Sabarimala; ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ

author-image
Bheemappa
Updated On
Sabarimala; ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ
Advertisment
  • 2025ರ ಜನವರಿ ಅಂತ್ಯದವರೆಗೆ ಶಬರಿಮಲೆಯ ತೀರ್ಥಯಾತ್ರೆ ಇರುತ್ತೆ
  • ದಕ್ಷಿಣ ಭಾರತದಿಂದ ಹೆಚ್ಚು ಭಕ್ತರು ಶಬರಿಮಲೆಗೆ ಪ್ರಯಾಣ ಮಾಡುತ್ತಾರೆ
  • ಅಯ್ಯಪ್ಪಸ್ವಾಮಿ ಭಕ್ತರಿಗೆ ಎಲ್ಲಿಂದ ಎಲ್ಲಿವರೆಗೆ ಈ ಅನುಮತಿ ಇರುತ್ತೆ?

ನವದೆಹಲಿ: ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ವಿಮಾನದ ಮೂಲಕ ಇರುಮುಡಿ ತೆಗೆದುಕೊಂಡು ಹೋಗಲು ಅನುಮತಿ ನೀಡಿದೆ. ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ವಿಮಾನದಲ್ಲಿ ಹೋಗಲು ಈ ಮೊದಲು ಅವಕಾಶ ಇರಲಿಲ್ಲ. ಆದರೆ ಈಗ ಇದಕ್ಕೆ ಅನುಮತಿ ನೀಡಲಾಗಿದೆ. ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಲು ಅವಕಾಶ ನೀಡಲಾಗಿದೆ. ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ಹೋಗುವಾಗ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗುತ್ತದೆ.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ದೋಸ್ತಿ ದರ್ಬಾರ್‌.. ನಿಖಿಲ್ ಪರ ಹೆಚ್​.ಡಿ ಕುಮಾರಸ್ವಾಮಿ, ಯದುವೀರ್ ಕ್ಯಾಂಪೇನ್

publive-image

ಎಕ್ಸ್-ರೇ, ಸ್ಕ್ಯಾನಿಂಗ್, ಇಟಿಡಿ ಹಾಗೂ ಭೌತಿಕ ತಪಾಸಣೆ ಹೀಗೆ ಭದ್ರತಾ ತಪಾಸಣೆಗಳನ್ನ ಮಾಡಿದ ನಂತರ ಇರುಮುಡಿ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗುತ್ತದೆ. 2025ರ ಜನವರಿ ಅಂತ್ಯದವರೆಗೆ ತೀರ್ಥಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವು ತೆರೆದಿರುತ್ತದೆ. ಈವರೆಗೆ ಮಾತ್ರ ಭಕ್ತರಿಗೆ ಅವಕಾಶ ಇರುತ್ತದೆ ಎಂದು ತಿಳಿಸಲಾಗಿದೆ.

ಈ ಬಗ್ಗೆ ಎಕ್ಸ್​ ಖಾತೆಯಲ್ಲಿ ಮಾತನಾಡಿರುವ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು, ವಿಮಾನ ಮೂಲಕ ಅಯ್ಯಪ್ಪ ಸ್ವಾಮಿ ಭಕ್ತರು ಪ್ರಯಾಣ ಮಾಡುವಾಗ ನಿಯಮದಂತೆ ಇರುಮುಡಿಯನ್ನು ಕೈಯಿಂದ ತೆಗೆದುಕೊಂಡು ಹೋಗಲು ಅನುಮತಿ ಇರಲಿಲ್ಲ. ಆದರೆ ಈಗ ಇರುಮುಡಿಯನ್ನು ಭಕ್ತರು ಕೈಯಲ್ಲೇ ಹಿಡಿದುಕೊಂಡು ವಿಮಾನದಲ್ಲಿ ಪ್ರಯಾಣಿಸಬಹುದು. ಈ ಅನುಮತಿಯು ಇಂದಿನಿಂದ 2025ರ ಜನವರಿವರೆಗೆ ಇರುತ್ತದೆ. ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಅವಧಿಯಲ್ಲಿ ಇರುಮುಡಿಯಲ್ಲಿ ತೆಂಗಿನಕಾಯಿ ಸಾಗಿಸಲು ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.


">October 26, 2024

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ದಕ್ಷಿಣ ಭಾರತದ ಹಲವಾರು ಭಕ್ತಾದಿಗಳು ದೇವರಿಗೆ ಸಮರ್ಪಿಸಲು ತಮ್ಮ ಜೊತೆಗೆ ಇರುಮುಡಿ ಕಟ್ಟನ್ನು ತೆಗೆದುಕೊಂಡು ಬರುತ್ತಾರೆ. ಹಾಗಾಗಿ ಭಕ್ತಾದಿಗಳ ಅನುಕೂಲಕ್ಕೆಂದು ನಿಗದಿತ ಅವಧಿಯವರೆಗೆ ಮಾತ್ರ ಈ ವಿಶೇಷವಾದ ಅನುಮತಿ ಕೇಂದ್ರ ಸರ್ಕಾರ ನೀಡಿದೆ ಎಂದು ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment