newsfirstkannada.com

ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ; ಹುಬ್ಬಳ್ಳಿಯಲ್ಲಿ ರೌಡಿಗಳ ಅಟ್ಟಹಾಸ ವಿಡಿಯೋದಲ್ಲಿ ಸೆರೆ

Share :

11-07-2023

    ಯುವಕನ ಮೇಲೆ ಹಲ್ಲೆ ಮಾಡಿದ ರೌಡಿಗಳ ಗ್ಯಾಂಗ್

    ಯುವಕನ ಬಟ್ಟೆ ಬಿಚ್ಚಿಸಿ ಸರಿಯಾಗಿ ಹೊಡೆದ ಪುಂಡರು

    ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದ ಘಟನೆ

ಹುಬ್ಬಳ್ಳಿ: ಯುವಕನೊಬ್ಬನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಇನ್​ಸ್ಟಾಗ್ರಾಮ್​ನಲ್ಲಿ ಬೈದು, ಮೆಸೇಜ್ ಹಾಕಿದ್ದ ಎಂಬ ಕಾರಣಕ್ಕೆ ರೌಡಿಗಳು ಯುವಕನ ಬಟ್ಟೆ ತೆಗೆಸಿದ್ದಾರೆ ಬಳಿಕ ಸರಿಯಾಗಿ ಹೊಡೆದಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್​ ಆಗಿದೆ.

ಸೆಟ್ಲಮೆಂಟ್ ಏರಿಯಾದ ರೌಡಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಸೆಟ್ಲಮೆಂಟ್ ಏರಿಯಾದ ಗಂಗಾಧರ ನಗರದ ಪ್ರಜ್ವಲ್ ಗಾಯಕವಾಡ, ಗಬ್ಬೂರಿನ ಜಸ್ಟೀನ್ ಮಂಜ್ಯಾ ಅಲಿಯಾಸ್ ಮಂಜುನಾಥ್ ಅಂಗಡಿ ಮತ್ತು ಮಂಜುನಾಥ್​ ಹಲ್ಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ. ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಬಳಿಕ ಪುಂಡರು ವಿಡಿಯೋವನ್ನು ಹರಿಬಿಟ್ಟಿದ್ದಾರೆ.

ಸದ್ಯ ಹರಿದಾಡುತ್ತಿರುವ ವಿಡಿಯೋದಲ್ಲಿ ಯುವಕ ಅಳುತ್ತಾ ಕೈ ಮುಗಿದು ಬೇಡಿಕೊಂಡರೂ ಕಿರಾತರು ಬಿಟ್ಟು ಬಿಡದೆ ಹೊಡೆದಿದ್ದಾರೆ. ಈ ಕೃತ್ಯದ ಕಿಂಗ್ ಪಿನ್ ಜಾದವ್ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ; ಹುಬ್ಬಳ್ಳಿಯಲ್ಲಿ ರೌಡಿಗಳ ಅಟ್ಟಹಾಸ ವಿಡಿಯೋದಲ್ಲಿ ಸೆರೆ

https://newsfirstlive.com/wp-content/uploads/2023/07/Hubballi.jpg

    ಯುವಕನ ಮೇಲೆ ಹಲ್ಲೆ ಮಾಡಿದ ರೌಡಿಗಳ ಗ್ಯಾಂಗ್

    ಯುವಕನ ಬಟ್ಟೆ ಬಿಚ್ಚಿಸಿ ಸರಿಯಾಗಿ ಹೊಡೆದ ಪುಂಡರು

    ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದ ಘಟನೆ

ಹುಬ್ಬಳ್ಳಿ: ಯುವಕನೊಬ್ಬನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಇನ್​ಸ್ಟಾಗ್ರಾಮ್​ನಲ್ಲಿ ಬೈದು, ಮೆಸೇಜ್ ಹಾಕಿದ್ದ ಎಂಬ ಕಾರಣಕ್ಕೆ ರೌಡಿಗಳು ಯುವಕನ ಬಟ್ಟೆ ತೆಗೆಸಿದ್ದಾರೆ ಬಳಿಕ ಸರಿಯಾಗಿ ಹೊಡೆದಿದ್ದಾರೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್​ ಆಗಿದೆ.

ಸೆಟ್ಲಮೆಂಟ್ ಏರಿಯಾದ ರೌಡಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಸೆಟ್ಲಮೆಂಟ್ ಏರಿಯಾದ ಗಂಗಾಧರ ನಗರದ ಪ್ರಜ್ವಲ್ ಗಾಯಕವಾಡ, ಗಬ್ಬೂರಿನ ಜಸ್ಟೀನ್ ಮಂಜ್ಯಾ ಅಲಿಯಾಸ್ ಮಂಜುನಾಥ್ ಅಂಗಡಿ ಮತ್ತು ಮಂಜುನಾಥ್​ ಹಲ್ಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ. ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಬಳಿಕ ಪುಂಡರು ವಿಡಿಯೋವನ್ನು ಹರಿಬಿಟ್ಟಿದ್ದಾರೆ.

ಸದ್ಯ ಹರಿದಾಡುತ್ತಿರುವ ವಿಡಿಯೋದಲ್ಲಿ ಯುವಕ ಅಳುತ್ತಾ ಕೈ ಮುಗಿದು ಬೇಡಿಕೊಂಡರೂ ಕಿರಾತರು ಬಿಟ್ಟು ಬಿಡದೆ ಹೊಡೆದಿದ್ದಾರೆ. ಈ ಕೃತ್ಯದ ಕಿಂಗ್ ಪಿನ್ ಜಾದವ್ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More