/newsfirstlive-kannada/media/post_attachments/wp-content/uploads/2025/01/ROHIT-18.jpg)
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಹಾಗೂ ಶ್ರೇಯಸ್ ಅಯ್ಯರ್​ ಮುಂಬೈ ತಂಡಕ್ಕೆ ಕೈಕೊಟ್ಟಿದ್ದಾರೆ. ಮೆಘಾಲಯದ ವಿರುದ್ಧ ನಡೆಯುವ ರಣಜಿ ಟ್ರೋಫಿ ಪಂದ್ಯದಲ್ಲಿ ಆಡುವುದಿಲ್ಲ. ಫೆಬ್ರವರಿಯಲ್ಲಿ ಚಾಂಪಿಯನ್ಸ್​ ಟ್ರೋಫಿ ಶುರುವಾಗಲಿದೆ. ಅದರ ತಯಾರಿ ಹಿನ್ನೆಲೆಯಲ್ಲಿ ಈ ಮೂವರು ಸ್ಟಾರ್​ಗಳು ಆಡುವುದಿಲ್ಲ.
ಈ ಮೂವರು ಸ್ಟಾರ್​​ಗಳು ಶರದ್ ಪವಾರ್ ಅಕಾಡೆಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು-ಕಾಶ್ಮೀರದ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ತಂಡ 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಮುಂದಿನ ಪಂದ್ಯಗಳಿಗೆ ರೋಹಿತ್, ಅಯ್ಯರ್ ಹಾಗೂ ಜೈಸ್ವಾಲ್ ಆಡದಿರೋರು ತಂಡಕ್ಕೆ ಭಾರೀ ಹೊಡೆತ ಬೀಳಲಿದೆ. ಕಳೆದ ಪಂದ್ಯದಲ್ಲಿ ಶಾರ್ದುಲ್ ಠಾಕೂರ್ ಅವರು ಅದ್ಭುತ ಆಟವಾಡಿದರು.
ಎರಡು ಇನ್ನಿಂಗ್ಸ್​ನಲ್ಲಿ 51 ಹಾಗೂ 119 ರನ್​ಗಳಿಸಿ ಗಮನ ಸೆಳೆದಿದ್ದರು. ಪರಿಣಾಮ ಜಮ್ಮು ಕಾಶ್ಮೀರ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್​ ಸುಲಭವಾಗಿ ಗೆಲುವು ದಾಖಲಿಸಿತ್ತು. ಮುಂಬೈ ತಂಡವನ್ನು ಅಜಿಂಕ್ಯ ರಹಾನೆ ಅವರು ಮುನ್ನಡೆಸುತ್ತಿದ್ದಾರೆ. ಮುಂದಿನ ಪಂದ್ಯವು ಮೆಘಾಲಯದ ವಿರುದ್ಧ ನಡೆಯಲಿದ್ದು, ಗೆದ್ದರೆ ಸೆಮೀಸ್​ಗೆ ತಲುಪಲಿದೆ.
ರೋಹಿತ್, ಜೈಸ್ವಾಲ್ ಮತ್ತು ಅಯ್ಯರ್ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗಿಯಾಗುತ್ತಿದ್ದಾರೆ. ಫೆಬ್ರವರಿ 6, 9 ಮತ್ತು 12 ರಂದು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯ ನಡೆಯಲಿದೆ. ನಂತರ ಐಸಿಸಿ ಚಾಂಪಿಯನ್ಸ್​ ಟ್ರೋಫಿ ನಡೆಯಲಿದೆ. 23 ವರ್ಷದ ಜೈಸ್ವಾಲ್, ಮೊದಲ ಬಾರಿಗೆ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us