newsfirstkannada.com

ಬರ್ತ್​​ ಡೇ ಖುಷಿಯಲ್ಲಿ ನಿಖಿಲ್​; ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸುತ್ತಿರೋದು ನನ್ನ ಪುಣ್ಯ ಎಂದ ‘ಯುವರಾಜ’​

Share :

Published January 22, 2024 at 11:46am

Update January 22, 2024 at 3:12pm

    ಸ್ಯಾಂಡಲ್​ವುಡ್ ಯುವರಾಜನಿಗಿಂದು ಹುಟ್ಟುಹಬ್ಬದ ಸಂಭ್ರಮ

    ಕುಟುಂಬದವರೊಂದಿಗೆ ಅಯೋಧ್ಯೆಯಲ್ಲಿರುವ ನಿಖಿಲ್​ ಕುಮಾರ್​

    ರಾಮಲಲ್ಲಾ ಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಳ್ಳಲಿರುವ ದೇವೇಗೌಡ ಫ್ಯಾಮಿಲಿ

ಸ್ಯಾಂಡಲ್​ವುಡ್​ ಯುವರಾಜ ನಿಖಿಲ್​ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸದ್ಯ ಆಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿರುವ ಯುವರಾಜ. ಕುಟುಂಬದವರೊಂದಿಗೆ ರಾಮಲಲ್ಲಾ ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ಅಯೋಧ್ಯೆಯಲ್ಲೇ ಜನ್ಮ ದಿನವನ್ನ ಆಚರಿಸಿಕೊಂಡಿದ್ದಾರೆ.

ನಿಖಿಲ್​​ ಕುಮಾರಸ್ವಾಮಿಯವರು ತಂದೆ, ಅಜ್ಜ, ಅಜ್ಜಿ ಕಾಲಿಗೆ ನಮಸ್ಕರಿಸುವ ಮೂಲಕ ಕೇಕ್​ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಟ್ಟುಹಬ್ಬದ ವಿಶೇಷ ದಿನದಂದು ಮಾತನಾಡಿದ ನಿಖಿಲ್​ ಕುಮಾರಸ್ವಾಮಿ, ‘‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು ನನ್ನ ಪುಣ್ಯ. ಈ ಸಂತೋಷದ ಗಳಿಗೆಯಲ್ಲಿ ‌ತಂದೆಯವರಾದ ಕುಮಾರಸ್ವಾಮಿ ಹಾಗೂ ತಾತ ದೇವೇಗೌಡ ಮತ್ತು ಅಜ್ಜಿ ಚೆನ್ನಮ್ಮ ಜೊತೆಯಲ್ಲಿದ್ದಿದ್ದು ಸಂಭ್ರಮ ಮತ್ತಷ್ಟು ಹೆಚ್ಚಿಸಿದೆ’’ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚೆನ್ನಮ್ಮ, ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಮಗ ನಿಖಿಲ್​ ಕುಮಾರಸ್ವಾಮಿ ನಿನ್ನೆ ಅಯೋಧ್ಯೆಗೆ ಹೋಗಿದ್ದಾರೆ. ವಿಶೇಷ ವಿಮಾನದ ಮೂಲಕ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ದೇವೇಗೌಡರ ಫ್ಯಾಮಿಲಿ ದೈವಭಕ್ತರಾಗಿದ್ದು, ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಇಂದು ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬರ್ತ್​​ ಡೇ ಖುಷಿಯಲ್ಲಿ ನಿಖಿಲ್​; ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸುತ್ತಿರೋದು ನನ್ನ ಪುಣ್ಯ ಎಂದ ‘ಯುವರಾಜ’​

https://newsfirstlive.com/wp-content/uploads/2024/01/Nihkil.jpg

    ಸ್ಯಾಂಡಲ್​ವುಡ್ ಯುವರಾಜನಿಗಿಂದು ಹುಟ್ಟುಹಬ್ಬದ ಸಂಭ್ರಮ

    ಕುಟುಂಬದವರೊಂದಿಗೆ ಅಯೋಧ್ಯೆಯಲ್ಲಿರುವ ನಿಖಿಲ್​ ಕುಮಾರ್​

    ರಾಮಲಲ್ಲಾ ಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಳ್ಳಲಿರುವ ದೇವೇಗೌಡ ಫ್ಯಾಮಿಲಿ

ಸ್ಯಾಂಡಲ್​ವುಡ್​ ಯುವರಾಜ ನಿಖಿಲ್​ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸದ್ಯ ಆಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿರುವ ಯುವರಾಜ. ಕುಟುಂಬದವರೊಂದಿಗೆ ರಾಮಲಲ್ಲಾ ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ಅಯೋಧ್ಯೆಯಲ್ಲೇ ಜನ್ಮ ದಿನವನ್ನ ಆಚರಿಸಿಕೊಂಡಿದ್ದಾರೆ.

ನಿಖಿಲ್​​ ಕುಮಾರಸ್ವಾಮಿಯವರು ತಂದೆ, ಅಜ್ಜ, ಅಜ್ಜಿ ಕಾಲಿಗೆ ನಮಸ್ಕರಿಸುವ ಮೂಲಕ ಕೇಕ್​ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಟ್ಟುಹಬ್ಬದ ವಿಶೇಷ ದಿನದಂದು ಮಾತನಾಡಿದ ನಿಖಿಲ್​ ಕುಮಾರಸ್ವಾಮಿ, ‘‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು ನನ್ನ ಪುಣ್ಯ. ಈ ಸಂತೋಷದ ಗಳಿಗೆಯಲ್ಲಿ ‌ತಂದೆಯವರಾದ ಕುಮಾರಸ್ವಾಮಿ ಹಾಗೂ ತಾತ ದೇವೇಗೌಡ ಮತ್ತು ಅಜ್ಜಿ ಚೆನ್ನಮ್ಮ ಜೊತೆಯಲ್ಲಿದ್ದಿದ್ದು ಸಂಭ್ರಮ ಮತ್ತಷ್ಟು ಹೆಚ್ಚಿಸಿದೆ’’ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚೆನ್ನಮ್ಮ, ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಮಗ ನಿಖಿಲ್​ ಕುಮಾರಸ್ವಾಮಿ ನಿನ್ನೆ ಅಯೋಧ್ಯೆಗೆ ಹೋಗಿದ್ದಾರೆ. ವಿಶೇಷ ವಿಮಾನದ ಮೂಲಕ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ದೇವೇಗೌಡರ ಫ್ಯಾಮಿಲಿ ದೈವಭಕ್ತರಾಗಿದ್ದು, ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಇಂದು ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More