವಾನ ಮಾಡಿದ್ದು ಈಗಾಗಲೇ ಲಕ್ನೋ ಓಪನರ್ಸ್ ಬ್ಯಾಟಿಂಗ್ ಆರಂಭಿಸಿದ್ದಾರೆ.

ಇದನ್ನೂ ಓದಿ: ಲೋಡೆಡ್ ಗನ್​, ಬುಲೆಟ್ ಸಮೇತ 82,000 ಜನ ಇರೋ ಕ್ರಿಕೆಟ್​ ಸ್ಟೇಡಿಯಂಗೆ ನುಗ್ಗಿದ ದುರ್ಷರ್ಮಿಗಳು

publive-image

ಟಾಸ್ ಗೆದ್ದ ಬಳಿಕ ಮಾತನಾಡಿದ ಮುಂಬೈ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ಉತ್ತಮ ವಿಕೆಟ್​ಗಳನ್ನು ಉರುಳಿಸಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದೇವೆ. ಆಟದಲ್ಲಿ ಏನು ಬೇಕಾದರೂ ಆಗಬಹುದು. ಒಳ್ಳೆಯ ಟ್ರ್ಯಾಕ್ ಕಾಣುತ್ತಿದ್ದು ಇಬ್ಬನಿ ನಂತರ ರನ್ಸ್ ಬರಬಹುದು. ಚೇಸ್ ಮಾಡುವುದು ಉತ್ತಮ ಅಂತ ಬೌಲಿಂಗ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisment

ತಂಡದ ಬಗ್ಗೆ ಈಗ ಹೆಚ್ಚು ಮಾತನಾಡಬಾರದು. ತಂಡದಲ್ಲಿ ಹೊಂದಾಣಿಕೆ ಮುಖ್ಯ. ಸರಿಯಾದ ಪ್ಲಾನ್​ಗಳಿಂದ ಮುನ್ನಡೆಯಲು ಯೋಜಿಸಿದ್ದೇವೆ. ಪರಿಸ್ಥಿತಿ ಆಧರಿಸಿ ಟಾರ್ಗೆಟ್ ರನ್​ಗಳ ಬಾರಿಸಲು ಯೋಜನೆ ಇದೆ. ಅಭ್ಯಾಸದ ಸಮಯದಲ್ಲಿ ರೋಹಿತ್ ಶರ್ಮಾ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದ್ದು ಗಾಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಅವರನ್ನು ಹೊರಗಿಡಲಾಗಿದೆ. ಈ ಅವಕಾಶ ಕಳೆದುಕೊಂಡಿದ್ದಾರೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment
Advertisment
Advertisment