ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಶುರು
ಆಸೀಸ್, ಟೀಂ ಇಂಡಿಯಾ ಆಟಗಾರರನ್ನು ಹೊಗಳಿದ ಸಚಿನ್
ಈ ಆಟಗಾರ ಟೀಂ ಇಂಡಿಯಾದ ಪ್ರಮುಖ ಆಸ್ತಿ ಎಂದ ಮಾಸ್ಟರ್!
ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯ ಶುರುವಾಗಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಕ್ಕಾಗಿ ಸೆಣೆಸಾಟ ನಡೆಸುತ್ತಿವೆ. ಈಗಾಗಲೇ ಟೀಂ ಇಂಡಿಯಾ ಟಾಸ್ ಗೆದ್ದಿದ್ದು, ಆಸ್ಟ್ರೇಲಿಯಾ ತಂಡ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ. ಹೀಗಿರುವಾಗ ಟೀಂ ಇಂಡಿಯಾದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ಸಚಿನ್, ಇಂಗ್ಲೆಂಡ್ನಲ್ಲಿ ಕೌಂಟಿ ಚಾಂಫಿಯನ್ಶಿಪ್ನಲ್ಲಿ ಭಾಗಿಯಾಗಿದ್ದ ಚೇತೇಶ್ವರ್ ಪೂಜಾರ ಅನುಭವ ಈ ಪಂದ್ಯದಲ್ಲಿ ಮಹತ್ವದ ಪಡೆದುಕೊಳ್ಳಲಿದೆ. ಆಸ್ಟ್ರೇಲಿಯಾ ತಂಡದ ಮಾರ್ನಸ್ ಲ್ಯಾಬುಶೈನ್ ಕೂಡ ಕೌಂಟಿ ಟೂರ್ನಿಯಲ್ಲಿ ಆಡಿದ್ದರು. ಹೀಗಾಗಿ ಎರಡು ತಂಡಗಳಿಗೂ ಈ ಇಬ್ಬರು ಆಟಗಾರರ ಅನುಭವ ಬಹಳ ಮುಖ್ಯ ಎಂದರು.
ಕೌಂಟಿ ಕ್ರಿಕೆಟ್ನಲ್ಲಿ ಆಡುವುದು ಅಷ್ಟು ಸುಲಭದ ಮಾತಲ್ಲ. ಚೇತೇಶ್ವರ್ ಪೂಜಾರ, ಮಾರ್ನಸ್ ಲ್ಯಾಬುಶೈನ್ ಇಬ್ಬರು ಕೌಂಟಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸ್ಟೀವ್ ಸ್ಮಿತ್ ಆಡಿದ್ರೂ ಅಂಥಹ ಹೇಳಿಕೊಳ್ಳುವ ಪ್ರದರ್ಶನವೇನು ಬರಲಿಲ್ಲ. ಆದರೆ, ಈ ಪಂದ್ಯದಲ್ಲಿ ಪೂಜಾರ, ಲ್ಯಾಬುಶೈನ್ ಇಬ್ಬರು ಅದ್ಭುತ ಪ್ರದರ್ಶನ ನೀಡುವುದರಲ್ಲಿ ಡೌಟೇ ಇಲ್ಲ ಎಂದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಶುರು
ಆಸೀಸ್, ಟೀಂ ಇಂಡಿಯಾ ಆಟಗಾರರನ್ನು ಹೊಗಳಿದ ಸಚಿನ್
ಈ ಆಟಗಾರ ಟೀಂ ಇಂಡಿಯಾದ ಪ್ರಮುಖ ಆಸ್ತಿ ಎಂದ ಮಾಸ್ಟರ್!
ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯ ಶುರುವಾಗಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಕ್ಕಾಗಿ ಸೆಣೆಸಾಟ ನಡೆಸುತ್ತಿವೆ. ಈಗಾಗಲೇ ಟೀಂ ಇಂಡಿಯಾ ಟಾಸ್ ಗೆದ್ದಿದ್ದು, ಆಸ್ಟ್ರೇಲಿಯಾ ತಂಡ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ. ಹೀಗಿರುವಾಗ ಟೀಂ ಇಂಡಿಯಾದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತಾಡಿದ ಸಚಿನ್, ಇಂಗ್ಲೆಂಡ್ನಲ್ಲಿ ಕೌಂಟಿ ಚಾಂಫಿಯನ್ಶಿಪ್ನಲ್ಲಿ ಭಾಗಿಯಾಗಿದ್ದ ಚೇತೇಶ್ವರ್ ಪೂಜಾರ ಅನುಭವ ಈ ಪಂದ್ಯದಲ್ಲಿ ಮಹತ್ವದ ಪಡೆದುಕೊಳ್ಳಲಿದೆ. ಆಸ್ಟ್ರೇಲಿಯಾ ತಂಡದ ಮಾರ್ನಸ್ ಲ್ಯಾಬುಶೈನ್ ಕೂಡ ಕೌಂಟಿ ಟೂರ್ನಿಯಲ್ಲಿ ಆಡಿದ್ದರು. ಹೀಗಾಗಿ ಎರಡು ತಂಡಗಳಿಗೂ ಈ ಇಬ್ಬರು ಆಟಗಾರರ ಅನುಭವ ಬಹಳ ಮುಖ್ಯ ಎಂದರು.
ಕೌಂಟಿ ಕ್ರಿಕೆಟ್ನಲ್ಲಿ ಆಡುವುದು ಅಷ್ಟು ಸುಲಭದ ಮಾತಲ್ಲ. ಚೇತೇಶ್ವರ್ ಪೂಜಾರ, ಮಾರ್ನಸ್ ಲ್ಯಾಬುಶೈನ್ ಇಬ್ಬರು ಕೌಂಟಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸ್ಟೀವ್ ಸ್ಮಿತ್ ಆಡಿದ್ರೂ ಅಂಥಹ ಹೇಳಿಕೊಳ್ಳುವ ಪ್ರದರ್ಶನವೇನು ಬರಲಿಲ್ಲ. ಆದರೆ, ಈ ಪಂದ್ಯದಲ್ಲಿ ಪೂಜಾರ, ಲ್ಯಾಬುಶೈನ್ ಇಬ್ಬರು ಅದ್ಭುತ ಪ್ರದರ್ಶನ ನೀಡುವುದರಲ್ಲಿ ಡೌಟೇ ಇಲ್ಲ ಎಂದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ