ಬಿಜೆಪಿಯಿಂದ ಸ್ಪರ್ಧಿಸಿದ ಭಗವಂತ ಖೂಬಾಗೆ ಸೋಲಿನ ರುಚಿ
26 ವರ್ಷದ ಯುವಕನಿಂದ ಸೋಲುಂಡ ಭಗವಂತ ಖೂಬಾ
ದೇಶದ ಕಿರಿಯ ಸಂಸದನಾದ ಈಶ್ವರ್ ಖಂಡ್ರೆ ಮಗ ಸಾಗರ್
ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ ಅವರು ಬಿಜೆಪಿ ಹಾಲಿ ಸಂಸದ ಭಗವಂತ ಖೂಬಾಗೆ ಸೋಲಿನ ರುಚಿ ತೋರಿಸಿದ್ದಾರೆ. ಆ ಮೂಲಕ ದೇಶದ ಕಿರಿಯ ಸಂಸದ ಎಂಬ ಹೆಗ್ಗಳಿಗೂ ಪಾತ್ರರಾಗಿದ್ದಾರೆ. 26ನೇ ವಯಸ್ಸಿಗೆ ಸಾಗರ್ ಖಂಡ್ರೆ ಸಂಸತ್ ಪ್ರವೇಶಿಸಿದ್ದಾರೆ.
ಬಿಜೆಪಿ ಭದ್ರಕೋಟೆಯಾದ ಬೀದರ್ ಅನ್ನು ಲೋಕಸಭಾ ಚುನಾವಣೆಯ ಮೂಲಕ ಖಂಡ್ರೆ ಮಗ ಛಿದ್ರಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ 665162 ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಭಗವಂತ ಖೂಬಾ 129396 ಮತಗಳಿಂದ ಸೋಲುಂಡಿದ್ದಾರೆ.
ಇದನ್ನೂ ಓದಿ: ನೂತನ MP ಯದುವೀರ್ ಒಡೆಯರ್ಗೆ ಅಭಿನಂದನೆ ಸಲ್ಲಿಸಿದ ಪ್ರತಾಪ್ ಸಿಂಹ.. ಮೈಸೂರಲ್ಲಿ ಸಂಭ್ರಮ ಭಾರೀ ಜೋರು
ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಗರ್ ಖಂಡ್ರೆ ವಿರುದ್ಧ ವ್ಯಂಗ್ಯ ನುಡಿದಿದ್ದರು. ಆತ ಅನುಭವ ಇಲ್ಲದ ಹುಡುಗ. ಆತ ಗೆದ್ದರೆ ಸ್ಕೂಲ್ ಬ್ಯಾಗ್, ಬುಕ್ ಹಿಡಿದುಕೊಂಡು ಕರೆದುಕೊಂಡು ಬರಲು ಒಬ್ಬರು ಬೇಕು ಎಂದು ಹೇಳಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಜೆಪಿಯಿಂದ ಸ್ಪರ್ಧಿಸಿದ ಭಗವಂತ ಖೂಬಾಗೆ ಸೋಲಿನ ರುಚಿ
26 ವರ್ಷದ ಯುವಕನಿಂದ ಸೋಲುಂಡ ಭಗವಂತ ಖೂಬಾ
ದೇಶದ ಕಿರಿಯ ಸಂಸದನಾದ ಈಶ್ವರ್ ಖಂಡ್ರೆ ಮಗ ಸಾಗರ್
ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ ಅವರು ಬಿಜೆಪಿ ಹಾಲಿ ಸಂಸದ ಭಗವಂತ ಖೂಬಾಗೆ ಸೋಲಿನ ರುಚಿ ತೋರಿಸಿದ್ದಾರೆ. ಆ ಮೂಲಕ ದೇಶದ ಕಿರಿಯ ಸಂಸದ ಎಂಬ ಹೆಗ್ಗಳಿಗೂ ಪಾತ್ರರಾಗಿದ್ದಾರೆ. 26ನೇ ವಯಸ್ಸಿಗೆ ಸಾಗರ್ ಖಂಡ್ರೆ ಸಂಸತ್ ಪ್ರವೇಶಿಸಿದ್ದಾರೆ.
ಬಿಜೆಪಿ ಭದ್ರಕೋಟೆಯಾದ ಬೀದರ್ ಅನ್ನು ಲೋಕಸಭಾ ಚುನಾವಣೆಯ ಮೂಲಕ ಖಂಡ್ರೆ ಮಗ ಛಿದ್ರಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ 665162 ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಭಗವಂತ ಖೂಬಾ 129396 ಮತಗಳಿಂದ ಸೋಲುಂಡಿದ್ದಾರೆ.
ಇದನ್ನೂ ಓದಿ: ನೂತನ MP ಯದುವೀರ್ ಒಡೆಯರ್ಗೆ ಅಭಿನಂದನೆ ಸಲ್ಲಿಸಿದ ಪ್ರತಾಪ್ ಸಿಂಹ.. ಮೈಸೂರಲ್ಲಿ ಸಂಭ್ರಮ ಭಾರೀ ಜೋರು
ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಗರ್ ಖಂಡ್ರೆ ವಿರುದ್ಧ ವ್ಯಂಗ್ಯ ನುಡಿದಿದ್ದರು. ಆತ ಅನುಭವ ಇಲ್ಲದ ಹುಡುಗ. ಆತ ಗೆದ್ದರೆ ಸ್ಕೂಲ್ ಬ್ಯಾಗ್, ಬುಕ್ ಹಿಡಿದುಕೊಂಡು ಕರೆದುಕೊಂಡು ಬರಲು ಒಬ್ಬರು ಬೇಕು ಎಂದು ಹೇಳಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ