ಆನೇಕಲ್ ತಾಲೂಕಿನ ಮೈಸೂರಮ್ಮನದೊಡ್ಡಿ ಬಳಿ ಅಡಗಿದ್ದ ಆರೋಪಿ
ಎರಡು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಇನ್ಸ್ಪೆಕ್ಟರ್ ಸೂಚನೆ
ಒಂದು ವಾರದಿಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಕಾರ್ತಿಕ್
ಬೆಂಗಳೂರು: ಪುರಸಭಾ ಸದಸ್ಯನನ್ನು ಕೊಲೆ ಮಾಡಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿರೋ ಘಟನೆ ಹೊರವಲಯದ ಆನೇಕಲ್ನಲ್ಲಿ ನಡೆದಿದೆ. ಕಾರ್ತಿಕ್ ಗುಂಡೇಟು ತಗುಲಿರೋ ಆರೋಪಿಯಾಗಿದ್ದಾನೆ. ಆರೋಪಿ ಕಾರ್ತಿಕ್ ಆನೇಕಲ್ ತಾಲೂಕಿನ ಮೈಸೂರಮ್ಮನದೊಡ್ಡಿ ಬಳಿ ಅಡಗಿ ಕುಳಿತಿದ್ದ.
ಇದನ್ನೂ ಓದಿ: ಮಾಜಿ ಲವರ್ಗಾಗಿ ಗಂಡನನ್ನೇ ಕೊಂದ ಹೆಂಡತಿ.. ಪತಿ ಕೊಲೆಗೆ ಹೇಗಿತ್ತು ಮಾಸ್ಟರ್ ಪ್ಲಾನ್?
ಈ ವೇಳೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಪೇದೆ ಸುರೇಶ್ ಅವರ ಮೇಲೆ ಹಲ್ಲೆ ಮಾಡಿದ್ದಾನಂತೆ. ಆಗ ಪೊಲೀಸರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಸೂಚನೆ ನೀಡಿದ್ದಾರೆ. ಆದರೂ ಆರೋಪಿ ಕಾರ್ತಿಕ್ ಮಾರಕಸ್ತ್ರ ಹಿಡಿದು ಮುನ್ನುಗುತ್ತಿದ್ದನಂತೆ. ಈ ಸಂದರ್ಭದಲ್ಲಿ ಆನೇಕಲ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ಅವರು ಆರೋಪಿ ಕಾರ್ತಿಕ್ ಕಾಲಿಗೆ ಪೈರಿಂಗ್ ಮಾಡಿದ್ದಾರೆ. ಆಗ ಆರೋಪಿ ಬಲಗಾಲಿಗೆ ಗುಂಡು ತಾಕಿದೆ.
ಏನಿದು ಪ್ರಕರಣ..?
ಕಳೆದ 24ನೇ ತಾರೀಖಿನಂದು ಕಚೇರಿಯಲ್ಲಿದ್ದಾಗ ಪುರಸಭಾ ಸದಸ್ಯ ಸ್ಕ್ರಾಪ್ ರವಿ ಅವರನ್ನು ರೌಡಿ ಶೀಟರ್ ಕಾರ್ತಿಕ್ ಬರ್ಬರವಾಗಿ ಹತ್ಯೆ ಮಾಡಿದ್ದ. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಸೇರಿದಂತೆ ಸಹಚರರು ಪುರಸಭಾ ಸದಸ್ಯನ ರವಿ ಕೊಲೆ ಮಾಡಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದರು. ಹೀಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ರವರ ನೇತೃತ್ವದಲ್ಲಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ರವಿ ಅವರ ಕೊಲೆ ಕೇಸ್ನಲ್ಲಿ ಕಾರ್ತಿಕ್@ ಜೆಕೆ ಪ್ರಮುಖ ಆರೋಪಿಯಾಗಿದ್ದ. ಒಂದು ವಾರದಿಂದ ಪೊಲೀಸರಿಂದ ತಪ್ಪಿಸಿಕೊಂಡು ಕಾರ್ತಿಕ್ ಓಡಾಡುತ್ತಿದ್ದನಂತೆ.
ಇದನ್ನೂ ಓದಿ: ಹನಿಮೂನ್ಗೆ ಹೋದ ನವಜೋಡಿಗಳು ನಾಪತ್ತೆ; ಕೇರಳದ ಭೀಕರತೆ ಬಿಚ್ಚಿಟ್ಟ ಬೆಂಗಳೂರಿನ ಚಾಲಕ- VIDEO
ಆದರೆ ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟ್ಗೆ ಶರಣಾಗತಿ ಆಗಿದ್ದರು. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು ಸಿಕ್ಕಿರಲಿಲ್ಲ. ಹೀಗಾಗಿ ಕಾರ್ತಿಕ್ನನ್ನು ಬಂಧಿಸಲೇಂದು ಎರಡು ತಂಡ ರಚನೆ ಮಾಡಲಾಗಿತ್ತು. ಮುಂಜಾನೆ ಕಾರ್ತಿಕ್ ಅಡಗಿರುವ ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಫುಲ್ ಅಲರ್ಟ್ ಆಗಿ ಅರೆಸ್ಟ್ ಮಾಡಲು ಹೋಗಿದ್ದರು. ಅದೇ ಸಮಯದಲ್ಲಿ ಆರೋಪಿ ಪೊಲೀಸ್ ಪೇದೆ ಸುರೇಶ್ ಅವರ ಮೇಲೆ ಹಲ್ಲೆ ಮಾಡಿದ್ದಾನಂತೆ. ಹೀಗಾಗಿ ಆತ್ಮ ರಕ್ಷಣೆಗಾಗಿ ಪೊಲೀಸರು ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆನೇಕಲ್ ತಾಲೂಕಿನ ಮೈಸೂರಮ್ಮನದೊಡ್ಡಿ ಬಳಿ ಅಡಗಿದ್ದ ಆರೋಪಿ
ಎರಡು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಇನ್ಸ್ಪೆಕ್ಟರ್ ಸೂಚನೆ
ಒಂದು ವಾರದಿಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಕಾರ್ತಿಕ್
ಬೆಂಗಳೂರು: ಪುರಸಭಾ ಸದಸ್ಯನನ್ನು ಕೊಲೆ ಮಾಡಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿರೋ ಘಟನೆ ಹೊರವಲಯದ ಆನೇಕಲ್ನಲ್ಲಿ ನಡೆದಿದೆ. ಕಾರ್ತಿಕ್ ಗುಂಡೇಟು ತಗುಲಿರೋ ಆರೋಪಿಯಾಗಿದ್ದಾನೆ. ಆರೋಪಿ ಕಾರ್ತಿಕ್ ಆನೇಕಲ್ ತಾಲೂಕಿನ ಮೈಸೂರಮ್ಮನದೊಡ್ಡಿ ಬಳಿ ಅಡಗಿ ಕುಳಿತಿದ್ದ.
ಇದನ್ನೂ ಓದಿ: ಮಾಜಿ ಲವರ್ಗಾಗಿ ಗಂಡನನ್ನೇ ಕೊಂದ ಹೆಂಡತಿ.. ಪತಿ ಕೊಲೆಗೆ ಹೇಗಿತ್ತು ಮಾಸ್ಟರ್ ಪ್ಲಾನ್?
ಈ ವೇಳೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಪೇದೆ ಸುರೇಶ್ ಅವರ ಮೇಲೆ ಹಲ್ಲೆ ಮಾಡಿದ್ದಾನಂತೆ. ಆಗ ಪೊಲೀಸರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಸೂಚನೆ ನೀಡಿದ್ದಾರೆ. ಆದರೂ ಆರೋಪಿ ಕಾರ್ತಿಕ್ ಮಾರಕಸ್ತ್ರ ಹಿಡಿದು ಮುನ್ನುಗುತ್ತಿದ್ದನಂತೆ. ಈ ಸಂದರ್ಭದಲ್ಲಿ ಆನೇಕಲ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ಅವರು ಆರೋಪಿ ಕಾರ್ತಿಕ್ ಕಾಲಿಗೆ ಪೈರಿಂಗ್ ಮಾಡಿದ್ದಾರೆ. ಆಗ ಆರೋಪಿ ಬಲಗಾಲಿಗೆ ಗುಂಡು ತಾಕಿದೆ.
ಏನಿದು ಪ್ರಕರಣ..?
ಕಳೆದ 24ನೇ ತಾರೀಖಿನಂದು ಕಚೇರಿಯಲ್ಲಿದ್ದಾಗ ಪುರಸಭಾ ಸದಸ್ಯ ಸ್ಕ್ರಾಪ್ ರವಿ ಅವರನ್ನು ರೌಡಿ ಶೀಟರ್ ಕಾರ್ತಿಕ್ ಬರ್ಬರವಾಗಿ ಹತ್ಯೆ ಮಾಡಿದ್ದ. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಸೇರಿದಂತೆ ಸಹಚರರು ಪುರಸಭಾ ಸದಸ್ಯನ ರವಿ ಕೊಲೆ ಮಾಡಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದರು. ಹೀಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ರವರ ನೇತೃತ್ವದಲ್ಲಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ರವಿ ಅವರ ಕೊಲೆ ಕೇಸ್ನಲ್ಲಿ ಕಾರ್ತಿಕ್@ ಜೆಕೆ ಪ್ರಮುಖ ಆರೋಪಿಯಾಗಿದ್ದ. ಒಂದು ವಾರದಿಂದ ಪೊಲೀಸರಿಂದ ತಪ್ಪಿಸಿಕೊಂಡು ಕಾರ್ತಿಕ್ ಓಡಾಡುತ್ತಿದ್ದನಂತೆ.
ಇದನ್ನೂ ಓದಿ: ಹನಿಮೂನ್ಗೆ ಹೋದ ನವಜೋಡಿಗಳು ನಾಪತ್ತೆ; ಕೇರಳದ ಭೀಕರತೆ ಬಿಚ್ಚಿಟ್ಟ ಬೆಂಗಳೂರಿನ ಚಾಲಕ- VIDEO
ಆದರೆ ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟ್ಗೆ ಶರಣಾಗತಿ ಆಗಿದ್ದರು. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು ಸಿಕ್ಕಿರಲಿಲ್ಲ. ಹೀಗಾಗಿ ಕಾರ್ತಿಕ್ನನ್ನು ಬಂಧಿಸಲೇಂದು ಎರಡು ತಂಡ ರಚನೆ ಮಾಡಲಾಗಿತ್ತು. ಮುಂಜಾನೆ ಕಾರ್ತಿಕ್ ಅಡಗಿರುವ ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಫುಲ್ ಅಲರ್ಟ್ ಆಗಿ ಅರೆಸ್ಟ್ ಮಾಡಲು ಹೋಗಿದ್ದರು. ಅದೇ ಸಮಯದಲ್ಲಿ ಆರೋಪಿ ಪೊಲೀಸ್ ಪೇದೆ ಸುರೇಶ್ ಅವರ ಮೇಲೆ ಹಲ್ಲೆ ಮಾಡಿದ್ದಾನಂತೆ. ಹೀಗಾಗಿ ಆತ್ಮ ರಕ್ಷಣೆಗಾಗಿ ಪೊಲೀಸರು ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ