ಮನೆಯಲ್ಲಿ ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ
ತಿಮ್ಮಕ್ಕನವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟಿರುವ ತಿಮ್ಮಕ್ಕ
ಬೆಂಗಳೂರು: ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಹೀಗಾಗಿ ಸಾಲುಮರದ ತಿಮ್ಮಕ್ಕನವರ ಬೆನ್ನು ಮೂಳೆಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಲುಮರದ ತಿಮ್ಮಕ್ಕನವರ ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಅಪೋಲೊ ವೈದ್ಯರು ಮಾಹಿತಿ ನೀಡಿದ್ದಾರೆ. ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕನವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ 8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಹೊಂದಿದ್ದಾರೆ. ಬೆಂಗಳೂರಿನ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮನೆಯಲ್ಲಿ ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ
ತಿಮ್ಮಕ್ಕನವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟಿರುವ ತಿಮ್ಮಕ್ಕ
ಬೆಂಗಳೂರು: ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಹೀಗಾಗಿ ಸಾಲುಮರದ ತಿಮ್ಮಕ್ಕನವರ ಬೆನ್ನು ಮೂಳೆಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಲುಮರದ ತಿಮ್ಮಕ್ಕನವರ ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಅಪೋಲೊ ವೈದ್ಯರು ಮಾಹಿತಿ ನೀಡಿದ್ದಾರೆ. ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕನವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ 8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಹೊಂದಿದ್ದಾರೆ. ಬೆಂಗಳೂರಿನ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ