newsfirstkannada.com

CCTV Video: ಮರಳು ತುಂಬಿದ್ದ ಲಾರಿ ಡಿಕ್ಕಿ; ಬೈಕ್​ ಸವಾರ ಸಾವು, ಚಾಲಕ ಪರಾರಿ

Share :

30-06-2023

    ರಸ್ತೆ ದಾಟುವ ವೇಳೆ ಬೈಕ್​ಗೆ ಗುದ್ದಿದ ಲಾರಿ

    ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ ಬೈಕ್ ಸವಾರ

    ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಲಾರಿ ಚಾಲಕ ಪರಾರಿ

 

ಯಾದಗಿರಿ: ಬೈಕ್ ಗೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದಿದೆ.

ಬೈಕ್​ ಸವಾರ ಮುದುಕಪ್ಪ ಅಡ್ಡಲಾಗಿ ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್​ ಗುದ್ದಿದ ರಭಸಕ್ಕೆ ಸವಾರ ಬೈಕ್​ನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಾವನ್ನಪ್ಪಿದ ಮುದುಕಪ್ಪ ಹುಣಸಗಿ ಪಟ್ಟಣದ ನಿವಾಸಿಯಾಗಿದ್ದು, ಕೆಲಸ ನಿಮಿತ್ಯ ರಸ್ತೆ ಕ್ರಾಸ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟಿಪ್ಪರ್ ಚಾಲಕ ಮುದುಕಪ್ಪನಿಗೆ ಗುದ್ದಿ ಪರಾರಿಯಾಗಿದ್ದಾನೆ. ಇನ್ನು ಟಿಪ್ಪರ್ ಡಿಕ್ಕಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಣಸಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CCTV Video: ಮರಳು ತುಂಬಿದ್ದ ಲಾರಿ ಡಿಕ್ಕಿ; ಬೈಕ್​ ಸವಾರ ಸಾವು, ಚಾಲಕ ಪರಾರಿ

https://newsfirstlive.com/wp-content/uploads/2023/06/Yadagiri.jpg

    ರಸ್ತೆ ದಾಟುವ ವೇಳೆ ಬೈಕ್​ಗೆ ಗುದ್ದಿದ ಲಾರಿ

    ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ ಬೈಕ್ ಸವಾರ

    ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಲಾರಿ ಚಾಲಕ ಪರಾರಿ

 

ಯಾದಗಿರಿ: ಬೈಕ್ ಗೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದಿದೆ.

ಬೈಕ್​ ಸವಾರ ಮುದುಕಪ್ಪ ಅಡ್ಡಲಾಗಿ ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್​ ಗುದ್ದಿದ ರಭಸಕ್ಕೆ ಸವಾರ ಬೈಕ್​ನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಾವನ್ನಪ್ಪಿದ ಮುದುಕಪ್ಪ ಹುಣಸಗಿ ಪಟ್ಟಣದ ನಿವಾಸಿಯಾಗಿದ್ದು, ಕೆಲಸ ನಿಮಿತ್ಯ ರಸ್ತೆ ಕ್ರಾಸ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟಿಪ್ಪರ್ ಚಾಲಕ ಮುದುಕಪ್ಪನಿಗೆ ಗುದ್ದಿ ಪರಾರಿಯಾಗಿದ್ದಾನೆ. ಇನ್ನು ಟಿಪ್ಪರ್ ಡಿಕ್ಕಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಣಸಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More