newsfirstkannada.com

ಟಾಸ್​ ಗೆದ್ದ ಆರ್​​​ಸಿಬಿ ಕ್ಯಾಪ್ಟನ್​​​ ಫಾಫ್​​ ಮತ್ತೆ ತಪ್ಪು ಮಾಡಿದ್ರಾ? ಆ ನಿರ್ಧಾರ ಎಷ್ಟು ಸರಿ?

Share :

Published April 15, 2024 at 7:37pm

    ಇಂದು ಆರ್​​ಸಿಬಿ, ಸನ್​ರೈಸರ್ಸ್​ ಹೈದರಾಬಾದ್​​​ ಮಧ್ಯೆ ರೋಚಕ ಪಂದ್ಯ

    ಆರ್​​​ಸಿಬಿ ತಂಡದಿಂದ ಮ್ಯಾಕ್ಸ್​ವೆಲ್​​, ಮೊಹಮ್ಮದ್​ ಸಿರಾಜ್​​ಗೆ ಕೊಕ್​​..!

    ಟಾಸ್​​​ ಗೆದ್ದ ಆರ್​​ಸಿಬಿ ಕ್ಯಾಪ್ಟನ್​​ ಫಾಫ್​ ಡುಪ್ಲೆಸಿಸ್​ ನಿರ್ಧಾರ ಎಷ್ಟು ಸರಿ?

ಇಂದು ಇಂಡಿಯನ್​​ ಪ್ರೀಮಿಯರ್​​ ಲೀಗ್​​ 17ನೇ ಸೀಸನ್​​​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಈ ಐತಿಹಾಸಿಕ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ಸಾಕ್ಷಿಯಾಗುತ್ತಿದೆ.

ಇದು ಆರ್‌ಸಿಬಿಗೆ 7ನೇ ಪಂದ್ಯ ಮತ್ತು ಹೈದರಾಬಾದ್‌ಗೆ 6ನೇ ಪಂದ್ಯವಾಗಿದೆ. ಹೈದರಾಬಾದ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದ್ದು, 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಆರ್‌ಸಿಬಿ 6 ಪಂದ್ಯಗಳಲ್ಲಿ ಕೇವಲ 1 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿದೆ. ಹೀಗಾಗಿ ಆರ್​​​ಸಿಬಿ ಪ್ಲೇ ಆಫ್​ ಕನಸು ಜೀವಂತವಾಗಿರಲು ಈ ಮ್ಯಾಚ್​ ಗೆಲ್ಲಲೇಬೇಕಿದೆ.

ಇನ್ನು, ಪಂದ್ಯದ ಟಾಸ್​ ಗೆದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಕ್ಯಾಪ್ಟನ್​​ ಫಾಫ್​​ ಡುಪ್ಲೆಸಿಸ್ ಬೌಲಿಂಗ್​ ಆಯ್ದುಕೊಂಡಿದ್ದಾರೆ. ಹೀಗಾಗಿ ಹೈದರಾಬಾದ್​​​​ ಮೊದಲು ಬ್ಯಾಟಿಂಗ್​ ಮಾಡಲಿದೆ. ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇರೋ ಕಾರಣ ಚೇಸಿಂಗ್​ ನಿರ್ಧಾರ ಎಷ್ಟು ಸರಿ? ಅನ್ನೋ ಮಾತುಗಳು ಕೇಳಿ ಬಂದಿವೆ. ಮೊದಲ ಬ್ಯಾಟ್​ ಮಾಡಿ 250ಕ್ಕೂ ಹೆಚ್ಚು ರನ್​ ಟಾರ್ಗೆಟ್​​ ಸೆಟ್​​ ಮಾಡಬೇಕಿತ್ತು ಎಂದು ಹೇಳಲಾಗುತ್ತಿದೆ.

ಉಭಯ ತಂಡಗಳು ಹೀಗಿವೆ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವಿಜಯ್‌ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.

ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್‌ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ಟಿ.ನಟರಾಜನ್.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಟಾಸ್​ ಗೆದ್ದ ಆರ್​​​ಸಿಬಿ ಕ್ಯಾಪ್ಟನ್​​​ ಫಾಫ್​​ ಮತ್ತೆ ತಪ್ಪು ಮಾಡಿದ್ರಾ? ಆ ನಿರ್ಧಾರ ಎಷ್ಟು ಸರಿ?

https://newsfirstlive.com/wp-content/uploads/2024/04/FAF-1.jpg

    ಇಂದು ಆರ್​​ಸಿಬಿ, ಸನ್​ರೈಸರ್ಸ್​ ಹೈದರಾಬಾದ್​​​ ಮಧ್ಯೆ ರೋಚಕ ಪಂದ್ಯ

    ಆರ್​​​ಸಿಬಿ ತಂಡದಿಂದ ಮ್ಯಾಕ್ಸ್​ವೆಲ್​​, ಮೊಹಮ್ಮದ್​ ಸಿರಾಜ್​​ಗೆ ಕೊಕ್​​..!

    ಟಾಸ್​​​ ಗೆದ್ದ ಆರ್​​ಸಿಬಿ ಕ್ಯಾಪ್ಟನ್​​ ಫಾಫ್​ ಡುಪ್ಲೆಸಿಸ್​ ನಿರ್ಧಾರ ಎಷ್ಟು ಸರಿ?

ಇಂದು ಇಂಡಿಯನ್​​ ಪ್ರೀಮಿಯರ್​​ ಲೀಗ್​​ 17ನೇ ಸೀಸನ್​​​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಈ ಐತಿಹಾಸಿಕ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ಸಾಕ್ಷಿಯಾಗುತ್ತಿದೆ.

ಇದು ಆರ್‌ಸಿಬಿಗೆ 7ನೇ ಪಂದ್ಯ ಮತ್ತು ಹೈದರಾಬಾದ್‌ಗೆ 6ನೇ ಪಂದ್ಯವಾಗಿದೆ. ಹೈದರಾಬಾದ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದ್ದು, 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಆರ್‌ಸಿಬಿ 6 ಪಂದ್ಯಗಳಲ್ಲಿ ಕೇವಲ 1 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿದೆ. ಹೀಗಾಗಿ ಆರ್​​​ಸಿಬಿ ಪ್ಲೇ ಆಫ್​ ಕನಸು ಜೀವಂತವಾಗಿರಲು ಈ ಮ್ಯಾಚ್​ ಗೆಲ್ಲಲೇಬೇಕಿದೆ.

ಇನ್ನು, ಪಂದ್ಯದ ಟಾಸ್​ ಗೆದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಕ್ಯಾಪ್ಟನ್​​ ಫಾಫ್​​ ಡುಪ್ಲೆಸಿಸ್ ಬೌಲಿಂಗ್​ ಆಯ್ದುಕೊಂಡಿದ್ದಾರೆ. ಹೀಗಾಗಿ ಹೈದರಾಬಾದ್​​​​ ಮೊದಲು ಬ್ಯಾಟಿಂಗ್​ ಮಾಡಲಿದೆ. ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇರೋ ಕಾರಣ ಚೇಸಿಂಗ್​ ನಿರ್ಧಾರ ಎಷ್ಟು ಸರಿ? ಅನ್ನೋ ಮಾತುಗಳು ಕೇಳಿ ಬಂದಿವೆ. ಮೊದಲ ಬ್ಯಾಟ್​ ಮಾಡಿ 250ಕ್ಕೂ ಹೆಚ್ಚು ರನ್​ ಟಾರ್ಗೆಟ್​​ ಸೆಟ್​​ ಮಾಡಬೇಕಿತ್ತು ಎಂದು ಹೇಳಲಾಗುತ್ತಿದೆ.

ಉಭಯ ತಂಡಗಳು ಹೀಗಿವೆ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವಿಜಯ್‌ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.

ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್‌ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ಟಿ.ನಟರಾಜನ್.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More